ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ

ಬೆಂಗಳೂರಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ.

ಬೆಂಗಳೂರಿನಲ್ಲೊಂದು ಲವ್ ಸೆಕ್ಸ್ ದೋಖಾ: ಮದ್ವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಕೈಕೊಟ್ಟ ಯುವಕ
ಟೆಕ್ಕಿ ಯುವತಿ, ಆದಿತ್ಯ ಸಿಂಗ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 14, 2024 | 4:55 PM

ಬೆಂಗಳೂರು, ಏಪ್ರಿಲ್​ 14: ಮದುವೆ ಆಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕ ವಂಚನೆ (Fraud) ಮಾಡಿರುವಂತಹ ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಮೂಲಕ ನಗರದಲ್ಲೊಂದು ಲವ್ ಸೆಕ್ಸ್ ದೋಖಾ ಪ್ರಕರಣ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27 ವರ್ಷದ ಯುವತಿಗೆ ಆದಿತ್ಯ ಸಿಂಗ್ ಎಂಬಾತ ವಂಚಿಸಿದ್ದಾನೆ. ಜಿಮ್​ನಲ್ಲಿ ಯುವತಿಗೆ ಆದಿತ್ಯ ಸಿಂಗ್ ಪರಿಚಯ ಆಗಿದ್ದ. ಬಳಿಕ ಲಿವಿಂಗ್ ರಿಲೇಷನ್​ಶಿಪ್​​ನಲ್ಲಿದ್ದರು.

ಮದುವೆ ಆಗುವಂತೆ ಯುವತಿ ಕೇಳಿದ್ದಕ್ಕೆ ಆದಿತ್ಯ ಸಿಂಗ್​​ ನಿರಾಕರಿಸಿದ್ದು, ಯುವತಿ ಮೇಲೆ ಹಲ್ಲೆ, ಚಾಕುವಿನಿಂದ ಇರಿದು ಗೋಡೆಗೆ ತಲೆ ಚಚ್ಚಿದ ಆರೋಪ ಮಾಡಲಾಗಿದೆ. ಸದ್ಯ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ, ಪತ್ನಿಯ ಕೊಲೆ: ಪತಿ ಅರೆಸ್ಟ್

ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ ಹೆಂಡತಿ‌ ನಡುವೆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಬೆಂಗಳೂರಿನ HAL ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ನಡೆದಿದೆ. ಏ.12ರಂದು ಪತಿ ನವೀನ್​ನಿಂದಲೇ ಪತ್ನಿ ಗಿರಿಜಾ(30) ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸಾವು; ಮನೆ ಮಗನನ್ನ ಕಳೆದುಕೊಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಎಂಟು ತಿಂಗಳ ಹಿಂದೆಯಷ್ಟೇ ಗಿರಿಜಾ, ನವೀನ್ ಮದುವೆ ಆಗಿತ್ತು. ಗರ್ಭಪಾತ ಆಗಿದ್ದರಿಂದ ಸದ್ಯಕ್ಕೆ ಮಗು ಬೇಡ ಎಂದು ಗಿರಿಜಾ ಹೇಳಿದ್ದಾರೆ. ಸದ್ಯ ಆರೋಪಿ ನವೀನ್​ನನ್ನು HAL ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ವಡಗೇರ ತಾಲೂಕಿನ ಗೋಡಿಹಾಳ ಗ್ರಾಮದ ಬಳಿ ವಿದ್ಯುತ್ ಸ್ಪರ್ಶಿಸಿ ಹೊರಟೂರು ಗ್ರಾಮದ ರೈತ ಮರೆಪ್ಪ(43) ಎಂಬಾತ ಸಾವನ್ನಪ್ಪಿದ್ದಾನೆ. ಜಾನುವಾರುಗಳಿಗೆ ಮೇವು ತೆಗೆದುಕೊಂಡು ಹೋಗಲು ಗೋಡಿಹಾಳ ಗ್ರಾಮಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು: ಪ್ರೀತಿಸಿದವಳನ್ನೇ ಕೊಲೆ ಮಾಡಿದ ಪ್ರಿಯತಮ; ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

ಸ್ಥಳಕ್ಕೆ‌ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ರೈತನ ಕುಟುಂಬಕ್ಕೆ ವೈಯಕ್ತಿಕ ಆರ್ಥಿಕ ನೆರವು ನೀಡಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ