AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ

54 ವರ್ಷದ ಬಾಲಕೃಷ್ಣ ಮೈಸೂರಿನಲ್ಲಿ ವಾಸ ಮಾಡುತ್ತಿದ್ದರು. ಲಾಕ್​ಡೌನ್​ ಕಾರಣ ಅರಳಕುಪ್ಪೆ ಗ್ರಾಮಕ್ಕೆ ಬಂದಿದ್ದರು. ಒಂದೇ ಮನೆಯ ಮಧ್ಯೆ ಗೋಡೆ ಹಾಕಿಕೊಂಡು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಜಮೀನು ವಿಚಾರವಾಗಿ ಅಣ್ಣ ಮತ್ತು ತಮ್ಮನ ನಡುವೆ ಜಗಳ ನಡೆಯುತ್ತಿತ್ತು.

ಮಂಡ್ಯ: ಜಮೀನು ವಿವಾದ; ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆ
ಸಾಂದರ್ಭಿಕ ಚಿತ್ರ
sandhya thejappa
|

Updated on: Jun 01, 2021 | 8:59 AM

Share

ಮಂಡ್ಯ: ಚಾಕು ಇರಿದು ತಮ್ಮನಿಂದಲೇ ಅಣ್ಣನ ಕೊಲೆಯಾಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ. ಬಾಲಕೃಷ್ಣ ಕೊಲೆಯಾದ ವ್ಯಕ್ತಿ. ಜಮೀನು ವಿವಾದ ಹಿನ್ನೆಲೆ ತಮ್ಮ ಸುರೇಶ್​ನಿಂದ ಈ ಕೃತ್ಯ ನಡೆದಿದೆ. ಜಗಳ ಬಿಡಿಸಲು ಹೋದ ಅತ್ತಿಗೆಗೂ ಸುರೇಶ್ ಚಾಕುವಿನಿಂದ ಇರಿದಿದ್ದಾನೆ. ಈ ಪ್ರಕರಣ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. 54 ವರ್ಷದ ಬಾಲಕೃಷ್ಣ ಮೈಸೂರಿನಲ್ಲಿ ವಾಸ ಮಾಡುತ್ತಿದ್ದರು. ಲಾಕ್​ಡೌನ್​ ಕಾರಣ ಅರಳಕುಪ್ಪೆ ಗ್ರಾಮಕ್ಕೆ ಬಂದಿದ್ದರು.

ಒಂದೇ ಮನೆಯ ಮಧ್ಯೆ ಗೋಡೆ ಹಾಕಿಕೊಂಡು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಜಮೀನು ವಿಚಾರವಾಗಿ ಅಣ್ಣ ಮತ್ತು ತಮ್ಮನ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ (ಮೇ 31) ಜಗಳ ವಿಕೋಪಕ್ಕೆ ತಿರುಗಿ ತಮ್ಮ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವೇಳೆ ಅತ್ತಿಗೆ ಸರಳ ಜಗಳ ಬಿಡಿಸಲು ಹೋದಾಗ ಸುರೇಶ್ ಆಕೆಗೂ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಸರಳರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪರಪ್ಪನ ಅಗ್ರಹಾರ ಕಾರಾಗೃಹದ ಕೈದಿಗಳಿಗೆ ವ್ಯಾಕ್ಸಿನೇಷನ್ ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಕೈದಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಕಾರಾಗೃಹದಲ್ಲಿ ಒಟ್ಟು 4,783 ಕೈದಿಗಳು ಇದ್ದಾರೆ. 2,500ಕ್ಕೂ ಹೆಚ್ಚು ಕೈದಿಗಳಿಗೆ ಇಂದು (ಜೂನ್ 1) ಕೊವಿಡ್ ಲಸಿಕೆ ನೀಡಲಾಗುತ್ತಿದೆ. ಉಳಿದ ಕೈದಿಗಳಿಗೆ ನಾಳೆ ಕೊವಿಡ್ ಲಸಿಕೆ ನೀಡಲಾಗುತ್ತದೆ. 530 ಮಂದಿ 45 ವರ್ಷ ಮೇಲ್ಪಟ್ಟರಾಗಿದ್ದಾರೆ. ಆರೋಪಿಗಳನ್ನು ಕರೆತರುವ ಪೊಲೀಸರಿಗೂ ಆರ್​ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಿರುವ ಕಾರಣ ಜೈಲಲ್ಲಿ ಸೋಂಕಿನ ಪ್ರಮಾಣ ಕಂಟ್ರೋಲ್ ತರುವಲ್ಲಿ ಜೈಲಾಧಿಕಾರಿಗಳು ಯಶಸ್ವಿ‌‌‌‌ಯಾಗಿದ್ದಾರೆ.

ಇದನ್ನೂ ಓದಿ

ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ ಪತ್ನಿಯ ತಲೆಗೆ ಗುಂಡಿಕ್ಕಿದ ಪತಿ; ಬಳಿಕ ಮೂವರು ಪುಟಾಣಿ ಮಕ್ಕಳನ್ನು ನಾಲೆಗೆ ಎಸೆದು ಕೊಲೆ

ನೆಲ್ಲೂರು ನಾಟಿ ವೈದ್ಯ ಆನಂದಯ್ಯ ಬಳಿ ಔಷಧಿ ಪಡೆದಿದ್ದ ವ್ಯಕ್ತಿ ಸಾವು

(brother has murdered his older brother in a land dispute at Mandya)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!