AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದುಕಿಗೆ ದುಬಾರಿ ಬರೆ: ಶುಗರ್, ಬಿಪಿ, ಕೆಮ್ಮ, ಜ್ವರ ಸೇರಿದಂತೆ ಐನೂರಕ್ಕೂ ಹೆಚ್ಚು ಔಷಧಿಗಳ ದರ ಏರಿಕೆ

ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಬೆನ್ನಲ್ಲೇ ಒಂದೊಂದೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ಖಾಸಗಿ ಬಸ್ ದರ ಏರಿಕೆ ಆಯ್ತು ಈಗ, ಈಗ ಔಷಧಗಳ ಬೆಲೆ ಏರಿಕೆ ಶುರುವಾಗಿದೆ. ಹೌದು... ಕ್ರೂಡ್ ಆಯಿಲ್, ಪೆಟ್ರೋಲ್, ಡಿಸೆಲ್, ಎಲ್ ಪಿಜಿ ಗ್ಯಾಸ್ ಅಭಾವದ ನೇರಾ ಎಫೆಕ್ಟ್ ಔಷಧ ವಲಯಕ್ಕೂ ತಟ್ಟಿದ್ದು, ಬಿಪಿ ಶುಗರ್, ದಿನಬಳಕೆಯ ಔಷಧ ಬೆಲೆಯು ಈಗ ಏರಿಕೆಯಾಗಿದೆ.

ಬದುಕಿಗೆ ದುಬಾರಿ ಬರೆ: ಶುಗರ್, ಬಿಪಿ, ಕೆಮ್ಮ, ಜ್ವರ ಸೇರಿದಂತೆ ಐನೂರಕ್ಕೂ ಹೆಚ್ಚು ಔಷಧಿಗಳ ದರ ಏರಿಕೆ
Medicine
ವಿನಯ್​ ಕಾಶಪ್ಪನವರ್​
| Edited By: |

Updated on: May 17, 2026 | 9:51 PM

Share

ಬೆಂಗಳೂರು, (ಮೇ 17): ಮಧ್ಯಪ್ರಾಚ್ಯ ಯುದ್ಧದ ಕಿಚ್ಚು ಮತ್ತು ಪೆಟೋಲ್, ಡೀಸೆಲ್ ದರ ಏರಿಕೆ (petrol and diesel price Hik) ಈಗ ನಿಮ್ಮ ಮನೆಯ ಔಷಧದ (machines) ಡಬ್ಬಿಗೂ ತಟ್ಟಿದ್ದು, ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಹೌದು.. ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಬಿದ್ದ ಕಾರಣ ಔಷಧಗಳ ದರ ಸರಾಸರಿ 15 ರಷ್ಟು ಔಷಧ ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ ಮಾತ್ರೆಗಳ ಬೆಲೆ ಹೆಚ್ಚಳ ಬಡವರ ಬದುಕನ್ನು ಇನ್ನಷ್ಟು ಹೈರಾಣಾಗಿಸಿದೆ.

ಪ್ಯಾರಸಿಟಮಲ್, ಕಾರ್ಡಿಯಾಕ್ ಡ್ರಗ್ಸ್, ಡಯಾಬಿಟಿಸ್ ಡ್ರಗ್ಸ್, ಗ್ಯಾಸ್ಟ್ರಿಕ್‌ ಟ್ಯಾಬ್ಲೆಟ್, ಕಾಫ್ ಸಿರಪ್, ಐರನ್ ಟಾನಿಕ್ಸ್ ಸೇರಿ 600ಕ್ಕೂ ಹೆಚ್ಚು ಔಷಧಗಳ ಬೆಲೆ ಹೆಚ್ಚಳವಾಗುತ್ತಿದೆ. ಹಂತ ಹಂತವಾಗಿ ಬ್ಯಾಚ್ ಮಾದರಿಯಲ್ಲಿ ಒಂದೊಂದೇ ಮಾತ್ರೆಗಳ ಬೆಲೆ ಏರಿಕೆಯತ್ತ ಸಾಗಿದೆ. ಯುದ್ಧದ ಎಫೆಕ್ಟ್ ಕಾರಣದಿಂದ ಔಷಧಗಳ ಬೆಲೆ 15 % ರಷ್ಟು ಏರಿಕೆ ಕಾಣುತ್ತಿದೆ. ಕೇವಲ ಔಷಧಗಳ ಬೆಲೆ ಮಾತ್ರವಲ್ಲ ಕಾಸ್ಮೆಟಿಕ್ , ಬೇಬಿ ಪ್ರಾಡಕ್ಟ್ ಗಳ ಬೆಲೆಯೂ ಏರಿಕೆ ಕಾಣುತ್ತಿದೆ. ಹಳೆಯ ಬೆಲೆಯ ಔಷಧ ಹಾಗೂ ಕಾಸ್ಮೆಟಿಕ್ ಸ್ಟಾಕ್ ಖಾಲಿಯಾಗಿ ಹೊಸ ಬ್ಯಾಚ್ ಮಾತ್ರೆಗಳ ಜೊತೆ ಹೊಸ ಏರಿಕೆಯ ದರ ಬರ್ತಿದೆ. ಯುದ್ಧ ಮುಗಿಯುವವರೆಗೂ ಬೆಲೆ ಏರಿಕೆ ಇದ್ದೆ ಇರುತ್ತೆ ಅಂತಿದ್ದಾರೆ ಫಾರ್ಮಾ ಮೆಡಿಕಲ್ ಮಾಲೀಕರು.

ಒಟ್ನಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ನಡುವೆ ಈಗ ಜನ ಸಾಮನ್ಯರಿಗೆ ಮಾತ್ರೆ ಔಷಧಗಳ ಬೆಲೆಯೂ ಏರಿಕೆ ಕಂಡಿದ್ದು ಮುಂದಿನ ದಿನಗಳಲ್ಲಿ ಏನೆಲ್ಲ ಸಮಸ್ಯೆಯಾಗಲಿದೆಯೋ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?