ಲಂಚ ಪ್ರಕರಣ: ಜಾಮೀನು ಪಡೆದು ಹೊರಬಂದ ಪಿಡಿಒ ರಮ್ಯಾಗೆ ಅದ್ಧೂರಿ ಸ್ವಾಗತ

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ರಮ್ಯಾ ಅವರನ್ನು ರಾಮನಗರ ಎಸಿಬಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜನವರಿ 16ರಂದು ಕನಕಪುರ ಕೋರ್ಟ್ ರಮ್ಯಾ ಅವರಿಗೆ ಜಾಮೀನು ನೀಡಿತ್ತು.

ಲಂಚ ಪ್ರಕರಣ: ಜಾಮೀನು ಪಡೆದು ಹೊರಬಂದ ಪಿಡಿಒ ರಮ್ಯಾಗೆ ಅದ್ಧೂರಿ ಸ್ವಾಗತ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ Edited By:

Updated on: Jan 19, 2021 | 6:33 PM

ರಾಮನಗರ:  ಲಂಚ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪಿಡಿಒ ರಮ್ಯಾ ಜಾಮೀನು ಪಡೆದು ಹೊರಬಂದಿದ್ದಾರೆ. ಜಾಮೀನಿನ ಮೇಲೆ ಹೊರಬಂದ  ರಮ್ಯಾ ಅವರಿಗೆ ತೋಕಸಂದ್ರ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದ್ದಾರೆ.

57 ಸಾವಿರ ಲಂಚ ಸ್ವೀಕರಿಸಿದ್ದ ರಮ್ಯಾ ಅವರನ್ನು ಜನವರಿ 15ರಂದು ಎಸಿಬಿ ಬಂಧಿಸಿತ್ತು. ನರೇಗಾ ಕಾಮಗಾರಿ ಸಂಬಂಧ ರಮ್ಯಾ ಅವರು ಸಿದ್ದೇಗೌಡ ಎಂಬವರಿಂದ 87 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ರಮ್ಯಾ ಅವರನ್ನು ರಾಮನಗರ ಎಸಿಬಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜನವರಿ 16ರಂದು ಕನಕಪುರ ಕೋರ್ಟ್ ರಮ್ಯಾ ಅವರಿಗೆ ಜಾಮೀನು ನೀಡಿತ್ತು.

ಪ್ರತ್ಯೇಕ ಪ್ರಕರಣ: ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ, ಸಬ್​ ರಿಜಿಸ್ಟ್ರಾರ್ ಎಸಿಬಿ ಬಲೆಗೆ

Published On - 6:33 pm, Tue, 19 January 21

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us