TV9 Kannada News Live: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬಿಗ್ ಶಾಕ್; ಬೆಳಗಾವಿಯಲ್ಲಿ ಪ್ರವಾಹದ ಭೀತಿ, ಇಲ್ಲಿದೆ ಇಂದಿನ ಪ್ರಮುಖ ಸುದ್ದಿಗಳು
Karnataka News Today Live Updates: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ. ಮಹಾರಾಷ್ಟ್ರ ಮಳೆಯಿಂದ ಬೆಳಗಾವಿ ಕಾರದಗಾ ಗ್ರಾಮಕ್ಕೆ ಪ್ರವಾಹ ಭೀತಿ. ಬಿಬಿಎಂಪಿ ಫುಟ್ಪಾತ್ ತೆರವು ವಿರೋಧಿಸಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ. ಬದರಿನಾಥ ದೇವಾಲಯದ ಕೋಟ್ಯಂತರ ರೂ. ಅಕ್ರಮಗಳ ಬಗ್ಗೆ ಉತ್ತರಾಖಂಡ ಸರ್ಕಾರದಿಂದ ಉನ್ನತ ಮಟ್ಟದ ತನಿಖೆಗೆ ಆದೇಶ. ಇಂದಿನ ಪ್ರಮುಖ ಲೈವ್ ಸುದ್ದಿಗಳ ಸಂಪೂರ್ಣ ಅಪ್ಡೇಟ್ ಇಲ್ಲಿದೆ.

LIVE NEWS & UPDATES
-
ಬದರಿನಾಥ ದೇವಾಲಯದ ದೇಣಿಗೆ ಅಕ್ರಮ ಹಗರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ
ಪ್ರಸಿದ್ಧ ಬದರಿನಾಥ ದೇವಾಲಯದಲ್ಲಿ ಭಕ್ತರು ನೀಡುವ ದೇಣಿಗೆ ಮತ್ತು ಕಾಣಿಕೆಗಳಿಗೆ ಸಂಬಂಧಿಸಿದಂತೆ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮಗಳ ದೂರಿನ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಉನ್ನತ ಮಟ್ಟದ ಸಮಿತಿ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ನೇರ ಸೂಚನೆಯ ಮೇರೆಗೆ ಮೂರು ಸದಸ್ಯರ ಹೈ-ಲೆವೆಲ್ ಕಮಿಟಿ ರಚಿಸಲಾಗಿದೆ.
-
ಬೆಳಗಾವಿಯಲ್ಲಿ ಪ್ರವಾಹದ ಭೀತಿ: ಕಾರದಗಾ ಗ್ರಾಮಕ್ಕೆ ನುಗ್ಗಿದ ದೂದಗಂಗಾ ನದಿ ನೀರು
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮಕ್ಕೆ ಪ್ರವಾಹದ ಆತಂಕ ಶುರುವಾಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ದೂದಗಂಗಾ ನದಿಯ ನೀರು ನೇರವಾಗಿ ಗ್ರಾಮದ ಊರ ಬಾಗಿಲಿಗೆ ಬಂದು ತಲುಪಿದೆ.
-
-
ರಾಜ್ಯಾದ್ಯಂತ ಏಕಕಾಲಕ್ಕೆ ಹಲವು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕಂಕಣ ಬದ್ಧವಾಗಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
Breaking News Today Live Updates in Kannada: ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕಂಕಣ ಬದ್ಧವಾಗಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಭಾರಿ ಶಾಕ್ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮಕ್ಕೆ ಪ್ರವಾಹದ ಆತಂಕ ಶುರುವಾಗಿದೆ. ಒತ್ತುವರಿ ತೆರವು ಹೆಸರಿನಲ್ಲಿ ಬಿಬಿಎಂಪಿ ನಡೆಸುತ್ತಿರುವ ಫುಟ್ಪಾತ್ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ರಾಜಧಾನಿಯ ಬೀದಿ ಬದಿ ವ್ಯಾಪಾರಿಗಳು ಇಂದು ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಪ್ರಸಿದ್ಧ ಬದರಿನಾಥ ದೇವಾಲಯದಲ್ಲಿ ಭಕ್ತರು ನೀಡುವ ದೇಣಿಗೆ ಮತ್ತು ಕಾಣಿಕೆಗಳಿಗೆ ಸಂಬಂಧಿಸಿದಂತೆ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮಗಳ ದೂರಿನ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರ ಉನ್ನತ ಮಟ್ಟದ ಸಮಿತಿ ತನಿಖೆಗೆ ಆದೇಶಿಸಿದೆ. ಹೀಗೆ ಇಂದಿನ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ ಇಲ್ಲಿದೆ ನೋಡಿ.
Published On - Jul 08,2026 9:30 AM




