Breaking News Today Live: ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ: ಸಿಎಂ ಡಿಕೆ ಶಿವಕುಮಾರ್

TV9 Kannada News Live Updates: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಳ್ಳುತ್ತಿದೆ. ಮತ್ತೊಂದೆಡೆ, ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ ಎದುರಾಗಿದ್ದು ರೆಸಾರ್ಟ್ ರಾಜಕೀಯ ಶುರುವಾಗಿದ್ದರೆ ಅತ್ತ ಇರಾನ್-ಅಮೆರಿಕ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದು, ಭಾರತದಲ್ಲಿ ಷೇರುಮಾರುಕಟ್ಟೆ ಚೇತರಿಕೆ ಕಂಡಿದೆ. ಇಂದಿನ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಅಪ್​ಡೇಟ್ಸ್ ಇಲ್ಲಿವೆ.

Breaking News Today Live: ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ: ಸಿಎಂ ಡಿಕೆ ಶಿವಕುಮಾರ್
ಸಿಎಂ ಡಿಕೆ ಶಿವಕುಮಾರ್
Image Credit source: tv9

Updated on: Jun 15, 2026 | 12:22 PM

LIVE NEWS & UPDATES

  • 15 Jun 2026 12:21 PM (IST)

    ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ: ಸಿಎಂ ಡಿಕೆ ಶಿವಕುಮಾರ್

    ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ಯಾರಂಟಿ ದಾಖಲೆ ಬೇಕು, ಫೋಟೋ ಐಡೆಂಟಿಫಿಕೇಷನ್ ಬೇಕು ಎಂದು ಅವರು ಹೇಳಿದ್ದಾರೆ. ಈ ಹಿಂದೆ ತರಾತುರಿಯಲ್ಲಿ ಯಾರದ್ದೋ ನಂಬರ್ ಕೊಟ್ಟಿದ್ದಾರೆ, ಆದರೆ ಗೃಹಲಕ್ಷ್ಮಿ ಹಣ ಬೇರೆ ಯಾರದ್ದೋ ಅಕೌಂಟ್​ಗೆ ಹೋಗುತ್ತಿದೆ. ಫಲಾನುಭವಿಗಳ ಖಾತೆಗೇ ಹಣ ಹೋಗಬೇಕು. ನಾವು ಕರ್ನಾಟಕದವರಿಗೆ ಮಾತ್ರ ಗ್ಯಾರಂಟಿಗಳನ್ನು ಕೊಡುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

  • 15 Jun 2026 12:17 PM (IST)

    ಶರಾವತಿ ಹಿನ್ನೀರಿನ ಸೌಂದರ್ಯ ಬಣ್ಣಿಸಿ ಆನಂದ್ ಮಹೀಂದ್ರಾ ಪೋಸ್ಟ್

    ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ನದಿ ಮತ್ತು ಹಿನ್ನೀರಿನ ಪ್ರಾಕೃತಿಕ ಸೌಂದರ್ಯಕ್ಕೆ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಮನಸೋತಿದ್ದು, ಎಕ್ಸ್ ಸಂದೇಶದ ಮೂಲಕ ಅದನ್ನು ವ್ಯಕ್ತಪಡಿಸಿದ್ದಾರೆ. ಕೇರಳದ ಹಿನ್ನೀರುಗಳ ಸೌಂದರ್ಯದ ಜತೆ ಹೋಲಿಸಿ, ಕರ್ನಾಟಕದ ಶರಾವತಿ ಹಿನ್ನೀರು ಸಹ ಯಾವುದಕ್ಕೂ ಕಡಿಮೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಮತ್ತಷ್ಟು ಓದಿ

  • 15 Jun 2026 12:15 PM (IST)

    ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಹೆಚ್​ಡಿಕೆ

    ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ವಿಡಿಯೋ ನೋಡಿ

  • 15 Jun 2026 11:05 AM (IST)

    ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ನಿಧನ

    ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಸೋಮವಾರ ನಿಧನರಾದರು.

  • 15 Jun 2026 10:46 AM (IST)

    ಇಕ್ಬಾಲ್ ಹುಸೇನ್ ಆಸ್ಪತ್ರೆಗೆ ದಾಖಲು

    ರಾಮನಗರ ‌ಕಾಂಗ್ರೆಸ್ ಶಾಸಕ, ಸಿಎಂ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಈ ಹಿಂದೆ ಹಾರ್ಟ್ ಬ್ಲಾಕ್ ಆಗಿತ್ತು. ಸ್ಟೆಂಟ್ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು.

  • 15 Jun 2026 10:28 AM (IST)

    ಮಂತ್ರಾಲಯದಲ್ಲಿ ವರುಣಾರ್ಭಟ

    ಮಂತ್ರಾಲಯದಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಪರದಾಡುವಂತಾಯಿತು. ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡು ಭಕ್ತರು ಪರದಾಡಿದರು. ವಿಡಿಯೋ ನೋಡಿ

  • 15 Jun 2026 10:26 AM (IST)

    ಭಾರತೀಯ ಷೇರು ಮಾರುಕಟ್ಟೆಯಲ್ಲೂ ಭಾರಿ ಜಿಗಿತ

    ಭಾರತೀಯ ಷೇರು ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲೇ ಜಿಗಿತ ಕಂಡಿವೆ. ಆರಂಭಿಕ ಹಂತದಲ್ಲಿ, ಸೆನ್ಸೆಕ್ಸ್ 1,100 ಪಾಯಿಂಟ್‌ಗಳಿಗಿಂತ ಹೆಚ್ಚು ಜಿಗಿದರೆ, ನಿಫ್ಟಿ 350 ಪಾಯಿಂಟ್‌ಗಳ ಏರಿಕೆ ಕಂಡಿತು. ಏತನ್ಮಧ್ಯೆ, ಡಾಲರ್ ಎದುರು ರೂಪಾಯಿ ಮೌಲ್ಯ 79 ಪೈಸೆ ಏರಿಕೆಯಾಗಿ 94.68 ಕ್ಕೆ ವಹಿವಾಟು ಆರಂಭಿಸಿತು, ಶುಕ್ರವಾರದ ವಹಿವಾಟಿನ ಮುಕ್ತಾಯದ ವೇಳೆಗೆ ಇದು 95.11 ಕ್ಕೆ ತಲುಪಿತ್ತು.

  • 15 Jun 2026 10:23 AM (IST)

    ಜಾಗತಿಕ ಷೇರು ಮಾರುಕಟ್ಟೆ ಜಿಗಿತ

    ಯುಎಸ್-ಇರಾನ್ ಮಹತ್ವದ ಒಪ್ಪಂದ ಘೋಷಣೆ ಬೆನ್ನಲ್ಲೇ ಜಾಗತಿಕ ಷೇರು ಮಾರುಕಟ್ಟೆ ಜಿಗಿತ ಕಂಡಿದೆ. ಏಷ್ಯಾ-ಪೆಸಿಫಿಕ್ ಮಾರುಕಟ್ಟೆಯಲ್ಲಿ ಹೂಡಿಕೆದಾರರಲ್ಲಿ ಮಂದಹಾಸ ಮೂಡಿದೆ. ​ಜಪಾನ್‌ನ ಪ್ರಮುಖ ಸೂಚ್ಯಂಕ ‘ನಿಕಿ 225’ ಶೇಕಡಾ 5 ಕ್ಕಿಂತಲೂ ಹೆಚ್ಚು ತೀವ್ರ ಏರಿಕೆ ಕಂಡಿದೆ. ​ದಕ್ಷಿಣ ಕೊರಿಯಾದ ಮುಂಚೂಣಿ ಸೂಚ್ಯಂಕ ‘ಕೋಸ್ಪಿ’ ಶೇಕಡಾ 5.7 ರಷ್ಟು ಭಾರಿ ಜಿಗಿತ ಕಂಡಿದೆ. ​ತೈವಾನ್‌ನ ‘ಟೈಯೆಕ್ಸ್’ ಶೇಕಡಾ 2.7 ಹಾಗೂ ಆಸ್ಟ್ರೇಲಿಯಾದ ‘ASX200’ ಶೇಕಡಾ 1.5 ರಷ್ಟು ವೃದ್ಧಿಯಾಗಿದೆ. ​ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಗಣನೀಯವಾಗಿ ಕುಸಿದಿದ್ದು, ಬ್ರೆಂಟ್ ಕಚ್ಚಾ ತೈಲ ದರ ಶೇಕಡಾ 4 ಕ್ಕಿಂತಲೂ ಹೆಚ್ಚು ಇಳಿಕೆಯಾಗಿದೆ. ​ಪ್ರತಿ ಬ್ಯಾರೆಲ್ ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು 83.70 ಡಾಲರ್‌ಗೆ ಇಳಿಕೆಯಾಗಿದೆ.

  • 15 Jun 2026 10:21 AM (IST)

    ಕಚ್ಚಾ ತೈಲ ಬೆಲೆ ಭಾರೀ ಇಳಿಕೆ

    ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಕೊನೆಗೊಳಿಸುವಿಕೆ ಒಪ್ಪಂದ ಸಿದ್ಧಗೊಂಡ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಶೇ 4ರಷ್ಟು ಕುಸಿತ ಕಂಡು 80 ಡಾಲರ್​​ಗೆ ಇಳಿಕೆಯಾಗಿದೆ. ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ ಇದೆ. ಮತ್ತಷ್ಟು ಓದಿ

Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ ಬೆಳವಣಿಗೆಗಳ ಪರಿಣಾಮ ಷೇರುಮಾರುಕಟ್ಟೆ ಚೇತರಿಕೆ ಕಂಡಿದೆ. ಇತ್ತ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ ಪರಿಷತ್ ಚುನಾವಣೆಯ ರಾಜಕೀಯ ಕಾವೇರಿದೆ. ಅಡ್ಡಮತದಾನದ ಭೀತಿ ಹಿನ್ನೆಲೆ ರೆಸಾಟರ್ಟ್ ರಾಜಕೀಯ ಶುರುವಾಗಿದೆ. ದಿನದ ಪ್ರಮುಖ ವಿದ್ಯಮಾನಗಳ ತಾಜಾ ಅಪ್​ಡೇಟ್ ಪಡೆಯಲು ಈ ಪುಟವನ್ನು ಆಗಾಗ್ಗೆ ರಿಫ್ರೆಷ್ ಮಾಡುತ್ತಿರಿ.

Published On - 10:18 am, Mon, 15 June 26

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us