TV9 Kannada News Live: ಮೈಸೂರು-ಚಾಮರಾಜನಗರ ಪ್ಯಾಸೆಂಜರ್ ರೈಲು ಸ್ಥಗಿತ; ಬೆಸ್ಕಾಂನಿಂದ ಗೃಹ ಜ್ಯೋತಿ ಯೋಜನೆ ಹೆಲ್ಪ್‌ಲೈನ್ ಆರಂಭ

Karnataka News Today Live Updates: ಫಿಫಾ ವಿಶ್ವಕಪ್‌ನಿಂದ ಬ್ರೆಝಿಲ್ ಅನಿರೀಕ್ಷಿತವಾಗಿ ಹೊರಬಿದ್ದಿದೆ. ಇತ್ತ ದೇಣಿಗೆ ಹಗರಣದ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಇಂದು ಮಹತ್ವದ ಸಭೆ ನಡೆಸಲಿದ್ದು, ಚಂಪತ್ ರಾಯ್ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ. ಇನ್ನು ಓಟಿಟಿಯಲ್ಲಿ ಹಿರಾನಿ ನಿರ್ಮಾಣದ ಹೊಸ ವೆಬ್ ಸರಣಿ ಧೂಳೆಬ್ಬಿಸುತ್ತಿದೆ. ಇಂದಿನ ಪ್ರಮುಖ ಅಪ್ಡೇಟ್ಸ್ ಇಲ್ಲಿದೆ.

TV9 Kannada News Live: ಮೈಸೂರು-ಚಾಮರಾಜನಗರ ಪ್ಯಾಸೆಂಜರ್ ರೈಲು ಸ್ಥಗಿತ; ಬೆಸ್ಕಾಂನಿಂದ ಗೃಹ ಜ್ಯೋತಿ ಯೋಜನೆ ಹೆಲ್ಪ್‌ಲೈನ್ ಆರಂಭ
ರೈಲು ಸೇವೆ ಸ್ಥಗಿತ
Edited By:

Updated on: Jul 06, 2026 | 10:34 AM

LIVE NEWS & UPDATES

  • 06 Jul 2026 10:22 AM (IST)

    ಗೃಹ ಜ್ಯೋತಿ ಯೋಜನೆ ಗೊಂದಲಗಳ ನಿವಾರಣೆಗೆ ಬೆಸ್ಕಾಂನಿಂದ ವಿಶೇಷ ಹೆಲ್ಪ್‌ಲೈನ್ ಆರಂಭ

    ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದ ಯಾವುದೇ ಸಂದೇಹ, ಗೊಂದಲಗಳಿಗೆ ಈಗ ವಿಶೇಷ ಹೆಲ್ಪ್ ಲೈನ್ ಆರಂಭಿಸಲಾಗಿದ್ದು, ಗ್ರಾಹಕರು ಕರೆ ಮಾಡಿ ಪರಿಹರಿಸಿಕೊಳ್ಳಬಹುದು. ಬೆಳಿಗ್ಗೆ 6:00 ರಿಂದ ರಾತ್ರಿ 10:00 ರವರೆಗೆ ಕರೆ ಮಾಡಲು ಅವಕಾಶವಿರುತ್ತದೆ ಎಂದು ಬೆಸ್ಕಾಂ ತನ್ನ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

  • 06 Jul 2026 10:18 AM (IST)

    ಮೈಸೂರು-ಚಾಮರಾಜನಗರ ನಡುವಿನ ಎರಡು ಪ್ಯಾಸೆಂಜರ್ ರೈಲುಗಳು ರದ್ದು

    ಕಾರ್ಯನಿರ್ವಹಣಾ ಕಾರಣಗಳಿಂದಾಗಿ ಮೈಸೂರು-ಚಾಮರಾಜನಗರ (56210) ಹಾಗೂ ಚಾಮರಾಜನಗರ-ಮೈಸೂರು (56207) ಪ್ಯಾಸೆಂಜರ್ ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಿಸಿದೆ.

  • 06 Jul 2026 10:08 AM (IST)

    ಭಾರಿ ಮಳೆ ಕಳಸ ಮತ್ತು ಸಕಲೇಶಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

    ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮತ್ತು ಕಳೆದ 3 ದಿನಗಳಿಂದ ಮಳೆ ಚುರುಕುಗೊಂಡಿರುವ ಹಾಸನದ ಸಕಲೇಶಪುರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಸಕಲೇಶಪುರ ತಹಶೀಲ್ದಾರ್ ಸುಪ್ರಿತಾ ಆದೇಶ ಹೊರಡಿಸಿದ್ದಾರೆ.

  • 06 Jul 2026 08:44 AM (IST)

    ನಟಿ ಕೃಷಿ ತಾಪಂಡ ಸ್ನೇಹಿತ ವೈಶಾಕ್ ಆತ್ಮಹತ್ಯೆ: ಆರ್ಥಿಕ ಸಂಕಷ್ಟವೇ ಕಾರಣ?

    ನಟಿ ಕೃಷಿ ತಾಪಂಡ ಸ್ನೇಹಿತ ವೈಶಾಕ್ (36) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಆರ್‌ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೃಷಿ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ತನಿಖೆ ವೇಳೆ ವೈಶಾಕ್ ತೀವ್ರ ಆರ್ಥಿಕ ಸಂಕಷ್ಟದಿಂದ ಖಿನ್ನತೆಗೆ ಒಳಗಾಗಿದ್ದರು ಎಂಬುದು ಬೆಳಕಿಗೆ ಬಂದಿದೆ. ಕೃಷಿ ಅವರ ಫ್ಲ್ಯಾಟ್‌ನಲ್ಲೇ ವಾಸವಿದ್ದ ವೈಶಾಕ್‌ಗೆ ನಟಿ ಆಗಾಗ 40-50 ಸಾವಿರ ರೂ. ಹಣ ವರ್ಗಾವಣೆ ಮಾಡುತ್ತಿದ್ದು, ಅದಕ್ಕೆ ಸೂಕ್ತ ದಾಖಲೆಗಳನ್ನು ಪೊಲೀಸರಿಗೆ ಒದಗಿಸಿದ್ದಾರೆ.

  • 06 Jul 2026 08:43 AM (IST)

    ಆ್ಯಂಬುಲೆನ್ಸ್‌ಗೂ ಜಾಗ ಬಿಡದೆ ಪುಂಡರ ವ್ಹೀಲಿಂಗ್ ಹುಚ್ಚಾಟ!

    ಬೆಂಗಳೂರಿನ ಗೊರಗುಂಟೆಪಾಳ್ಯದಿಂದ ಯಶವಂತಪುರದವರೆಗೆ ಜುಲೈ 4ರ ಮಧ್ಯರಾತ್ರಿ 2:30ರ ಸುಮಾರಿಗೆ ಪುಂಡರು ಬೈಕ್ ವ್ಹೀಲಿಂಗ್ ನಡೆಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ತುರ್ತು ಪರಿಸ್ಥಿತಿಯಲ್ಲಿ ಸೈರನ್ ಹಾಕಿಕೊಂಡು ಬರುತ್ತಿದ್ದ ಆ್ಯಂಬುಲೆನ್ಸ್ ವಾಹನಕ್ಕೂ ಜಾಗ ಬಿಡದೆ, 5-6 ಬೈಕ್‌ಗಳಲ್ಲಿ ರಸ್ತೆ ಮಧ್ಯೆ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿ ವಿಕೃತ ಆನಂದ ಪಟ್ಟಿದ್ದಾರೆ. ಈ ಪುಂಡರ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

  • 06 Jul 2026 08:38 AM (IST)

    ಭಾರಿ ಮಳೆ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹೊಸನಗರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಹೊಸನಗರ ತಹಶೀಲ್ದಾರ್ ಭರತ್‌ರಾಜ್ ಆದೇಶ ಹೊರಡಿಸಿದ್ದಾರೆ. ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Breaking News, Weather Latest News Live Updates in Kannada: ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೆಟಣೆ, ಚಿಕಲೆ, ಚೋರ್ಲಾ, ಬಟವಾಡೆ ಸೇರಿದಂತೆ ಒಂಬತ್ತು ಪ್ರಸಿದ್ಧ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಡಿಎಫ್ಒ ಕ್ರಾಂತಿ ಆದೇಶಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಜಲಪಾತಗಳ ಪ್ರವೇಶ ದ್ವಾರದಲ್ಲಿ ಅರಣ್ಯ ಸಿಬ್ಬಂದಿ ಕಾವಲು ನಿಂತಿದ್ದು, ನಿಯಮ ಮೀರಿ ಕಣ್ತಪ್ಪಿಸಿ ಹೋದರೆ ಎಫ್‌ಐಆರ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ. ಫಿಫಾ ವಿಶ್ವಕಪ್‌ನ ರೌಂಡ್ ಆಫ್-16 ನಾಕೌಟ್ ಪಂದ್ಯದಲ್ಲಿ ನಾರ್ವೆ ವಿರುದ್ಧ 2-1 ಗೋಲುಗಳ ಅಂತರದಿಂದ ಸೋತ ಬ್ರೆಝಿಲ್ ತಂಡವು ಕ್ವಾರ್ಟರ್ ಫೈನಲ್‌ಗೂ ಮುನ್ನವೇ ಟೂರ್ನಿಯಿಂದ ಹೊರಬಿದ್ದು ಭಾರಿ ಆಘಾತ ನೀಡಿದೆ. ಇತ್ತ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಗರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ರಾಜೀನಾಮೆ ಅಂಗೀಕಾರದ ಕುರಿತು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ನಿರ್ಣಾಯಕ ಸಭೆ ನಡೆಸಲಿದೆ. ಮತ್ತೊಂದೆಡೆ ಮನರಂಜನಾ ಲೋಕದಲ್ಲಿ ರಾಜ್‌ಕುಮಾರ್ ಹಿರಾನಿ ನಿರ್ಮಾಣದ, ಅರ್ಷದ್ ವಾರ್ಸಿ ಮುಖ್ಯ ಭೂಮಿಕೆಯಲ್ಲಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಸಮ್ಮಿಲನದ ‘ಪ್ರೀತಮ್ ಆ್ಯಂಡ್ ಪೆಡ್ರೊ’ ವೆಬ್ ಸರಣಿ ಜಿಯೋ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

YouTube video player

Published On - 8:30 am, Mon, 6 July 26

Follow Us