AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News ಬಿಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ

ಭ್ರಷ್ಟಾಚಾರ ತಡೆ ಕಾಯ್ದೆಯಡಿ ತಮ್ಮ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣದ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಮೆಟ್ಟಿಲೇರಿದ್ದರು

Breaking News ಬಿಎಸ್ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ
ಬಿ ಎಸ್ ಯಡಿಯೂರಪ್ಪ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 23, 2022 | 1:02 PM

Share

ಕೊನದಾಸಪುರದಲ್ಲಿ ಬಿಡಿಎಯಿಂದ ಫ್ಲಾಟ್ ನಿರ್ಮಾಣದಲ್ಲಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa) ವಿರುದ್ಧದ ತನಿಖೆಗೆ ಸುಪ್ರೀಂಕೋರ್ಟ್ (Supreme Court) ಮಧ್ಯಂತರ ತಡೆ ನೀಡಿದೆ .ಯಡಿಯೂರಪ್ಪ ಜನಪ್ರತಿನಿಧಿಯಾಗಿರುವ ಹಿನ್ನೆಲೆಯಲ್ಲಿ ತನಿಖೆಗೆ ತಡೆ ನೀಡಲಾಗಿದೆ. ರಾಜ್ಯಪಾಲರ ಪೂರ್ವಾನುಮತಿ ಅಗತ್ಯ ಎಂದು ವಾದಿಸಿದ ಬಿಎಸ್ ವೈ ಪರ ವಕೀಲರು ಇಂದು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ್ದು, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತನಿಖೆಗೆ ತಡೆ ಆದೇಶ ನೀಡಿದೆ. ‘ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇರಲಿಲ್ಲ. ಹಾಗಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಇದಕ್ಕೆ ತಡೆ ನೀಡಬೇಕು ಎಂದು ಯಡಿಯೂರಪ್ಪ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಸಚಿವ ಎಸ್ ಟಿ ಸೋಮಶೇಖರ್ ಬಿಡಿಎ ಅಧ್ಯಕ್ಷ ಆಗಿದ್ದ ವೇಳೆ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ ಬಿಎಸ್ ವೈ ಪುತ್ರ ವಿಜಯೇಂದ್ರ ಕೂಡ ಆರೋಪಿ ಆಗಿದ್ದಾರೆ. ಒಟ್ಟು ಒಂಭತ್ತು ಮಂದಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ ನೀಡಿತ್ತು.

ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್ 4 ವಾರಗಳ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಅದೇ ವೇಳೆ ವಿಜಯೇಂದ್ರ ಸೇರಿ ಉಳಿದವರ ವಿರುದ್ಧ ತನಿಖೆ ಮುಂದುವರಿಯಲಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದ ಪ್ರಕರಣದಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಲೋಕಾಯುಕ್ತಕ್ಕೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು.

Published On - 12:39 pm, Fri, 23 September 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?