AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮನನ್ನು ಬರ್ಬರವಾಗಿ ಕೊಂದು ಶವದ ಮುಂದೆ ಬೀಡಿ ಸೇದುತ್ತಾ ಕುಳಿತ ಅಣ್ಣ!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆಬ್ಬೈಲ್ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿದ ಅಣ್ಣ ಹೆಣದ ಮುಂದೆ ಕೂತು ಬಿಡಿ ಸೇದಿರುವಂತಹ ಘಟನೆ ನಡೆದಿದೆ. ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯವಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಮ್ಮನನ್ನು ಬರ್ಬರವಾಗಿ ಕೊಂದು ಶವದ ಮುಂದೆ ಬೀಡಿ ಸೇದುತ್ತಾ ಕುಳಿತ ಅಣ್ಣ!
ತಮ್ಮನನ್ನು ಬರ್ಬರವಾಗಿ ಕೊಂದು ಶವದ ಮುಂದೆ ಬೀಡಿ ಸೇದುತ್ತಾ ಕುಳಿತ ಅಣ್ಣ!
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Dec 04, 2024 | 4:38 PM

Share

ಕಾರವಾರ, ಡಿಸೆಂಬರ್​ 04: ಕುಡಿದ ಮತ್ತಿನಲ್ಲಿ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ (kill) ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೆಬ್ಬೈಲ್ ಗ್ರಾಮದಲ್ಲಿ ನಡೆದಿದೆ. ಅಣ್ಣ ಸುಬ್ರಾಯ್ ನಾಯ್ಕ್​ನಿಂದ ನಾಗೇಶ್ ನಾಯ್ಕ್(50) ಕೊಲೆ ಮಾಡಲಾಗಿದೆ. ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯವಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಕೊಲೆ ಮಾಡಿ ಹೆಣದ ಮುಂದೆ ಅಣ್ಣ ಬೀಡಿ ಸೇದುತ್ತಾ ಕೂತ್ತಿದ್ದರು. ಈ ಹಿಂದೆ ಅಣ್ಣನ ಮೇಲೆ ತಮ್ಮ ನಾಗೇಶ್ ನಾಯ್ಕ್ ಹಲ್ಲೆ ಮಾಡಿದ್ದ.

ಬಲೂನ್ ಊದೂವ ಭರದಲ್ಲಿ ಗಂಟಲಲ್ಲಿ ಸಿಲುಕಿ 13 ವರ್ಷದ ಪುಟ್ಟ ಪೋರ ಸಾವು

ಬಲೂನ್ ಊದೂವ ಭರದಲ್ಲಿ ಬಾಯಲ್ಲಿ ಹೋದ ಬಲೂನ್​ನಿಂದಾಗಿ 13 ವರ್ಷದ ಪುಟ್ಟ ಪೋರ ಸಾವನ್ನಪ್ಪಿರುವಂತಹ ಘಟನೆ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. 13 ವರ್ಷದ ನವೀನ್ ಮೃತ ಪುಟ್ಟ ಪೋರ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್: ತಾಯಿ ಸಾವು, ಮಗುವಿನ ಸ್ಥಿತಿ ಗಂಭೀರ

ಎಂದಿನಂತೆ ತನ್ನ ಮನೆಯಲ್ಲಿ ನವೀನ್​ ಆಟವಾಡುತ್ತಿದ್ದ. ಈ ವೇಳೆ ಕೈಗೆ ಬಲೂನ್​ ಸಿಕ್ಕಿದೆ. ಬಲೂನ್ ದೊಡ್ಡದಾಗಿ ಊದಬೇಕು ಅಂತಾ ಹತ್ತಾರು ಬಾರಿ ಪ್ರಯತ್ನಸಿದ್ದಾನೆ. ಬಲೂನ್ ಊದುವುದು ಮತ್ತೆ ಅದರ ಗಾಳಿ ಹೊರಗೆ ಬಿಡುವುದು ಹೀಗೆ ಆಟವಾಡುತ್ತಿದ್ದ. ಮಗ ಆಟ ಆಡ್ತಾ ಇದಾನೆ ಅಂತಾ ಪಾಲಕರು ಸಹ ತಮ್ಮ ತಮ್ಮ ಕೆಲಸದಲ್ಲಿ ಬಿಜಿ ಆಗಿದ್ದರು.

ಬಲೂನ್​ನಲ್ಲಿ ಜಾಸ್ತಿ ಗಾಳಿ ತುಂಬ ಬೇಕು ಅಂತಾ. ಫುಲ್ ಶಕ್ತಿ ಹಾಕಿ ಊದಿದ್ದಾನೆ. ಒಮ್ಮಿಂದ ಒಮ್ಮೆಲೆ ಏನಾಯ್ತೋ ಗೊತ್ತಿಲ್ಲ ಬಲೂನ್ ಬಾಯಿಯಲ್ಲಿ ಹೋಗಿದೆ. ಬಾಯಲ್ಲಿ ಇದ್ದಿದ್ರೆ ಏನು ಆಗ್ತಾ ಇರಲಿಲ್ಲ, ಗಾಳಿಯ ರಭಸಕ್ಕೆ ಗಂಟಲಲ್ಲಿ ಸಿಕ್ಕಿಕೊಂಡಿದೆ. ಇನ್ನೂ ಗಂಟಲಲ್ಲಿ ಬಲೂನ್ ಹೋಗಿ ಸಿಕ್ಕಿ ಕೊಳ್ಳುತ್ತಿದ್ದಂತೆ, ಕೆಮ್ಮುವುದಕ್ಕೆ ಆರಂಭ ಮಾಡಿದ ಬಾಲಕನ ಉಸಿರು ಗಟ್ಟಿಸ ತೊಡಕಿತು.

ಇದನ್ನೂ ಓದಿ: ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಹುಬ್ಬಳ್ಳಿ ಪೊಲೀಸರ ಹಣದ ದಾಹ ಬಯಲು

ಈತನನ್ನು ನೋಡಿದ ತಾಯಿ ಏನಾಯ್ತೂ ಅಂತಾ ನೋಡಿದಾಳೆ. ಗಂಟಲಲ್ಲಿ ಬಲೂನ್ ಸಿಕ್ಕಾಕೊಂಡಿದ್ದು ಹೊರಗೆ ತೆಗೆಯಲು ಇನ್ನಿಲ್ಲದ ಕಸರತ್ತು ಮಾಡಿದ್ದಾರೆ. ಇತ್ತ ವಿನಾಯಕ ಉಸಿರಾಡಲು ಒದ್ದಾಡ ತೋಡಗಿದಾನೆ, ಈತನ ರೋಧನೆ ನೋಡಿ ಕೂಡಲೆ ಹಳಿಯಾಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯದಲ್ಲೆ ಆತ ಮೃತಪಟ್ಟಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!