TV9 Kannada News Live: ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರ ಬಂಧನ: 61 ಲಕ್ಷದ ಮಾದಕ ವಸ್ತು ಜಪ್ತಿ

Karnataka News Today Live Updates: ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರಿನ 6 ತಾಲೂಕು ಹಾಗೂ ಶಿವಮೊಗ್ಗದ 3 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇಂದಿನ ಪ್ರಮುಖ ಅಪ್ಡೇಟ್ಸ್ ಇಲ್ಲಿದೆ.

TV9 Kannada News Live: ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರ ಬಂಧನ: 61 ಲಕ್ಷದ ಮಾದಕ ವಸ್ತು ಜಪ್ತಿ
ಹೈಡ್ರೋ ಗಾಂಜಾ ಜಪ್ತಿ

Updated on: Jul 07, 2026 | 12:28 PM

LIVE NEWS & UPDATES

  • 07 Jul 2026 12:28 PM (IST)

    Chikkamagaluru Rain Update: ಭಾರೀ ಮಳೆಗೆ ಮರ ಉರುಳಿ 60ಕ್ಕೂ ಹೆಚ್ಚು ಅಡಕೆ ಗಿಡ ನಾಶ

    ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದ ಅಗ್ರವಳ್ಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಮರವೊಂದು ನೆಲಕಚ್ಚಿದೆ. ಮರ ಉರುಳಿಬಿದ್ದ ರಭಸಕ್ಕೆ ಸ್ಥಳೀಯ ರೈತ ಮಂಜುನಾಥ್ ಎಂಬುವವರಿಗೆ ಸೇರಿದ ತೋಟದ 60ಕ್ಕೂ ಹೆಚ್ಚು ಅಡಕೆ ಗಿಡಗಳು ಸಂಪೂರ್ಣ ನಾಶವಾಗಿದ್ದು, ಭಾರಿ ನಷ್ಟ ಸಂಭವಿಸಿದೆ.

  • 07 Jul 2026 12:25 PM (IST)

    ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ, ವಿಶೇಷ ಪೂಜೆ

    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಅವರನ್ನು ಭೇಟಿಯಾದರು. ಈ ವೇಳೆ ಸಚಿವರಾದ ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಸೇರಿದಂತೆ ಸ್ಥಳೀಯ ಶಾಸಕರು ಉಪಸ್ಥಿತರಿದ್ದರು. ವೀಡಿಯೋ ನೋಡಿ

  • 07 Jul 2026 11:14 AM (IST)

    ಜೆ.ಬಿ. ನಗರದಲ್ಲಿ ಡ್ರಗ್ಸ್ ಬೇಟೆ: ಇಬ್ಬರ ಬಂಧನ

    ಜೀವನ್ ಭೀಮಾ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳದ ಜಾಸೀರ್ ಮತ್ತು ಅಭಿಷೇಕ್‌ನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿಗಳಿಂದ 61 ಲಕ್ಷ ರೂ. ಮೌಲ್ಯದ 1.8 ಕೆಜಿ ಹೈಡ್ರೋ ಗಾಂಜಾ, ಬೈಕ್, 2 ಫೋನ್ ಹಾಗೂ 5.90 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.

  • 07 Jul 2026 11:09 AM (IST)

    ವಿದ್ಯಾರಣ್ಯಪುರ ಪೊಲೀಸರ ಭರ್ಜರಿ ಬೇಟೆ; 2 ಕೋಟಿಯ ಎಂಡಿಎಂಎ ವಶ

    ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಮಾದಕ ವಸ್ತು ಮಾರಾಟ ಮಾಡುತ್ತಿದ್ದ ತ್ರಿಪುರ ಮೂಲದ ಸಂದೀಪ್ ಮಲ್ಲಿಕ್ ಮತ್ತು ಶಾಂತನೂ ದೆರ್ಮಮಾ ಎಂಬಿಬ್ಬರನ್ನು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆಯ ಸಂಪರ್ಕದೊಂದಿಗೆ ಎಂಡಿಎಂಎ ದಂಧೆ ನಡೆಸುತ್ತಿದ್ದ ಇವರಿಂದ 2 ಕೋಟಿ ರೂ. ಮೌಲ್ಯದ 2 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

  • 07 Jul 2026 10:10 AM (IST)

    ರಕ್ಷಣಾ ಒಪ್ಪಂದ: ಭಾರತದ ‘ಅಸ್ತ್ರ’ ಕ್ಷಿಪಣಿ ಖರೀದಿಸಲಿರುವ ಇಂಡೋನೇಷಿಯಾ

    ಭಾರತ ಮತ್ತು ಇಂಡೋನೇಷಿಯಾ ನಡುವೆ ಮಹತ್ವದ ರಕ್ಷಣಾ ಒಪ್ಪಂದ ಏರ್ಪಟ್ಟಿದೆ. DRDO ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ‘ಅಸ್ತ್ರ’ ವೈಮಾನಿಕ ಕ್ಷಿಪಣಿಗಳನ್ನು ಭಾರತದಿಂದ ಖರೀದಿಸಲು ಇಂಡೋನೇಷಿಯಾ ಸಹಿ ಹಾಕಿದೆ. ಇದು ಜಾಗತಿಕ ರಕ್ಷಣಾ ಮಾರುಕಟ್ಟೆಯಲ್ಲಿ ಭಾರತದ ರಫ್ತು ಸಾಮರ್ಥ್ಯ ಹಾಗೂ ಸ್ವಾವಲಂಬನೆಗೆ ಸಂದ ದೊಡ್ಡ ಯಶಸ್ಸಾಗಿದೆ.

  • 07 Jul 2026 10:08 AM (IST)

    Shivamogga Rain update: ಸಾಗರದಲ್ಲಿ ರಣಮಳೆಗೆ ಆಟೋ ಚಾಲಕನ ಮನೆ ಚಾವಣಿ ಕುಸಿತ

    ಸಾಗರದ ಎಸ್.ಎನ್. ನಗರದಲ್ಲಿ ಭಾರೀ ಮಳೆಗೆ ಆಟೋ ಚಾಲಕ ಮಂಜುನಾಥ್ ಎಂಬುವವರ ಮನೆಯ ಚಾವಣಿ ಕುಸಿದಿದೆ. ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಾಗೂ ಜೀವ ಭಯದಿಂದ ಇಡೀ ರಾತ್ರಿ ಆತಂಕದಲ್ಲಿ ಕಳೆದಿದ್ದು, ಸರ್ಕಾರದ ತುರ್ತು ನೆರವಿಗಾಗಿ ಸಂತ್ರಸ್ತ ಕುಟುಂಬ ಕಣ್ಣೀರು ಹಾಕುತ್ತಾ ಅಂಗಲಾಚುತ್ತಿದೆ.

Breaking News Today Live Updates in Kannada: ಕರ್ನಾಟಕ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ 6 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರಿನ 5 ಹೋಬಳಿಗಳ ಶಾಲೆಗಳಿಗೆ, ಶೃಂಗೇರಿಯ ಶಾಲಾ-ಕಾಲೇಜುಗಳಿಗೆ ಮತ್ತು ಕಳಸದ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡಲಾಗಿದೆ. ಇತ್ತ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಮತ್ತೊಂದೆಡೆ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ದಟ್ಟವಾದ ಮಂಜು ಆವರಿಸಿದೆ. ಇದರಿಂದಾಗಿ NH 173 ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಯಿಂದಾಗಿ ಘಾಟಿಯಲ್ಲಿ ಸುಂದರ ಜಲಪಾತಗಳು ಸೃಷ್ಟಿಯಾಗಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

YouTube video player

 

 

 

Published On - 10:05 am, Tue, 7 July 26

Follow Us