TV9 Kannada News Live: ಪ್ರವಾಸಿಗರೇ ಗಮನಿಸಿ: ಈ 9 ಫಾಲ್ಸ್ಗಳಿಗೆ ನಿರ್ಬಂಧ; ಹಾಟ್ಸ್ಟಾರ್ನಲ್ಲಿ ಧೂಳೆಬ್ಬಿಸುತ್ತಿದೆ ‘ಪ್ರೀತಮ್ ಆ್ಯಂಡ್ ಪೆಡ್ರೊ’ ಸೀರಿಸ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಫಿಫಾ ವಿಶ್ವಕಪ್ನಿಂದ ಬ್ರೆಝಿಲ್ ಅನಿರೀಕ್ಷಿತವಾಗಿ ಹೊರಬಿದ್ದಿದೆ. ಇತ್ತ ದೇಣಿಗೆ ಹಗರಣದ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಇಂದು ಮಹತ್ವದ ಸಭೆ ನಡೆಸಲಿದ್ದು, ಚಂಪತ್ ರಾಯ್ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಇನ್ನು ಓಟಿಟಿಯಲ್ಲಿ ಹಿರಾನಿ ನಿರ್ಮಾಣದ ಹೊಸ ವೆಬ್ ಸರಣಿ ಧೂಳೆಬ್ಬಿಸುತ್ತಿದೆ. ಇಂದಿನ ಪ್ರಮುಖ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ನಟಿ ಕೃಷಿ ತಾಪಂಡ ಸ್ನೇಹಿತ ವೈಶಾಕ್ ಆತ್ಮಹತ್ಯೆ: ಆರ್ಥಿಕ ಸಂಕಷ್ಟವೇ ಕಾರಣ?
ನಟಿ ಕೃಷಿ ತಾಪಂಡ ಸ್ನೇಹಿತ ವೈಶಾಕ್ (36) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಆರ್ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೃಷಿ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ತನಿಖೆ ವೇಳೆ ವೈಶಾಕ್ ತೀವ್ರ ಆರ್ಥಿಕ ಸಂಕಷ್ಟದಿಂದ ಖಿನ್ನತೆಗೆ ಒಳಗಾಗಿದ್ದರು ಎಂಬುದು ಬೆಳಕಿಗೆ ಬಂದಿದೆ. ಕೃಷಿ ಅವರ ಫ್ಲ್ಯಾಟ್ನಲ್ಲೇ ವಾಸವಿದ್ದ ವೈಶಾಕ್ಗೆ ನಟಿ ಆಗಾಗ 40-50 ಸಾವಿರ ರೂ. ಹಣ ವರ್ಗಾವಣೆ ಮಾಡುತ್ತಿದ್ದು, ಅದಕ್ಕೆ ಸೂಕ್ತ ದಾಖಲೆಗಳನ್ನು ಪೊಲೀಸರಿಗೆ ಒದಗಿಸಿದ್ದಾರೆ.
-
ಆ್ಯಂಬುಲೆನ್ಸ್ಗೂ ಜಾಗ ಬಿಡದೆ ಪುಂಡರ ವ್ಹೀಲಿಂಗ್ ಹುಚ್ಚಾಟ!
ಬೆಂಗಳೂರಿನ ಗೊರಗುಂಟೆಪಾಳ್ಯದಿಂದ ಯಶವಂತಪುರದವರೆಗೆ ಜುಲೈ 4ರ ಮಧ್ಯರಾತ್ರಿ 2:30ರ ಸುಮಾರಿಗೆ ಪುಂಡರು ಬೈಕ್ ವ್ಹೀಲಿಂಗ್ ನಡೆಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ತುರ್ತು ಪರಿಸ್ಥಿತಿಯಲ್ಲಿ ಸೈರನ್ ಹಾಕಿಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ವಾಹನಕ್ಕೂ ಜಾಗ ಬಿಡದೆ, 5-6 ಬೈಕ್ಗಳಲ್ಲಿ ರಸ್ತೆ ಮಧ್ಯೆ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿ ವಿಕೃತ ಆನಂದ ಪಟ್ಟಿದ್ದಾರೆ. ಈ ಪುಂಡರ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
-
-
ಭಾರಿ ಮಳೆ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹೊಸನಗರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಹೊಸನಗರ ತಹಶೀಲ್ದಾರ್ ಭರತ್ರಾಜ್ ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೆಟಣೆ, ಚಿಕಲೆ, ಚೋರ್ಲಾ, ಬಟವಾಡೆ ಸೇರಿದಂತೆ ಒಂಬತ್ತು ಪ್ರಸಿದ್ಧ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಡಿಎಫ್ಒ ಕ್ರಾಂತಿ ಆದೇಶಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಲಪಾತಗಳ ಪ್ರವೇಶ ದ್ವಾರದಲ್ಲಿ ಅರಣ್ಯ ಸಿಬ್ಬಂದಿ ಕಾವಲು ನಿಂತಿದ್ದು, ನಿಯಮ ಮೀರಿ ಕಣ್ತಪ್ಪಿಸಿ ಹೋದರೆ ಎಫ್ಐಆರ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ. ಫಿಫಾ ವಿಶ್ವಕಪ್ನ ರೌಂಡ್ ಆಫ್-16 ನಾಕೌಟ್ ಪಂದ್ಯದಲ್ಲಿ ನಾರ್ವೆ ವಿರುದ್ಧ 2-1 ಗೋಲುಗಳ ಅಂತರದಿಂದ ಸೋತ ಬ್ರೆಝಿಲ್ ತಂಡವು ಕ್ವಾರ್ಟರ್ ಫೈನಲ್ಗೂ ಮುನ್ನವೇ ಟೂರ್ನಿಯಿಂದ ಹೊರಬಿದ್ದು ಭಾರಿ ಆಘಾತ ನೀಡಿದೆ. ಇತ್ತ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಗರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ರಾಜೀನಾಮೆ ಅಂಗೀಕಾರದ ಕುರಿತು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ನಿರ್ಣಾಯಕ ಸಭೆ ನಡೆಸಲಿದೆ. ಮತ್ತೊಂದೆಡೆ ಮನರಂಜನಾ ಲೋಕದಲ್ಲಿ ರಾಜ್ಕುಮಾರ್ ಹಿರಾನಿ ನಿರ್ಮಾಣದ, ಅರ್ಷದ್ ವಾರ್ಸಿ ಮುಖ್ಯ ಭೂಮಿಕೆಯಲ್ಲಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಸಮ್ಮಿಲನದ ‘ಪ್ರೀತಮ್ ಆ್ಯಂಡ್ ಪೆಡ್ರೊ’ ವೆಬ್ ಸರಣಿ ಜಿಯೋ ಹಾಟ್ಸ್ಟಾರ್ನಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Jul 06,2026 8:30 AM




