AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್; ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗ್ಯಾಂಬ್ಲಿಂಗ್ ಬ್ಯಾನ್!

Online Gambling Ban in Karnataka: ರಾಜ್ಯದಲ್ಲಿ ಆನ್​ಲೈನ್ ಗೇಮ್ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ಆದೇಶ ಅಧಿಕೃತವಾಗಿ ಹೊರಬಿದ್ದಂತಾಗಿದೆ.

ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್; ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗ್ಯಾಂಬ್ಲಿಂಗ್ ಬ್ಯಾನ್!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 10, 2021 | 2:38 PM

Share

ಆನ್‌ಲೈನ್ ಜೂಜುಕೋರರಿಗೆ ಸರ್ಕಾರದಿಂದ ಶಾಕ್ ನೀಡಲಾಗಿದ್ದು, ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಗ್ಯಾಂಬ್ಲಿಂಗ್ (Online gambling)​ ಅನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಡ್ರೀಮ್ ಇಲೆವೆನ್ (Dream 11), ಪೇ ಟೀಂ ಫಸ್ಟ್ (PayTM first), ಗೇಮ್​ಜಿ (Gamezy) ಆ್ಯಪ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್ (Fantasy gamess) ಆಪ್​ಗಳನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗಷ್ಟೇ ಸರ್ಕಾರ ಆನ್‌ಲೈನ್ ಗೇಮ್‌, ಆನ್‌ಲೈನ್ ಜೂಜು, ಬೆಟ್ಟಿಂಗ್‌ಗೆ ನಿಷೇಧ ಹೇರಿತ್ತು. ಇದೀಗ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಆನ್‌ಲೈನ್ ಜೂಜು ನಿಷೇಧದ ಆದೇಶ ಅಧಿಕೃತವಾಗಿ ಹೊರಬಿದ್ದಿದೆ.

ಇತ್ತೀಚೆಗಷ್ಟೇ ಸರ್ಕಾರ ಲಾಟರಿ ಹೊರತುಪಡಿಸಿ, ಕಂಪ್ಯೂಟರ್ ಮತ್ತು ಮೊಬೈಲ್ ‌ಸೇರಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಹಣದ ವ್ಯವಹಾರ ನಡೆಸುವ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿತ್ತು. ಈಗಾಗಲೇ ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ಆನ್​ಲೈನ್ ಜೂಜನ್ನು ನಿಷೇಧಿಸಲಾಗಿದೆ. ತಮಿಳು ನಾಡು ಸರ್ಕಾರವೂ ಈ ಕುರಿತು ಆದೇಶ ಹೊರಡಿಸಿದೆ. ಆದರೆ ಅಲ್ಲಿ ಪ್ರಕರಣವು ಸದ್ಯ ನ್ಯಾಯಾಲಯದಲ್ಲಿರುವುದರಿಂದ ಸಂಪೂರ್ಣವಾಗಿ ನಿಷೇಧವನ್ನು ಜಾರಿಗೊಳಿಸಲಾಗಿಲ್ಲ. ಇದೀಗ ಕರ್ನಾಟಕದಲ್ಲಿ ಆನ್​ಲೈನ್ ಜೂಜಿಗೆ ಅಧಿಕೃತವಾಗಿ ನಿಷೇಧದ ಆದೇಸ ಹೊರಬಿದ್ದಿದೆ. ಇತ್ತೀಚೆಗಷ್ಟೇ ಎಂಪಿಎಲ್ ಸೇರಿದಂತೆ ಹಲವು ಫ್ಯಾಂಟಸಿ ಗೇಮ್​ಗಳು ಕರ್ನಾಟಕ ರಾಜ್ಯದ ಬಳಕೆದಾರರಿಗೆ ಆಡಲು, ಸರ್ಕಾರದಿಂದ ಅನುಮತಿ ಇಲ್ಲ ಎಂಬ ಸಂದೇಶವನ್ನು ಪ್ರಕಟಿಸಿದ್ದವು.

ಆನ್​ಲೈನ್ ಜೂಜನ್ನು ಪ್ರಸ್ತುತಪಡಿಸುವ ಈ ಆಪ್​ಗಳು ಇದುವರೆಗೆ ಇವುಗಳನ್ನು ಕೌಶಲ್ಯಯುತ ಆಟಗಳು ಎಂದು ಕರೆಯುತ್ತಿದ್ದವು. ಆದ್ದರಿಂದಲೇ ಭಾರತೀಯ ಕಾನೂನಿನಲ್ಲಿ ಅವುಗಳಿಗೆ ಕಠಿಣವಾದ ನಿಯಮಗಳು ಅನ್ವಯವಾಗುತ್ತಿರಲಿಲ್ಲ. ಇದೀಗ ಕರ್ನಾಟಕದ ಆನ್​ಲೈನ್ ಜೂಜು ನಿಷೇಧ ಕಾಯ್ದೆಯ ಅನ್ವಯ, ‘ಕೌಶಲ್ಯಯುತ ಆಟಗಳೂ ಸೇರಿದಂತೆ, ಆನ್​ಲೈನ್ ಗೇಮ್​ಗಳಲ್ಲಿ, ಫಲಿತಾಂಶ ಖಚಿತವಾಗಿರದ ಆಟಗಳಲ್ಲಿ ಹಣವನ್ನು ಒಡ್ಡುವುದು ಅಪರಾಧ’ ಎಂದು ಕಾಯ್ದೆ ಹೇಳುತ್ತದೆ. ಈ ಮೂಲಕ ಆನ್​ಲೈನ್ ಜೂಜಿಗೆ ನಿಷೇಧ ಹೇರಿದೆ.

ಇದನ್ನೂ ಓದಿ:

ಆನ್​ಲೈನ್ ಗೇಮ್ ಬ್ಯಾನ್: ಅನ್ನಪೂರ್ಣೇಶ್ವರಿ ನಗರದಲ್ಲಿ ಡ್ರೀಮ್ 11 ಆನ್ಲೈನ್ ಗೇಮ್ ಆ್ಯಪ್ ವಿರುದ್ಧ ಎಫ್ಐಆರ್

ಆನ್‌ಲೈನ್ ಗ್ಯಾಂಬ್ಲಿಂಗ್ ಗೇಮ್‌ ನಿಷೇಧಕ್ಕೆ ಕರ್ನಾಟಕ ಸರ್ಕಾರ ತೀರ್ಮಾನ: ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಪ್ರಕಟ

Published On - 2:13 pm, Sun, 10 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ