AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಗೋರಂಟಿ ಹಚ್ಚಿ ಮದುಮಗಳಾಗಿ ಹಸೆಮಣೆ ಏರಲು ಸಿದ್ಧವಾಗಿದ್ದ ಯುವತಿ ಕೊರೊನಾಗೆ ಬಲಿ

ಶ್ರುತಿ ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ. ಸಾವಿರಾರು ಕನಸುಗಳನ್ನು ಹೊತ್ತು ಮದುವೆಗೆ ಸಿದ್ಧವಾಗಬೇಕಿದ್ದ ಯುವತಿ. ಆದರೆ ಈ ಮಹಾಮಾರಿ ಕೊರೊನಾ ಆಕೆಯನ್ನು ಬಲಿಪಡೆದುಕೊಂಡಿದೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಕೈಗೆ ಗೋರಂಟಿ ಹಚ್ಚಿ ಮದುಮಗಳಾಗಿ ಹಸೆಮಣೆ ಏರಲು ಸಿದ್ಧವಾಗಿದ್ದ ಯುವತಿ ಕೊರೊನಾಗೆ ಬಲಿ
ಶ್ರುತಿ ಐಹೋಳಿ
ಆಯೇಷಾ ಬಾನು
ಆಯೇಷಾ ಬಾನು|

Updated on:May 17, 2021 | 8:51 AM

Share

ವಿಜಯಪುರ: ಹಸೆಮಣೆ ಏರಬೇಕಿದ್ದ ಯುವತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ಶ್ರುತಿ ಐಹೋಳಿ (24) ಎಂಬ ಯುವತಿ ಕೊರೊನಾ ಹಿನ್ನೆಲೆ ಮೃತಪಟ್ಟಿದ್ದಾರೆ.

ಶ್ರುತಿ ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿ. ಸಾವಿರಾರು ಕನಸುಗಳನ್ನು ಹೊತ್ತು ಮದುವೆಗೆ ಸಿದ್ಧವಾಗಬೇಕಿದ್ದ ಯುವತಿ. ಆದರೆ ಈ ಮಹಾಮಾರಿ ಕೊರೊನಾ ಆಕೆಯನ್ನು ಬಲಿಪಡೆದುಕೊಂಡಿದೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೇ 23 ರಂದು ಶ್ರುತಿ ವಿವಾಹ ನಿಶ್ಚಯವಾಗಿತ್ತು. ಆದರೆ ಕೊರೊನಾ ಕಾರಣದಿಂದ ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ಭಾವನ ಮನೆಯಲ್ಲಿ ಶ್ರುತಿ ಹಾಗೂ ಪೋಷಕರು ತಂಗ್ಗಿದ್ದರು.

ಶ್ರುತಿಗೆ ಯಾವುದೇ ಕೊರೊನಾ ಲಕ್ಷಣಗಳು ಕಂಡು ಬಂದಿರಲಿಲ್ಲ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಉಸಿರಾಟದ ತೊಂದರೆಯಾಗಿ ಕೊನೆ ಕ್ಷಣದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸರ್ಕಾರಿ ನಿಯಮದ ಪ್ರಕಾರ ಬಾಗಲಕೋಟೆ ಜಿಲ್ಲೆಯಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗಿದೆ. ಶ್ರುತಿ ವಿವಾಹಕ್ಕಾಗಿ ಒಂದು ತಿಂಗಳ ಮುಂಚೆಯೇ ಒಡವೆ, ವಸ್ತ್ರ ಹಾಗೂ ಇತರೆ ವಸ್ತುಗಳನ್ನು ಖರೀದಿಸಿದ್ದ ಪೋಷಕರು ಮಗಳನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ. ಮದುವೆ ಮನೆಯಲ್ಲಿ ಸೂತಕ ಆವರಿಸಿದೆ.

ಇದನ್ನೂ ಓದಿ: ಲಾಕ್​ಡೌನ್​ ಸಮಯದಲ್ಲಿ ಪ್ರಾಣಿಗಳಿಗೆ ಉಣಬಡಿಸಲು ಮುಂದಾದ ಜೈನ್ ಅನಿಮಲ್ ಕೇರ್ ಹಾಗೂ ಎಸ್​ಡಿವೈಜೆಎಮ್ ಸಂಸ್ಥೆ

Published On - 12:00 pm, Wed, 12 May 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್