AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್​, ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಕನ್ನಡಿಗರಿಗೆ ಸಿಗಲಿವೆ: ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಕೊವಿಶೀಲ್ಡ್​, ಕೊವ್ಯಾಕ್ಸಿನ್​ ಎರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ, ಲಸಿಕೆ ಪಡೆಯುವವರು ಇಂಥದ್ದೇ ಲಸಿಕೆ ಬೇಕೆಂದು ಕೇಳುವಂತಿಲ್ಲ.

ಕೊವಿಶೀಲ್ಡ್​, ಕೊವ್ಯಾಕ್ಸಿನ್ ಎರಡೂ ಲಸಿಕೆಗಳು ಕನ್ನಡಿಗರಿಗೆ ಸಿಗಲಿವೆ: ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್​
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 13, 2021 | 6:36 PM

Share

ಬೆಂಗಳೂರು: ಕೊರೊನಾ ಲಸಿಕೆ ಹಂಚಿಕೆಗೆ ಇಡೀ ದೇಶವೇ ಸಜ್ಜಾಗಿದೆ. ಈಗಾಗಲೇ ಎಲ್ಲಾ ರಾಜ್ಯಗಳಿಗೂ ಲಸಿಕೆ ತಲುಪಿಸುವ ವ್ಯವಸ್ಥೆ ಆಗುತ್ತಿದ್ದು, ಜನವರಿ 16ರಿಂದ ವಿತರಣೆ ಕಾರ್ಯ ಆರಂಭವಾಗಲಿದೆ. ಆದರೆ, ಅನುಮತಿ ಗಿಟ್ಟಿಸಿಕೊಂಡಿರುವ 2 ಲಸಿಕೆಗಳ ಪೈಕಿ ಕರ್ನಾಟಕಕ್ಕೆ ಯಾವುದು ಬರಲಿದೆ? ಎರಡೂ ಲಸಿಕೆಗಳು ಏಕಕಾಲಕ್ಕೆ ಲಭ್ಯವಾಗುವುದಿಲ್ಲವೇ? ಎಂಬ ಗೊಂದಲವೆದ್ದಿತ್ತು.

ಈ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜ್ಯಕ್ಕೆ ಕೊವಿಶೀಲ್ಡ್​ ಮಾತ್ರವಲ್ಲದೇ ಕೊವ್ಯಾಕ್ಸಿನ್​ ಲಸಿಕೆಯ 20 ಸಾವಿರ ಡೋಸ್ ಬರಲಿದೆ. ರಾಜ್ಯದಲ್ಲಿ ಇವೆರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ, ಲಸಿಕೆ ಪಡೆಯುವವರು ಇಂಥದ್ದೇ ಲಸಿಕೆ ಬೇಕೆಂದು ಕೇಳುವಂತಿಲ್ಲ ಎಂದು ತಿಳಿಸಿದ್ದಾರೆ.

ಕೋವ್ಯಾಕ್ಸಿನ್ ಒಂದು ಸೀಸೆಯಲ್ಲಿ 10 ಎಂಎಲ್ ಲಸಿಕೆ ಇರಲಿದೆ. ಕೋವಿಶೀಲ್ಡ್ ಒಂದು ಸೀಸೆಯಲ್ಲಿ 5 ಎಂಎಲ್ ಇದೆ. ಒಂದು ಸೀಸೆ ಕೋವ್ಯಾಕ್ಸಿನ್ ಲಸಿಕೆಯಿಂದ 20 ಡೋಸ್​ ಸಿಗಲಿದೆ ಅಂದರೆ ಒಂದು ಸೀಸೆಯಿಂದ ಮಂದಿಗೆ ಲಸಿಕೆ ನೀಡಬಹುದು. ಪ್ರಮಾಣದಲ್ಲಿ ವ್ಯತ್ಯಾಸವಿರುತ್ತದೆ ಎಂಬುದನ್ನು ಹೊರತುಪಡಿಸಿದರೆ ಎರಡು ಲಸಿಕೆಗಳ ನಡುವೆ ಬೇರೇನೂ ವ್ಯತ್ಯಾಸ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಯಾವ ಜಿಲ್ಲೆಗಳಿಗೆ ಎಷ್ಟು ಲಸಿಕೆ ನೀಡಬೇಕು, ಯಾವ ಸಿಬ್ಬಂದಿಗೆ ನೀಡಬೇಕು ಮೊದಲಾದ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ. ಜನವರಿ 16 ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ. ಎಲ್ಲ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗುತ್ತಿದೆ. ಈ ವಿಚಾರವಾಗಿ ಎಲ್ಲರಿಗೂ ಸ್ಪಷ್ಟ ಮಾಹಿತಿ ಇದೆ ಎಂದು ಹೇಳಿದ್ದಾರೆ.

BBMPಗೆ 1.05 ಲಕ್ಷ ಕೊವಿಶೀಲ್ಡ್ ಲಸಿಕೆ ಹಸ್ತಾಂತರ

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್