AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ತಂದೆ-ತಾಯಿಯ ಎದುರೇ ತಂಗಿಗೆ ಬೆಂಕಿ ಹಚ್ಚಿದ ಅಣ್ಣ

ಯುವತಿ ತಾಹಸೀನ್ ತೀವ್ರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಕಡಪ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಯಚೋಟಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹೈದರಾಬಾದ್: ತಂದೆ-ತಾಯಿಯ ಎದುರೇ ತಂಗಿಗೆ ಬೆಂಕಿ ಹಚ್ಚಿದ ಅಣ್ಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 16, 2021 | 11:50 AM

Share

ಹೈದರಾಬಾದ್: ಪ್ರೀತಿಸಿದವನನ್ನೇ ಮದುವೆಯಾಗುತ್ತೇನೆಂದು ಹೇಳಿದ ಹಿನ್ನೆಲೆ ತನ್ನ ತಂಗಿಗೆ ಅಣ್ಣ ಬೆಂಕಿ ಹಚ್ಚಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ರಾಯಚೂಟಿ ಬಳಿಯ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ. ಯುವತಿ ತಾಹಸೀನ್ ಎಂಬುವವಳು ಪ್ರೀತಿಸುತ್ತಿದ್ದ ಯುವಕನನ್ನು ಮದುವೆಯಾಗುತ್ತೇನೆ ಎಂದು ಮನೆಯಲ್ಲಿ ಹೇಳಿದ್ದಳು. ಮನೆಯಲ್ಲಿ ತಂದೆ ತಾಯಿಯ ಸಮ್ಮುಖದಲ್ಲಿಯೇ ಅಣ್ಣ ಮತ್ತು ತಂಗಿಗೆ ಗಲಾಟೆಯಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ತಹಸೀನ್ ಮೇಲೆ ಆಕೆಯ ಸ್ವಂತ ಅಣ್ಣ ತಾಜುದ್ದೀನ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಯುವತಿ ತಾಹಸೀನ್ ತೀವ್ರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಕಡಪ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರಾಯಚೋಟಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತೊಟ್ಟಿಗೆ ಬಿದ್ದು 2 ತಿಂಗಳ ಬಾಣಂತಿ ಅನುಮಾನಾಸ್ಪದ ಸಾವು ಹಾಸನ: ಅರಸೀಕೆರೆ ತಾಲೂಕಿನ ಮಾಲೇಕಲ್ ತಿರುಪತಿ ಗ್ರಾಮದಲ್ಲಿ ತೊಟ್ಟಿಗೆ ಬಿದ್ದು 2 ತಿಂಗಳ ಬಾಣಂತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. 19 ವರ್ಷದ ಭವ್ಯಾ ಮೃತಪಟ್ಟಿರುವ ಬಾಣಂತಿ. ಭವ್ಯಾ ಪೋಷಕರು, ಅಳಿಯ ಮತ್ತು ಮನೆಯವರ ವಿರುದ್ಧ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಒಂದು ವರ್ಷದ ಹಿಂದೆ ಜಗದೀಶ್ ಜತೆ ಭವ್ಯಾ ವಿವಾಹವಾಗಿತ್ತು.

ಮದುವೆಯಾದಾಗಿನಿಂದಲೂ ಪತಿ ಮತ್ತು ಮನೆಯವರು ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿಬಂದಿದ್ದು, ಎರಡು ತಿಂಗಳ ಹಿಂದಷ್ಟೇ ಭವ್ಯಾ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಕೊವಿಡ್ ಹಿನ್ನೆಲೆ ಹೆರಿಗೆ ಬಳಿಕ ಭವ್ಯಾ ಗಂಡನ ಮನೆಯಲ್ಲಿದ್ದಳು. ಆದರೆ ಇದೀಗ ಸಾವನ್ನಪ್ಪಿದ್ದು, ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ

ಕೊರೊನಾದಿಂದ ಗುಣಮುಖನಾದ ವ್ಯಕ್ತಿಯಲ್ಲಿ ಹಸಿರು ಫಂಗಸ್ ಪತ್ತೆ.. ಶುರುವಾಗಿದೆ ಬಣ್ಣ ಬಣ್ಣದ ಫಂಗಸ್​ಗಳ ಹಾವಳಿ

ಬಾಯ್​ಫ್ರೆಂಡ್​ ಜತೆ ಗಾಂಜಾ ಸೇವಿಸುವಾಗ ಬಲೆಗೆ ಬಿದ್ದ ಮತ್ತೋರ್ವ ನಟಿ; ವೈದ್ಯಕೀಯ ಪರೀಕ್ಷೆಯಲ್ಲೂ ನಿಷೇಧಿತ ವಸ್ತು ಸೇವನೆ ದೃಢ

(Brother set fire to her sister in front of father and mother in Hyderabad)

Published On - 11:11 am, Wed, 16 June 21

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ