ಖಾಸಗಿ ದೇವಸ್ಥಾನದ ಬ್ರಾಹ್ಮಣ ಸಮುದಾಯದ ಅರ್ಚಕ, ಅಡುಗೆ ಕೆಲಸದವರಿಗೆ ನೆರವು ನೀಡಲು ಮುಖ್ಯಮಂತ್ರಿಗಳಿಗೆ ಮನವಿ
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದ ಸಚ್ಚಿದಾನಂದ ಮೂರ್ತಿ ಮನವಿ ನೀಡಿದರು. ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹಾಗೂ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉಪಸ್ಥಿತರಿದ್ದರು.

ಬೆಂಗಳೂರು: ಬ್ರಾಹ್ಮಣ ಸಮುದಾಯದ ಖಾಸಗಿ ದೇವಸ್ಥಾನದ ಅರ್ಚಕರು, ಪುರೋಹಿತರು, ಅಡುಗೆ ಕೆಲಸದವರಿಗೆ ನೆರವು ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಇಂದು (ಜೂನ್ 1) ಮನವಿ ಸಲ್ಲಿಸಲಾಯಿತು. ಧನಸಹಾಯ, ದಿನಸಿ ಕಿಟ್ ಒದಗಿಸುವಂತೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದ ಸಚ್ಚಿದಾನಂದ ಮೂರ್ತಿ ಮನವಿ ನೀಡಿದರು. ವೀರಶೈವ ಅಭಿವೃದ್ಧಿ ನಿಗಮದ ಅಧ್ಯಕ್ಷ ಪರಮಶಿವಯ್ಯ ಹಾಗೂ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉಪಸ್ಥಿತರಿದ್ದರು.
ಕೊರೊನಾ ಎರಡನೇ ಅಲೆಯಿಂದಾಗಿ ಅನೇಕ ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಲಾಕ್ಡೌನ್ನಿಂದ ಕೆಲಸ ಕಾರ್ಯಗಳಿಲ್ಲದೆ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಲಾಕ್ಡೌನ್ನಿಂದ ರಾಜ್ಯದ 35,000 ದೇಗುಲಗಳ ಅರ್ಚಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.
ಕಳೆದ 2 ತಿಂಗಳಿಂದ ದೇಗುಲಗಳತ್ತ ಜನರು ಬರುತ್ತಿಲ್ಲ. ಆದ್ರೂ ಸಂಪ್ರದಾಯದಂತೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ. ಇದರಿಂದ ಬಾರಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ನಮ್ಮ ಬಳಿ ಆಸ್ಪತ್ರೆಗಳಿಗೆ ಹೋಗುವುದಕ್ಕೂ ಹಣ ಇಲ್ಲ. ಕನಿಷ್ಠ ಆಹಾರ ಕಿಟ್ಗಳನ್ನು ಕೂಡ ಯಾರೂ ನೀಡ್ತಿಲ್ಲ. ಹಲವು ಬಾರಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಈ ಮೊದಲು ಕೂಡ ಅರ್ಚಕರು ನೋವು ತೋಡಿಕೊಂಡಿದ್ದರು.
ಒಂದು ವರ್ಷಕ್ಕೆ 48 ಸಾವಿರ ರೂ. ಹಣ ನೀಡುತ್ತಾರೆ. ಇದರಿಂದ ನಾವು ಹೇಗೆ ಜೀವನ ಮಾಡೋದೆಂದು ಅರ್ಚಕರೊಬ್ಬರು ಪ್ರಶ್ನೆ ಮಾಡಿದ್ದರು. ನಮಗೂ ಸಿಎಂ ಪ್ಯಾಕೇಜ್ ಘೋಷಿಸಿದ್ದರೆ ಒಳ್ಳೆಯದು ಎಂದು ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಸಂಘದಿಂದ ಮನವಿ ಮಾಡಿಕೊಂಡಿದ್ದರು. ಅರ್ಚಕರ ಸಂಘದ ಮುಖ್ಯ ಕಾರ್ಯದರ್ಶಿ ಎಸ್.ಕೆ.ಎನ್ ಧೀಕ್ಷಿತ್ ಹಾಗೂ ಸಹ ಕಾರ್ಯದರ್ಶಿ ವೇದ ಬ್ರಹ್ಮಶ್ರೀ ಉಮೇಶ್ ಶರ್ಮಾ ಈಗಾಗಲೇ ಮುಜರಾಯಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರವನ್ನೂ ಕೂಡಾ ಬರೆದು ಮನವಿ ಮಾಡಿಕೊಂಡಿದ್ದರು. ಆದರೆ ಇರುವರೆಗೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಅರ್ಚಕರು ಸಂಕಷ್ಟದಲ್ಲಿದ್ದಾರೆ.
ಇದನ್ನೂ ಓದಿ: ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಣೆ ಕುರಿತು ಚರ್ಚೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್
ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಕರ್ನಾಟಕ ಸರ್ಕಾರದ ಕೋವಿಡ್ ಪ್ಯಾಕೇಜ್ ರೂ. 3000 ಪಡೆಯುವುದು ಹೇಗೆ?
Published On - 4:53 pm, Tue, 1 June 21




