AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಕಂಪ ತೋರಿಸುವುದು ಬೇಡ, ಅವರ ಪಕ್ಷ ಅವರು ನೋಡಿಕೊಳ್ಳಲಿ: ಡಿಕೆಶಿಗೆ, ಯಡಿಯೂರಪ್ಪ ತಿರುಗೇಟು

ನಾನು 4 ಬಾರಿ ಸಿಎಂ ಆಗುವುದಕ್ಕೆ ಬಿಜೆಪಿ ಅವಕಾಶ ಮಾಡಿಕೊಟ್ಟಿದೆ, ನನ್ನ ಬಗ್ಗೆ ಡಿ.ಕೆ. ಶಿವಕುಮಾರ  ಅನುಕಂಪ ತೋರಿಸುವುದು ಬೇಡ, ಅವರ ಪಕ್ಷ ನೋಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಅನುಕಂಪ ತೋರಿಸುವುದು ಬೇಡ, ಅವರ ಪಕ್ಷ ಅವರು ನೋಡಿಕೊಳ್ಳಲಿ: ಡಿಕೆಶಿಗೆ, ಯಡಿಯೂರಪ್ಪ ತಿರುಗೇಟು
ಬಿಎಸ್ ಯಡಿಯೂರಪ್ಪ
TV9 Web
| Edited By: ವಿವೇಕ ಬಿರಾದಾರ|

Updated on:Jul 22, 2022 | 7:44 PM

Share

ಶಿವಮೊಗ್ಗ: ನಾನು 4 ಬಾರಿ ಸಿಎಂ ಆಗುವುದಕ್ಕೆ ಬಿಜೆಪಿ (BJP) ಅವಕಾಶ ಮಾಡಿಕೊಟ್ಟಿದೆ, ನನ್ನ ಬಗ್ಗೆ ಡಿ.ಕೆ. ಶಿವಕುಮಾರ (DK Shivakumar) ಅನುಕಂಪ ತೋರಿಸುವುದು ಬೇಡ, ಅವರು ಪಕ್ಷ ನೋಡಿಕೊಳ್ಳಲಿ ಎಂದು ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಿದ್ದಾರೆ, ಬಿಜೆಪಿ ಬಳಸಿ ಬಿಸಾಡಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ (BS Yediyurappa) ಶಿಕಾರಿಪುರದಲ್ಲಿ (Shikaripur) ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪರನ್ನು ಸೈಡ್​ಲೈನ್​ ಮಾಡಿದ್ದಾರೆಂಬ ಪ್ರಶ್ನೆಯೇ ಇಲ್ಲ. ಯಾವುದೇ ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡಿ ತೋರಿಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್​ ವರದಿ ಒಪ್ಪಲು ಸಾಧ್ಯವಿಲ್ಲ. ಡಾ.ಕಸ್ತೂರಿ ರಂಗನ್​ ವರದಿ ಸಂಬಂಧ ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ. ಡಾ.ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲೂ ಸಾಕಷ್ಟು ಹಾನಿಯಾಗಲಿದೆ. ದೆಹಲಿಗೆ ತೆರಳಲಿರುವ ಸಿಎಂ ಅಧಿಕಾರಿಗಳ ಜೊತೆ ವರದಿ ಜಾರಿಯಿಂದ ಆಗುವ ಹಾನಿ ಬಗ್ಗೆ ಮನವರಿಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡುವುದಿಲ್ಲ. ಆದರೂ ಹಠ ಬಿಡದೆ ಜಾರಿಗೆ ಪ್ರಯತ್ನಿಸಿದರೆ ಹೋರಾಟಕ್ಕೆ ನಾವು ಸಿದ್ಧರಾಗಿದ್ದೇವೆ.  ಕಸ್ತೂರಿ ರಂಗನ್​ ವರದಿ ವಿಚಾರದಲ್ಲಿ ರೈತರು ಭಯ ಪಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ, ದೆಹಲಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಾತನಾಡುತ್ತಾರೆ ಎಂದು ಹೇಳಿದರು.

Published On - 7:42 pm, Fri, 22 July 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ