
ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ಯಾರಂಟಿ ದಾಖಲೆ ಬೇಕು, ಫೋಟೋ ಐಡೆಂಟಿಫಿಕೇಷನ್ ಬೇಕು ಎಂದು ಅವರು ಹೇಳಿದ್ದಾರೆ. ಈ ಹಿಂದೆ ತರಾತುರಿಯಲ್ಲಿ ಯಾರದ್ದೋ ನಂಬರ್ ಕೊಟ್ಟಿದ್ದಾರೆ, ಆದರೆ ಗೃಹಲಕ್ಷ್ಮಿ ಹಣ ಬೇರೆ ಯಾರದ್ದೋ ಅಕೌಂಟ್ಗೆ ಹೋಗುತ್ತಿದೆ. ಫಲಾನುಭವಿಗಳ ಖಾತೆಗೇ ಹಣ ಹೋಗಬೇಕು. ನಾವು ಕರ್ನಾಟಕದವರಿಗೆ ಮಾತ್ರ ಗ್ಯಾರಂಟಿಗಳನ್ನು ಕೊಡುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ನದಿ ಮತ್ತು ಹಿನ್ನೀರಿನ ಪ್ರಾಕೃತಿಕ ಸೌಂದರ್ಯಕ್ಕೆ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಮನಸೋತಿದ್ದು, ಎಕ್ಸ್ ಸಂದೇಶದ ಮೂಲಕ ಅದನ್ನು ವ್ಯಕ್ತಪಡಿಸಿದ್ದಾರೆ. ಕೇರಳದ ಹಿನ್ನೀರುಗಳ ಸೌಂದರ್ಯದ ಜತೆ ಹೋಲಿಸಿ, ಕರ್ನಾಟಕದ ಶರಾವತಿ ಹಿನ್ನೀರು ಸಹ ಯಾವುದಕ್ಕೂ ಕಡಿಮೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಮತ್ತಷ್ಟು ಓದಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ವಿಡಿಯೋ ನೋಡಿ
ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಸೋಮವಾರ ನಿಧನರಾದರು.
ರಾಮನಗರ ಕಾಂಗ್ರೆಸ್ ಶಾಸಕ, ಸಿಎಂ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಈ ಹಿಂದೆ ಹಾರ್ಟ್ ಬ್ಲಾಕ್ ಆಗಿತ್ತು. ಸ್ಟೆಂಟ್ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು.
ಮಂತ್ರಾಲಯದಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಪರದಾಡುವಂತಾಯಿತು. ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡು ಭಕ್ತರು ಪರದಾಡಿದರು. ವಿಡಿಯೋ ನೋಡಿ
ಭಾರತೀಯ ಷೇರು ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲೇ ಜಿಗಿತ ಕಂಡಿವೆ. ಆರಂಭಿಕ ಹಂತದಲ್ಲಿ, ಸೆನ್ಸೆಕ್ಸ್ 1,100 ಪಾಯಿಂಟ್ಗಳಿಗಿಂತ ಹೆಚ್ಚು ಜಿಗಿದರೆ, ನಿಫ್ಟಿ 350 ಪಾಯಿಂಟ್ಗಳ ಏರಿಕೆ ಕಂಡಿತು. ಏತನ್ಮಧ್ಯೆ, ಡಾಲರ್ ಎದುರು ರೂಪಾಯಿ ಮೌಲ್ಯ 79 ಪೈಸೆ ಏರಿಕೆಯಾಗಿ 94.68 ಕ್ಕೆ ವಹಿವಾಟು ಆರಂಭಿಸಿತು, ಶುಕ್ರವಾರದ ವಹಿವಾಟಿನ ಮುಕ್ತಾಯದ ವೇಳೆಗೆ ಇದು 95.11 ಕ್ಕೆ ತಲುಪಿತ್ತು.
ಯುಎಸ್-ಇರಾನ್ ಮಹತ್ವದ ಒಪ್ಪಂದ ಘೋಷಣೆ ಬೆನ್ನಲ್ಲೇ ಜಾಗತಿಕ ಷೇರು ಮಾರುಕಟ್ಟೆ ಜಿಗಿತ ಕಂಡಿದೆ. ಏಷ್ಯಾ-ಪೆಸಿಫಿಕ್ ಮಾರುಕಟ್ಟೆಯಲ್ಲಿ ಹೂಡಿಕೆದಾರರಲ್ಲಿ ಮಂದಹಾಸ ಮೂಡಿದೆ. ಜಪಾನ್ನ ಪ್ರಮುಖ ಸೂಚ್ಯಂಕ ‘ನಿಕಿ 225’ ಶೇಕಡಾ 5 ಕ್ಕಿಂತಲೂ ಹೆಚ್ಚು ತೀವ್ರ ಏರಿಕೆ ಕಂಡಿದೆ. ದಕ್ಷಿಣ ಕೊರಿಯಾದ ಮುಂಚೂಣಿ ಸೂಚ್ಯಂಕ ‘ಕೋಸ್ಪಿ’ ಶೇಕಡಾ 5.7 ರಷ್ಟು ಭಾರಿ ಜಿಗಿತ ಕಂಡಿದೆ. ತೈವಾನ್ನ ‘ಟೈಯೆಕ್ಸ್’ ಶೇಕಡಾ 2.7 ಹಾಗೂ ಆಸ್ಟ್ರೇಲಿಯಾದ ‘ASX200’ ಶೇಕಡಾ 1.5 ರಷ್ಟು ವೃದ್ಧಿಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಗಣನೀಯವಾಗಿ ಕುಸಿದಿದ್ದು, ಬ್ರೆಂಟ್ ಕಚ್ಚಾ ತೈಲ ದರ ಶೇಕಡಾ 4 ಕ್ಕಿಂತಲೂ ಹೆಚ್ಚು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು 83.70 ಡಾಲರ್ಗೆ ಇಳಿಕೆಯಾಗಿದೆ.
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಕೊನೆಗೊಳಿಸುವಿಕೆ ಒಪ್ಪಂದ ಸಿದ್ಧಗೊಂಡ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಶೇ 4ರಷ್ಟು ಕುಸಿತ ಕಂಡು 80 ಡಾಲರ್ಗೆ ಇಳಿಕೆಯಾಗಿದೆ. ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ ಇದೆ. ಮತ್ತಷ್ಟು ಓದಿ
Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ ಬೆಳವಣಿಗೆಗಳ ಪರಿಣಾಮ ಷೇರುಮಾರುಕಟ್ಟೆ ಚೇತರಿಕೆ ಕಂಡಿದೆ. ಇತ್ತ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ ಪರಿಷತ್ ಚುನಾವಣೆಯ ರಾಜಕೀಯ ಕಾವೇರಿದೆ. ಅಡ್ಡಮತದಾನದ ಭೀತಿ ಹಿನ್ನೆಲೆ ರೆಸಾಟರ್ಟ್ ರಾಜಕೀಯ ಶುರುವಾಗಿದೆ. ದಿನದ ಪ್ರಮುಖ ವಿದ್ಯಮಾನಗಳ ತಾಜಾ ಅಪ್ಡೇಟ್ ಪಡೆಯಲು ಈ ಪುಟವನ್ನು ಆಗಾಗ್ಗೆ ರಿಫ್ರೆಷ್ ಮಾಡುತ್ತಿರಿ.
Published On - 10:18 am, Mon, 15 June 26