AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain fever: ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪತ್ತೆ: ಕೋಲಾರ ಜಿಲ್ಲೆಯಲ್ಲಿ ಅಲರ್ಟ್

ಕೋಲಾರ ಜಿಲ್ಲೆಯಲ್ಲಿ ಮೆದುಳು ಜ್ವರ ಪತ್ತೆ ಹಿನ್ನೆಲೆ ಅಲರ್ಟ್ ಆಗಿದೆ. ಅದರಂತೆ ಮೆದುಳು ಜ್ವರ ಪತ್ತೆಯಾದ ವ್ಯಾಪ್ತಿಯಲ್ಲಿ ಹಂದಿ ಸಾಕಣೆ ನಿಷೇಧ ಹೇರಲಾಗಿದೆ.

Brain fever: ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪತ್ತೆ: ಕೋಲಾರ ಜಿಲ್ಲೆಯಲ್ಲಿ ಅಲರ್ಟ್
ಕೋಲಾರದಲ್ಲಿ ಮೆದುಳು ಜ್ವರ ಪತ್ತೆ
TV9 Web
| Edited By: Rakesh Nayak Manchi|

Updated on:Oct 29, 2022 | 9:17 AM

Share

ಕೋಲಾರ: ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪತ್ತೆಯಾಗಿದೆ. ಇದು ಸಾಂಕ್ರಮಿಕ ರೋಗವಾಗಿರುವುದರಿಂದ ತಮಗೂ ರೋಗ ಹರಡಬಹುದು ಎಂಬ ಆತಂಕ ಗ್ರಾಮದ ಜನರಲ್ಲಿ ಹೆಚ್ಚಾಗಿದೆ. ಇನ್ನು ಮೆದುಳು ಜ್ವರದ ಪ್ರಕರಣ ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ಅಲರ್ಟ್ ಆಗಿದೆ. ಅದರಂತೆ ತೊಟ್ಲಿ ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಸಾಕಣೆ ಮಾಡದಂತೆ ನಿಷೇಧ ಹೇರಲಾಗಿದೆ. ಅಲ್ಲದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಾಗೃತಿ ಮೂಡಿಸುತ್ತಿದ್ದು, 1ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿಕೊಳ್ಳುತ್ತಿದೆ. ಅಲ್ಲದೆ ಗ್ರಾಮ ಪಂಚಾಯತಿಯಿಂದ ಶುಚಿತ್ಚ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ.

ಮೆದುಳು ಜ್ವರ ಅಂದ್ರೆ ಒಂದು ರೀತಿಯ ಮೆದುಳಿನ ಸೋಂಕು. ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಸಾವು ಸಂಭವಿಸಲಿದೆ. ಮೆದುಳು ಸೋಂಕಿಗೆ ಪ್ರತಿ ವರ್ಷ ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳು ಹಾಗೂ ವಯಸ್ಕರು ಬಲಿಯಾಗುತ್ತಿದ್ದಾರೆ. ಮೆದುಳು ಜ್ವರದ ಲಕ್ಷಣವು ಭಾರತವನ್ನೂ ಒಳಗೊಂಡಂತೆ ಜಾಗತಿಕವಾಗಿ ವೈದ್ಯಕೀಯ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಒಂದು ದೊಡ್ಡ ಸವಾಲಾಗಿ ನಿಂತಿದೆ. ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಅಥವಾ ಸೋಂಕು ದೃಢಪಟ್ಟ ಕೂಡಲೇ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದು.

ಮೆದುಳು ಜ್ವರದ ಲಕ್ಷಣಗಳು

  • ಜ್ವರ
  • ತಲೆನೋವು
  • ಗುವಿನ ತಲೆಯಲ್ಲಿ ಮೃದುವಾದ ಗುಳ್ಳೆಗಳು ಏಳುವುದು
  • ಬೆಳಕಿಗೆ ಕಣ್ಣು ತೆರೆಯಲು ಸಾಧ್ಯವಾಗದಿರುವುದು
  • ಕುತ್ತಿಗೆ ಬಿಗಿಯಾಗುವುದು
  • ಕೋಮಾವಸ್ಥೆ
  • ತ್ವಚೆಯಲ್ಲಿ ಗುಳ್ಳೆಗಳು
  • ನಡೆದಾಡಲು ತೊಂದರೆ
  • ಹಸಿವು ಇಲ್ಲದಿರುವುದು
  • ಮಾತನಾಡುವಾಗ ತೊದಲುವುದು
  • ಮೈಯಲ್ಲಿ ನಡುಕ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Sat, 29 October 22

Follow Us
Web contact
Web contact

TV9 Kannada

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!