
ಬೆಂಗಳೂರು, ನವೆಂಬರ್ 18: ಕೇರಳದಲ್ಲಿ ಶಬರಿಮಲೆ (Sabarimala) ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಬರಿಮಲೆ ಅಯ್ಯಪ್ಪ ಭಕ್ತರಿಗಾಗಿ ಮಾರ್ಗಸೂಚಿ (Guidelines) ಬಿಡುಗಡೆ ಮಾಡಿದೆ.
ಈಗಾಗಲೇ ಕೇರಳದಲ್ಲಿ ನೂರಾರು ಜನರಿಗೆ ಬಾಧಿಸುತ್ತಿರುವ ಈ ವೈರಸ್, ರಾಜ್ಯದಿಂದ ಶಬರಿ ಮಲೆಗೆ ಹೋಗುವ ಭಕ್ತರ ಟೆನ್ಷನ್ಗೆ ಕಾರಣವಾಗಿದೆ. ಹೀಗಾಗಿ ಭಕ್ತರ ಆರೋಗ್ಯ ರಕ್ಷಣೆಗೆ ಮುಂದಾಗಿರುವ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆಗೆ ಮಾಡಿದೆ.
ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮೀಬಾ ಬೆಳೆಯುತ್ತೆ. ಒಂದು ವೇಳೆ ಅಂತಹ ನೀರಿನಲ್ಲಿ ಈಜಾಡಿದರೆ, ಆ ಅಮೀಬಾವು ಮೂಗಿನ ಮೂಲಕ ನಮ್ಮ ಮೆದುಳನ್ನ ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಕೆ ಹಾನಿಯುಂಟು ಮಾಡುತ್ತದೆ. ಕೆಲವೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು.
ಇದನ್ನೂ ಓದಿ: Video: ಶಬರಿಮಲೆ ಯಾತ್ರೆ ಆರಂಭ, ಅಯ್ಯಪ್ಪ ಭಕ್ತರಿಗೆ ಮೆದುಳು ತಿನ್ನುವ ಅಮೀಬಾ ಸೋಂಕಿನ ಭೀತಿ, ಮಾರ್ಗಸೂಚಿ ಬಿಡುಗಡೆ
ಸದ್ಯ ನಮ್ಮರಾಜ್ಯದಲ್ಲಿ ಯಾವುದೇ ರೀತಿ ನೇಗ್ಲೇರಿಯಾ ಫೌಲೇರಿ ಸೋಂಕು ಕಾಣಿಸಿಕೊಂಡಿಲ್ಲ. ಆದರೂ ಕೂಡ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.