AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿದ ಅನ್ಯಕೋಮಿನ ಯುವಕರು, ಮುಂದೇನಾಯ್ತು?

ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್​ ಮಾಡಿರುವಂತಹ ಘಟನೆ ನಡೆದಿತ್ತು. ರಾಕೇಶ್ ಕಿಡ್ನಾಪ್ ಆದ ವಿದ್ಯಾರ್ಥಿ.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿದ ಅನ್ಯಕೋಮಿನ ಯುವಕರು, ಮುಂದೇನಾಯ್ತು?
ಕಿಡ್ನಾಪ್​​ ಆಗಿದ್ದ ವಿದ್ಯಾರ್ಥಿ, ವಿನೋಬನಗರ ಪೂಲೀಸ್ ಠಾಣೆ
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Mar 29, 2024 | 3:36 PM

Share

ಶಿವಮೊಗ್ಗ, ಮಾರ್ಚ್​​ 2: ಮಾ .20 ರಂದು ನಗರದ ಬೊಮ್ಮಕಟ್ಟೆ ಬಡಾವಣೆ ನಿವಾಸಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಯನ್ನು ಕಿಡ್ನಾಪ್ (kidnapped)​ ಮಾಡಿರುವಂತಹ ಘಟನೆ ನಡೆದಿತ್ತು. ರಾಕೇಶ್ ಕಿಡ್ನಾಪ್ ಆದ ವಿದ್ಯಾರ್ಥಿ.  ರಾಜೇಂದ್ರ ನಗರ 100 ಅಡಿ ರಸ್ತೆ ಬಳಿ ಇರುವ ಖಾಸಗಿ ಶಾಲೆಯಿಂದ ಸಂಜೆ ಮನೆಗೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ. ಡ್ರಾಪ್ ಕೊಡುವುದಾಗಿ ಹೇಳಿ ಇಬ್ಬರು ಅನ್ಯಕೋಮಿನ ಯುವಕರಿಂದ ಕಿಡ್ನಾಪ್​ ಮಾಡಲಾಗಿದೆ. ಶಿವಮೊಗ್ಗ ಹೊರವಲಯದ ಕಲ್ಲುಗಂಗೂರು ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಯುವಕರು ವಿದ್ಯಾರ್ಥಿಯ ಬಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಕಿವಿಗೆ ಕಚ್ಚಿ ಗಾಯ ಮಾಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಯುವಕರು ಸ್ಥಳದಲ್ಲೇ ಬಿಟ್ಟು ಪರಾರಿ ಆಗಿದ್ದಾರೆ. ಸ್ಥಳೀಯರ ಸಹಾಯದಿಂದ ವಿದ್ಯಾರ್ಥಿಯನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ. ಬಳಿಕ ಪೋಷಕರಿಗೆ ಘಟನೆ ಕುರಿತು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಹಾನಗಲ್ ಗ್ಯಾಂಗ್ ರೇಪ್: ನಮ್ಮ ಬಾಯಿ ಮುಚ್ಚಿಸಲು 50 ಲಕ್ಷ ರೂ. ಆಮಿಷ: ಸಂತ್ರಸ್ತೆ ಪತಿ ಗಂಭೀರ ಆರೋಪ

ಸದ್ಯ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದು, ಘಟನೆ ನಡೆದು ಒಂದು ವಾರ ಆದರೂ ಆರೋಪಿಗಳು ಪತ್ತೆ ಆಗಿಲ್ಲ. ಘಟನೆ ಕುರಿತು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ವಿದ್ಯಾರ್ಥಿ ಎಸ್​​ಎಸ್​ಎಲ್​​ಸಿ ಪರೀಕ್ಷೆ ಬರೆಯಲು ತೊಂದರೆ ಉಂಟಾಗಿದೆ.

ಪ್ರೀತಿ ನಿರಾಕರಣೆ: ಯುವತಿಯನ್ನು ಕಿಡ್ನಾಪ್ ಮಾಡಿದ ಪಾಗಲ್ ಪ್ರೇಮಿ

ಹಾವೇರಿ: ಬಿ.ಎಡ್ ಕಾಲೇಜು ಯುವತಿಯೊಬ್ಬಳು ಪ್ರೀತಿ ನಿರಾಕರಣೆ ಮಾಡಿದಳು ಅಂತ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನೇ ಕಿಡ್ನಾಪ್ ಮಾಡಿರುವಂತಹ ಘಟನೆ ಇತ್ತೀಚೆಗೆ ಹಾವೇರಿ ನಗರದ ಓಲ್ಡ್ ಪೋಸ್ಟ್ ಆಫೀಸ್ ಬಳಿ ನಡೆದಿತ್ತು. ಬೆಳಿಗ್ಗೆ 9 ಗಂಟೆಗೆ ಯುವತಿಯು ಕಾಲೇಜ್ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿದ್ದ.

ಇದನ್ನೂ ಓದಿ: ತುಮಕೂರು ಸಿದ್ಧಗಂಗಾ ಮಠದ ಜಾತ್ರೆಗೆ ಬಂದಿದ್ದ ಬಾಲಕಿ ಮೇಲೆ ಗ್ಯಾಂಗ್ ​ರೇಪ್

ಕಿಡ್ನಾಪ್ ಮಾಡಿದ ಆರೋಪಿಯನ್ನ ವಿಷ್ಣು ತಗಡಿನಮನಿ ಎಂದು ಗುರುತಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಯುವತಿ ರಕ್ಷಣೆಗೆ ಮುಂದಾಗಿದ್ದರು. ಯುವತಿಯನ್ನ ಮೋಟೆಬೆನ್ನೂರು ಬಳಿ ಬಿಟ್ಟು ಆರೋಪಿ‌ ವಿಷ್ಣು ಎಸ್ಕೇಪ್ ಆಗಿದ್ದ. ಫೋನ್ ಟ್ರ್ಯಾಕ್ ಮಾಡಿ ಪೊಲೀಸರು ಯುವತಿ ಪತ್ತೆ ಹಚ್ಚಿ ಕರೆತಂದಿದ್ದರು. ಪೊಲೀಸ್ ಠಾಣೆಗೆ ಯುವತಿಯನ್ನ ಕರೆತರುತ್ತಿದ್ದಂತೆ ತಾಯಿಯನ್ನ ಅಪ್ಪಿ ಯುವತಿ ಗೋಳಾಡಿದ್ದಳು. ಈ ವೇಳೆ ಮಗಳ ಜೊತೆ ಪೋಷಕರೂ ಕಣ್ಣೀರು ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ