AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಬೈಕಿನಲ್ಲಿ ಸಾಗಿಸುತ್ತಿದ್ದ 20 ಕೆಜಿ ಗಾಂಜಾ ಜಪ್ತಿ; ಕರ್ನಾಟಕದಲ್ಲಿ ಹೆಚ್ಚಿದ ಕೋವಿಡ್ ಆತಂಕ, ಪ್ರಮುಖ ಸುದ್ದಿಗಳು ಇಲ್ಲಿದೆ

Karnataka News Today Live Updates: ದಾವಣಗೆರೆಯ ಪೋಕ್ಸೋ ನ್ಯಾಯಾಲಯ ಇಂದು ವಚನಾನಂದ ಸ್ವಾಮೀಜಿ ಜಾಮೀನು ತೀರ್ಪು ಪ್ರಕಟಿಸಲಿದೆ. ರಾಯಚೂರು ಪೊಲೀಸರಿಂದ 20 ಲಕ್ಷ ಮೌಲ್ಯದ 20 ಕೆಜಿ ಗಾಂಜಾ ಜಪ್ತಿ, ಇಬ್ಬರ ಬಂಧನ. ಆಂಧ್ರದಲ್ಲಿ ಇಬ್ಬರು ಕೋವಿಡ್ ಸೋಂಕಿಗೆ ಬಲಿ, ವೈರಸ್ ಮರುಕಳಿಕೆ ಭೀತಿ. ಬ್ಯಾಂಕಾಕ್‌ನಲ್ಲಿ ದುರಂತ. ರಾಜ್ಯ, ದೇಶ, ವಿದೇಶಗಳ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

TV9 Kannada News Live: ಬೈಕಿನಲ್ಲಿ ಸಾಗಿಸುತ್ತಿದ್ದ 20 ಕೆಜಿ ಗಾಂಜಾ ಜಪ್ತಿ; ಕರ್ನಾಟಕದಲ್ಲಿ ಹೆಚ್ಚಿದ ಕೋವಿಡ್ ಆತಂಕ, ಪ್ರಮುಖ ಸುದ್ದಿಗಳು ಇಲ್ಲಿದೆ
ಅಕ್ಷಯ್​ ಪಲ್ಲಮಜಲು​​
|

Updated on:Jul 13, 2026 | 10:09 AM

Share

LIVE NEWS & UPDATES

  • 13 Jul 2026 10:09 AM (IST)

    ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತುಗೊಳಿಸಿದ ರಾಜ್ಯಪಾಲ

    ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಹೊಣೆ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಅತ್ಯಂತ ಸಂಚಲನಾತ್ಮಕ ಬೆಳವಣಿಗೆಯೊಂದು ನಡೆದಿದೆ. ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ (Suspend) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು (ಜುಲೈ 13) ಅದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಕೇಳಿಬಂದಿರುವ ಗಂಭೀರ ಸ್ವರೂಪದ ಅಕ್ರಮ ಮತ್ತು ಸ್ವಜನಪಕ್ಷಪಾತದ ದೂರುಗಳ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ.

  • 13 Jul 2026 09:50 AM (IST)

    ಬೆಟ್ಟದ ಭೈರವೇಶ್ವರ ಕ್ಷೇತ್ರದಲ್ಲಿ ಪ್ರವಾಸಿಗರ ಹುಚ್ಚಾಟ: ಡಿಜೆ ಹಾಕಿ ಕುಣಿತ, ಚಪ್ಪಲಿ ಧರಿಸಿ ಓಡಾಟ

    ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮರಗುಂದ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ‘ಬೆಟ್ಟದ ಭೈರವೇಶ್ವರ’ ದೇವಾಲಯದ ಆವರಣದಲ್ಲಿ ಪ್ರವಾಸಿಗರ ಹುಚ್ಚಾಟ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿರುವ ಪುಂಡರ ವರ್ತನೆಗೆ ಸ್ಥಳೀಯರು ಮತ್ತು ಭಕ್ತಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪವಿತ್ರ ದೇವಸ್ಥಾನದ ಆವರಣವನ್ನು ಪ್ರವಾಸಿಗರು ಪಿಕ್ನಿಕ್ ಸ್ಪಾಟ್ ಮಾಡಿಕೊಂಡಿದ್ದು, ನಿಯಮಗಳನ್ನು ಗಾಳಿಗೆ ತೂರಿ ಉದ್ಧಟತನ ಪ್ರದರ್ಶಿಸುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿವೆ.

  • 13 Jul 2026 09:21 AM (IST)

    ಬೈಕಿನಲ್ಲಿ ಸಾಗಿಸುತ್ತಿದ್ದ 20 ಕೆಜಿ ಗಾಂಜಾ ಜಪ್ತಿ, ಇಬ್ಬರ ಬಂಧನ

    ರಾಯಚೂರು ಜಿಲ್ಲಾ ಪೊಲೀಸ್ ಇತಿಹಾಸದಲ್ಲೇ ಅತ್ಯಂತ ಬೃಹತ್ ಗಾಂಜಾ ಜಾಲವನ್ನು ಭೇದಿಸುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆದ ಅತ್ಯಂತ ರಹಸ್ಯ ‘ಕ್ಯೂಆರ್ ಕೋಡ್ ಮತ್ತು ಡಿಕಾಯ್ಸ್ ಸ್ಕ್ವಾಡ್’ ಕಾರ್ಯಾಚರಣೆಯ ಮೂಲಕ 20 ಲಕ್ಷ ರೂಪಾಯಿ ಮೌಲ್ಯದ 20 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಅಂತರಜಿಲ್ಲಾ ದಂಧೆಕೋರರನ್ನು ಹೆಡೆಮುರಿ ಕಟ್ಟಲಾಗಿದೆ. ಬಂಧಿತರನ್ನು ಸಿಂಧನೂರು ತಾಲೂಕಿನ ಆರ್.ಹೆಚ್. ಕ್ಯಾಂಪ್ ನಿವಾಸಿ ಧೀನಬಂಧು (53) ಮತ್ತು ಬಸವರಾಜೇಶ್ವರಿ ಕ್ಯಾಂಪ್ ನಿವಾಸಿ ಶಂಭು ಸರ್ದಾರ್ (31) ಎಂದು ಗುರುತಿಸಲಾಗಿದೆ. ಧೀನಬಂಧು ಸೆಂಟ್ರಿಂಗ್ ಕೆಲಸ ಹಾಗೂ ಶಂಭು ಕೂಲಿ ಕಾರ್ಮಿಕನಾಗಿದ್ದು, ಇದರ ಮರೆಯಲ್ಲಿ ಗಾಂಜಾ ದಂಧೆ ನಡೆಸುತ್ತಿದ್ದರು.

Breaking News Today Live Updates in Kannada: ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರಿಗೆ ನಿಯಮಿತ ಜಾಮೀನು (Regular Bail) ನೀಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಂದು (ಜುಲೈ 13) ತನ್ನ ಮಹತ್ವದ ಅಂತಿಮ ತೀರ್ಪನ್ನು ಪ್ರಕಟಿಸಲಿದೆ. ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ನಡೆದ ಅತ್ಯಂತ ರಹಸ್ಯ ‘ಕ್ಯೂಆರ್ ಕೋಡ್ ಮತ್ತು ಡಿಕಾಯ್ಸ್ ಸ್ಕ್ವಾಡ್’ ಕಾರ್ಯಾಚರಣೆಯ ಮೂಲಕ 20 ಲಕ್ಷ ರೂಪಾಯಿ ಮೌಲ್ಯದ 20 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಅಂತರಜಿಲ್ಲಾ ದಂಧೆಕೋರರನ್ನು ಹೆಡೆಮುರಿ ಕಟ್ಟಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸಂಪೂರ್ಣ ಸೈಲೆಂಟ್ ಆಗಿದ್ದ ಹೆಮ್ಮಾರಿ ಕೊರೊನಾ ವೈರಸ್ (Covid-19) ಮತ್ತೆ ಆತಂಕ ಮೂಡಿಸಲು ಆರಂಭಿಸಿದೆ. ನೆರೆರಾಜ್ಯ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಸೋಮವಾರ ಬೆಳಗಿನ ಜಾವ ಘೋರ ದುರಂತವೊಂದು ಸಂಭವಿಸಿದೆ. ಹೀಗೆ ರಾಜ್ಯ, ದೇಶ, ವಿದೇಶಗಳ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ.

Published On - Jul 13,2026 9:21 AM

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ