AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮನನ್ನು ಬರ್ಬರವಾಗಿ ಕೊಂದು ಶವದ ಮುಂದೆ ಬೀಡಿ ಸೇದುತ್ತಾ ಕುಳಿತ ಅಣ್ಣ!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆಬ್ಬೈಲ್ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿದ ಅಣ್ಣ ಹೆಣದ ಮುಂದೆ ಕೂತು ಬಿಡಿ ಸೇದಿರುವಂತಹ ಘಟನೆ ನಡೆದಿದೆ. ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯವಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಮ್ಮನನ್ನು ಬರ್ಬರವಾಗಿ ಕೊಂದು ಶವದ ಮುಂದೆ ಬೀಡಿ ಸೇದುತ್ತಾ ಕುಳಿತ ಅಣ್ಣ!
ತಮ್ಮನನ್ನು ಬರ್ಬರವಾಗಿ ಕೊಂದು ಶವದ ಮುಂದೆ ಬೀಡಿ ಸೇದುತ್ತಾ ಕುಳಿತ ಅಣ್ಣ!
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 04, 2024 | 4:38 PM

Share

ಕಾರವಾರ, ಡಿಸೆಂಬರ್​ 04: ಕುಡಿದ ಮತ್ತಿನಲ್ಲಿ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ (kill) ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆಬ್ಬೈಲ್ ಗ್ರಾಮದಲ್ಲಿ ನಡೆದಿದೆ. ಅಣ್ಣ ಸುಬ್ರಾಯ್ ನಾಯ್ಕ್​ನಿಂದ ನಾಗೇಶ್ ನಾಯ್ಕ್(50) ಕೊಲೆ ಮಾಡಲಾಗಿದೆ. ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯವಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಕೊಲೆ ಮಾಡಿ ಹೆಣದ ಮುಂದೆ ಅಣ್ಣ ಬೀಡಿ ಸೇದುತ್ತಾ ಕೂತ್ತಿದ್ದರು. ಈ ಹಿಂದೆ ಅಣ್ಣನ ಮೇಲೆ ತಮ್ಮ ನಾಗೇಶ್ ನಾಯ್ಕ್ ಹಲ್ಲೆ ಮಾಡಿದ್ದ.

ಬಲೂನ್ ಊದೂವ ಭರದಲ್ಲಿ ಗಂಟಲಲ್ಲಿ ಸಿಲುಕಿ 13 ವರ್ಷದ ಪುಟ್ಟ ಪೋರ ಸಾವು

ಬಲೂನ್ ಊದೂವ ಭರದಲ್ಲಿ ಬಾಯಲ್ಲಿ ಹೋದ ಬಲೂನ್​ನಿಂದಾಗಿ 13 ವರ್ಷದ ಪುಟ್ಟ ಪೋರ ಸಾವನ್ನಪ್ಪಿರುವಂತಹ ಘಟನೆ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. 13 ವರ್ಷದ ನವೀನ್ ಮೃತ ಪುಟ್ಟ ಪೋರ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್: ತಾಯಿ ಸಾವು, ಮಗುವಿನ ಸ್ಥಿತಿ ಗಂಭೀರ

ಎಂದಿನಂತೆ ತನ್ನ ಮನೆಯಲ್ಲಿ ನವೀನ್​ ಆಟವಾಡುತ್ತಿದ್ದ. ಈ ವೇಳೆ ಕೈಗೆ ಬಲೂನ್​ ಸಿಕ್ಕಿದೆ. ಬಲೂನ್ ದೊಡ್ಡದಾಗಿ ಊದಬೇಕು ಅಂತಾ ಹತ್ತಾರು ಬಾರಿ ಪ್ರಯತ್ನಸಿದ್ದಾನೆ. ಬಲೂನ್ ಊದುವುದು ಮತ್ತೆ ಅದರ ಗಾಳಿ ಹೊರಗೆ ಬಿಡುವುದು ಹೀಗೆ ಆಟವಾಡುತ್ತಿದ್ದ. ಮಗ ಆಟ ಆಡ್ತಾ ಇದಾನೆ ಅಂತಾ ಪಾಲಕರು ಸಹ ತಮ್ಮ ತಮ್ಮ ಕೆಲಸದಲ್ಲಿ ಬಿಜಿ ಆಗಿದ್ದರು.

ಬಲೂನ್​ನಲ್ಲಿ ಜಾಸ್ತಿ ಗಾಳಿ ತುಂಬ ಬೇಕು ಅಂತಾ. ಫುಲ್ ಶಕ್ತಿ ಹಾಕಿ ಊದಿದ್ದಾನೆ. ಒಮ್ಮಿಂದ ಒಮ್ಮೆಲೆ ಏನಾಯ್ತೋ ಗೊತ್ತಿಲ್ಲ ಬಲೂನ್ ಬಾಯಿಯಲ್ಲಿ ಹೋಗಿದೆ. ಬಾಯಲ್ಲಿ ಇದ್ದಿದ್ರೆ ಏನು ಆಗ್ತಾ ಇರಲಿಲ್ಲ, ಗಾಳಿಯ ರಭಸಕ್ಕೆ ಗಂಟಲಲ್ಲಿ ಸಿಕ್ಕಿಕೊಂಡಿದೆ. ಇನ್ನೂ ಗಂಟಲಲ್ಲಿ ಬಲೂನ್ ಹೋಗಿ ಸಿಕ್ಕಿ ಕೊಳ್ಳುತ್ತಿದ್ದಂತೆ, ಕೆಮ್ಮುವುದಕ್ಕೆ ಆರಂಭ ಮಾಡಿದ ಬಾಲಕನ ಉಸಿರು ಗಟ್ಟಿಸ ತೊಡಕಿತು.

ಇದನ್ನೂ ಓದಿ: ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು

ಈತನನ್ನು ನೋಡಿದ ತಾಯಿ ಏನಾಯ್ತೂ ಅಂತಾ ನೋಡಿದಾಳೆ. ಗಂಟಲಲ್ಲಿ ಬಲೂನ್ ಸಿಕ್ಕಾಕೊಂಡಿದ್ದು ಹೊರಗೆ ತೆಗೆಯಲು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ಇತ್ತ ವಿನಾಯಕ ಉಸಿರಾಡಲು ಒದ್ದಾಡ ತೋಡಗಿದಾನೆ, ಈತನ ರೋಧನೆ ನೋಡಿ ಕೂಡಲೆ ಹಳಿಯಾಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯದಲ್ಲೆ ಆತ ಮೃತಪಟ್ಟಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!