AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ

ಬೆಂಗಳೂರಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ.

ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ
ಟೆಕ್ಕಿ ಯುವತಿ, ಆದಿತ್ಯ ಸಿಂಗ್
Shivaprasad B
| Edited By: |

Updated on: Apr 14, 2024 | 4:55 PM

Share

ಬೆಂಗಳೂರು, ಏಪ್ರಿಲ್​ 14: ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ (Fraud) ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಮೂಲಕ ನಗರದಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಆದಿತ್ಯ ಸಿಂಗ್ ಎಂಬಾತ ವಂಚಿಸಿದ್ದಾನೆ. ಜಿಮ್​ನಲ್ಲಿ ಯುವತಿಗೆ ಆದಿತ್ಯ ಸಿಂಗ್ ಪರಿಚಯ ಆಗಿದ್ದ. ಬಳಿಕ ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದರು.

ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ. ಸದ್ಯ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ, ಪತ್ನಿಯ ಕೊಲೆ: ಪತಿ ಅರೆಸ್ಟ್

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ ಹೆಂಡತಿ‌ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರಿನ HAL ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ನಡೆದಿದೆ. ಏ.12ರಂದು ಪತಿ ನವೀನ್​ನಿಂದಲೇ ಪತ್ನಿ ಗಿರಿಜಾ(30) ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸಾವು; ಮನೆ ಮಗನನ್ನ ಕಳೆದುಕೊಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಎಂಟು ತಿಂಗಳ ಹಿಂದೆಯಷ್ಟೇ ಗಿರಿಜಾ, ನವೀನ್ ಮದುವೆ ಆಗಿತ್ತು. ಗರ್ಭಪಾತ ಆಗಿದ್ದರಿಂದ ಸದ್ಯಕ್ಕೆ ಮಗು ಬೇಡ ಎಂದು ಗಿರಿಜಾ ಹೇಳಿದ್ದಾರೆ. ಸದ್ಯ ಆರೋಪಿ ನವೀನ್​ನನ್ನು HAL ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ವಡಗೇರ ತಾಲೂಕಿನ ಗೋಡಿಹಾಳ ಗ್ರಾಮದ ಬಳಿ ವಿದ್ಯುತ್ ಸ್ಪರ್ಶಿಸಿ ಹೊರಟೂರು ಗ್ರಾಮದ ರೈತ ಮರೆಪ್ಪ(43) ಎಂಬಾತ ಸಾವನ್ನಪ್ಪಿದ್ದಾನೆ. ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗಲು ಗೋಡಿಹಾಳ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು: ಪ್ರೀತಿಸಿದವಳನ್ನೇ ಕೊಲೆ ಮಾಡಿದ ಪ್ರಿಯತಮ; ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

ಸ್ಥಳಕ್ಕೆ‌ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ರೈತನ ಕುಟುಂಬಕ್ಕೆ ವೈಯಕ್ತಿಕ ಆರ್ಥಿಕ ನೆರವು ನೀಡಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ