AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಬೆಂಗಳೂರಿನಲ್ಲಿ ಬಿಡಾಡಿ ವಾಹನಗಳ ಜಪ್ತಿ ಶುರು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಕರ್ನಾಟಕದ 8 ಜಿಲ್ಲೆಗಳಲ್ಲಿ ಮುಂಗಾರು ತೀವ್ರಗೊಂಡಿದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಇತ್ತ ಸಿಲಿಕಾನ್ ಸಿಟಿಯಲ್ಲಿ ರಸ್ತೆಬದಿಯ ಬಿಡಾಡಿ ವಾಹನಗಳ ಜಪ್ತಿ ಕಾರ್ಯಾಚರಣೆ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಇನ್ನು ಪ್ರವಾಹ ಪೀಡಿತ ಚೀನಾದಲ್ಲಿ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ವಸತಿ ಪ್ರದೇಶಕ್ಕೆ ನುಗ್ಗಿದ್ದು, ಆತಂಕ ಸೃಷ್ಟಿಸಿದೆ. ದೇಶ, ವಿದೇಶ ಹಾಗೂ ರಾಜ್ಯದ ಲೈವ್ ಸುದ್ದಿಗಳು ಇಲ್ಲಿವೆ.

TV9 Kannada News Live: ಬೆಂಗಳೂರಿನಲ್ಲಿ ಬಿಡಾಡಿ ವಾಹನಗಳ ಜಪ್ತಿ ಶುರು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಭಾವನಾ ಹೆಗಡೆ
|

Updated on:Jul 10, 2026 | 8:13 AM

Share

LIVE NEWS & UPDATES

  • 10 Jul 2026 08:13 AM (IST)

    ಕಾಡುಗಳ್ಳರ ಹೆಡೆಮುರಿ ಕಟ್ಟಿದ ಅರಣ್ಯ ಸಿಬ್ಬಂದಿ, 30 ಕೆಜಿ ಜಿಂಕೆ ಮಾಂಸ ವಶ!

    ಬಂಡೀಪುರ ಹುಲಿ ಸಂರಕ್ಷಣಾದಳದ ಅಧಿಕಾರಿಗಳು ಗುಂಡ್ಲುಪೇಟೆಯ ಚೌಡಹಳ್ಳಿ ಸಮೀಪ ಕಾರ್ಯಾಚರಣೆ ನಡೆಸಿ ಇಬ್ಬರು ಬೇಟೆಗಾರರನ್ನು ಬಂಧಿಸಿದ್ದಾರೆ. ಬಂದೂಕಿನಿಂದ ಜಿಂಕೆ ಬೇಟೆಯಾಡಿ ಬೈಕ್‌ನಲ್ಲಿ ಮಾಂಸ ಸಾಗಿಸುತ್ತಿದ್ದ ಮಣಿಕಂಠ ಮತ್ತು ಶಿವಯ್ಯ ಎಂಬುವವರಿಂದ 30 ಕೆಜಿ ಜಿಂಕೆ ಮಾಂಸ, ಬಂದೂಕು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

  • 10 Jul 2026 08:11 AM (IST)

    Chikkamagaluru Rain update: ಶೃಂಗೇರಿ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರಕ್ಕೆ ಆತಂಕ!

    ಮಲೆನಾಡಿನಲ್ಲಿ ನಿರಂತರ ಮಳೆಯಿಂದಾಗಿ ಜಯಪುರ-ಶೃಂಗೇರಿ ಹೆದ್ದಾರಿಯ ಕುಂಚೆಬೈಲು ಬಳಿ ಅರ್ಧ ಕಿಲೋಮೀಟರ್‌ನಷ್ಟು ಭೂಕುಸಿತ ಸಂಭವಿಸಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬಂಡೆ, ಮಣ್ಣು ರಸ್ತೆಗೆ ಬಿದ್ದಿದ್ದು, ಜಿಲ್ಲಾಡಳಿತದ ನಿರ್ಲಕ್ಷ್ಯದ ನಡುವೆಯೂ ಸಾರ್ವಜನಿಕರು ಆತಂಕದಲ್ಲೇ ಸಂಚರಿಸುತ್ತಿದ್ದಾರೆ. ಮಳೆ ಹೆಚ್ಚಾದರೆ ಹೆದ್ದಾರಿ ಸಂಪೂರ್ಣ ಬಂದ್ ಆಗುವ ಭೀತಿ ಎದುರಾಗಿದೆ.

Breaking News Today Live Updates in Kannada: ಕರ್ನಾಟಕದ ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡಿದ್ದು, ಬೆಳಗಾವಿ, ಉಡುಪಿ, ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ ಐಎಂಡಿ (IMD) ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ತಗ್ಗು ಪ್ರದೇಶಗಳ ನಿವಾಸಿಗಳಿಗೆ ಜಾಗರೂಕರಾಗಿರಲು ಕೆಎಸ್‌ಎನ್‌ಡಿಎಂಸಿ ಸೂಚಿಸಿದೆ. ಮತ್ತೊಂದೆಡೆ, ನಗರದ ಸೌಂದರ್ಯೀಕರಣಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಜಿಬಿಎ (GBA) ಮತ್ತು ಸಂಚಾರಿ ಪೊಲೀಸರು ಜಂಟಿಯಾಗಿ ಅನಾಥ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. 7 ದಿನಗಳಲ್ಲಿ ವಾಹನ ಸರಿಸದಿದ್ದರೆ ಜಪ್ತಿ ಮಾಡಿ ಹರಾಜು ಹಾಕಲಾಗುವುದು. ಇನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ, ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದಲ್ಲಿ ಪ್ರವಾಹದ ಭೀಕರತೆ ಹೆಚ್ಚಾಗಿದ್ದು, ಸಾಕಣೆ ಕೇಂದ್ರಗಳಿಂದ ಮುಕ್ತವಾದ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ವಸತಿ ಪ್ರದೇಶಗಳಿಗೆ ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Jul 10,2026 8:08 AM

Follow Us