
ಬಂಡೀಪುರ ಹುಲಿ ಸಂರಕ್ಷಣಾದಳದ ಅಧಿಕಾರಿಗಳು ಗುಂಡ್ಲುಪೇಟೆಯ ಚೌಡಹಳ್ಳಿ ಸಮೀಪ ಕಾರ್ಯಾಚರಣೆ ನಡೆಸಿ ಇಬ್ಬರು ಬೇಟೆಗಾರರನ್ನು ಬಂಧಿಸಿದ್ದಾರೆ. ಬಂದೂಕಿನಿಂದ ಜಿಂಕೆ ಬೇಟೆಯಾಡಿ ಬೈಕ್ನಲ್ಲಿ ಮಾಂಸ ಸಾಗಿಸುತ್ತಿದ್ದ ಮಣಿಕಂಠ ಮತ್ತು ಶಿವಯ್ಯ ಎಂಬುವವರಿಂದ 30 ಕೆಜಿ ಜಿಂಕೆ ಮಾಂಸ, ಬಂದೂಕು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಮಲೆನಾಡಿನಲ್ಲಿ ನಿರಂತರ ಮಳೆಯಿಂದಾಗಿ ಜಯಪುರ-ಶೃಂಗೇರಿ ಹೆದ್ದಾರಿಯ ಕುಂಚೆಬೈಲು ಬಳಿ ಅರ್ಧ ಕಿಲೋಮೀಟರ್ನಷ್ಟು ಭೂಕುಸಿತ ಸಂಭವಿಸಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬಂಡೆ, ಮಣ್ಣು ರಸ್ತೆಗೆ ಬಿದ್ದಿದ್ದು, ಜಿಲ್ಲಾಡಳಿತದ ನಿರ್ಲಕ್ಷ್ಯದ ನಡುವೆಯೂ ಸಾರ್ವಜನಿಕರು ಆತಂಕದಲ್ಲೇ ಸಂಚರಿಸುತ್ತಿದ್ದಾರೆ. ಮಳೆ ಹೆಚ್ಚಾದರೆ ಹೆದ್ದಾರಿ ಸಂಪೂರ್ಣ ಬಂದ್ ಆಗುವ ಭೀತಿ ಎದುರಾಗಿದೆ.
Breaking News Today Live Updates in Kannada: ಕರ್ನಾಟಕದ ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡಿದ್ದು, ಬೆಳಗಾವಿ, ಉಡುಪಿ, ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ ಐಎಂಡಿ (IMD) ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ತಗ್ಗು ಪ್ರದೇಶಗಳ ನಿವಾಸಿಗಳಿಗೆ ಜಾಗರೂಕರಾಗಿರಲು ಕೆಎಸ್ಎನ್ಡಿಎಂಸಿ ಸೂಚಿಸಿದೆ. ಮತ್ತೊಂದೆಡೆ, ನಗರದ ಸೌಂದರ್ಯೀಕರಣಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಜಿಬಿಎ (GBA) ಮತ್ತು ಸಂಚಾರಿ ಪೊಲೀಸರು ಜಂಟಿಯಾಗಿ ಅನಾಥ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. 7 ದಿನಗಳಲ್ಲಿ ವಾಹನ ಸರಿಸದಿದ್ದರೆ ಜಪ್ತಿ ಮಾಡಿ ಹರಾಜು ಹಾಕಲಾಗುವುದು. ಇನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ, ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದಲ್ಲಿ ಪ್ರವಾಹದ ಭೀಕರತೆ ಹೆಚ್ಚಾಗಿದ್ದು, ಸಾಕಣೆ ಕೇಂದ್ರಗಳಿಂದ ಮುಕ್ತವಾದ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ವಸತಿ ಪ್ರದೇಶಗಳಿಗೆ ನುಗ್ಗಿ ಜನರಲ್ಲಿ ಆತಂಕ ಸೃಷ್ಟಿಸಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 8:08 am, Fri, 10 July 26