AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಸೇತುವೆ ಕುಸಿತ; ಕಾವೂರಿನಿಂದ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್

ಮಂಗಳೂರು ನಗರದಿಂದ ವಿಮಾನ ನಿಲ್ದಾಣದತ್ತ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ ಗುರುಪುರ ರಸ್ತೆಯಾಗಿ ತೆರಳಬೇಕಿದೆ. ಸದ್ಯ ಮಂಗಳೂರಿನ ಕಾವೂರಿನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಸೇತುವೆ ಕುಸಿತ; ಕಾವೂರಿನಿಂದ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
TV9 Web
| Edited By: |

Updated on:Jun 15, 2021 | 10:54 AM

Share

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗ ಮಧ್ಯೆ ಸೇತುವೆ ಕುಸಿದಿರುವ ಘಟನೆ ಇಂದು ನಡೆದಿದೆ. ಮಂಗಳೂರು ಹೊರವಲಯದ ಬಜ್ಪೆ-ಮರವೂರು ನಡುವಿನ ಸೇತುವೆ ಕುಸಿದಿದ್ದು, ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದ ಕಾರಣ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಹೀಗಾಗಿ ಒಂದು ಭಾಗದ ಪಿಲ್ಲರ್ ಕುಸಿದು ಸೇತುವೆಗೆ ಹಾನಿಯಾಗಿದೆ.

ಸೇತುವೆ ಕುಸಿದಿರುವ ಕಾರಣ ಮಂಗಳೂರಿನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗ ಸಂಪೂರ್ಣ ಸ್ಥಗಿತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಬಂದ್ ಮಾಡಿರುವ ಮಂಗಳೂರು ಪೊಲೀಸರು, ಉಡುಪಿಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಮಂಗಳೂರು ನಗರದಿಂದ ವಿಮಾನ ನಿಲ್ದಾಣದತ್ತ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ ಗುರುಪುರ ರಸ್ತೆಯಾಗಿ ತೆರಳಬೇಕಿದೆ. ಸದ್ಯ ಮಂಗಳೂರಿನ ಕಾವೂರಿನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

MANGALURU BRIDGE DAMAGE

ಸೇತುವೆ ಕುಸಿದಿರುವ ದೃಶ್ಯ

ಸಂಕ್ಷಿಪ್ತ ಮಾಹಿತಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ಮರವೂರು ಸೇತುವೆ ಕುಸಿದಿರುವ ಕಾರಣ ಬದಲಿ ರಸ್ತೆಗಳು ಹೀಗಿವೆ: ಕಾವೂರು ಕೂಳೂರು – ಕೆ ಬಿ ಎಸ್ ಜೋಕಟ್ಟೆ, ಪೋರ್ಕೊಡಿ – ಬಜಪೆ ಅಥವಾ ಪಚ್ಚನಾಡಿ – ವಾಮಂಜೂರ್ – ಗುರುಪುರ ಕೈಕಂಬ – ಬಜಪೆ.

ಇದನ್ನೂ ಓದಿ: ಭಾರತದ ಮೂಲಕ ಕೆನಡಾಕ್ಕೆ ಅಕ್ರಮವಾಗಿ ತೆರಳುತ್ತಿದ್ದ ಶ್ರೀಲಂಕಾ ಪ್ರಜೆಗಳ ಬಂಧನ; ಮಾನವ ಕಳ್ಳಸಾಗಣೆ ಜಾಲ ಪತ್ತೆಹಚ್ಚಿದ ಮಂಗಳೂರು ಪೊಲೀಸರು 

ಮಂಗಳೂರು: ಅಗತ್ಯ ವಸ್ತುವಿನ ಸೋಗಿನಲ್ಲಿ ಹೊರ ರಾಜ್ಯದಿಂದ ಗಾಂಜಾ ಸಪ್ಲೇ; ನಾಲ್ವರು ವಶ

Published On - 7:50 am, Tue, 15 June 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ