AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ

ಬೆಂಗಳೂರಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ.

ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ
ಟೆಕ್ಕಿ ಯುವತಿ, ಆದಿತ್ಯ ಸಿಂಗ್
Shivaprasad B
| Edited By: |

Updated on: Apr 14, 2024 | 4:55 PM

Share

ಬೆಂಗಳೂರು, ಏಪ್ರಿಲ್​ 14: ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ (Fraud) ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಮೂಲಕ ನಗರದಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಆದಿತ್ಯ ಸಿಂಗ್ ಎಂಬಾತ ವಂಚಿಸಿದ್ದಾನೆ. ಜಿಮ್​ನಲ್ಲಿ ಯುವತಿಗೆ ಆದಿತ್ಯ ಸಿಂಗ್ ಪರಿಚಯ ಆಗಿದ್ದ. ಬಳಿಕ ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದರು.

ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ. ಸದ್ಯ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ, ಪತ್ನಿಯ ಕೊಲೆ: ಪತಿ ಅರೆಸ್ಟ್

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ ಹೆಂಡತಿ‌ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರಿನ HAL ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ನಡೆದಿದೆ. ಏ.12ರಂದು ಪತಿ ನವೀನ್​ನಿಂದಲೇ ಪತ್ನಿ ಗಿರಿಜಾ(30) ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸಾವು; ಮನೆ ಮಗನನ್ನ ಕಳೆದುಕೊಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಎಂಟು ತಿಂಗಳ ಹಿಂದೆಯಷ್ಟೇ ಗಿರಿಜಾ, ನವೀನ್ ಮದುವೆ ಆಗಿತ್ತು. ಗರ್ಭಪಾತ ಆಗಿದ್ದರಿಂದ ಸದ್ಯಕ್ಕೆ ಮಗು ಬೇಡ ಎಂದು ಗಿರಿಜಾ ಹೇಳಿದ್ದಾರೆ. ಸದ್ಯ ಆರೋಪಿ ನವೀನ್​ನನ್ನು HAL ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ವಡಗೇರ ತಾಲೂಕಿನ ಗೋಡಿಹಾಳ ಗ್ರಾಮದ ಬಳಿ ವಿದ್ಯುತ್ ಸ್ಪರ್ಶಿಸಿ ಹೊರಟೂರು ಗ್ರಾಮದ ರೈತ ಮರೆಪ್ಪ(43) ಎಂಬಾತ ಸಾವನ್ನಪ್ಪಿದ್ದಾನೆ. ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗಲು ಗೋಡಿಹಾಳ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು: ಪ್ರೀತಿಸಿದವಳನ್ನೇ ಕೊಲೆ ಮಾಡಿದ ಪ್ರಿಯತಮ; ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

ಸ್ಥಳಕ್ಕೆ‌ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ರೈತನ ಕುಟುಂಬಕ್ಕೆ ವೈಯಕ್ತಿಕ ಆರ್ಥಿಕ ನೆರವು ನೀಡಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ