ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ

ನಕಲಿ ದಾಖಲೆ ಸೃಷ್ಟಿಸಿ ಜಮೀನು ಹಿಂಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಸಚಿವ ನಿರಾಣಿ ವಿರುದ್ಧದ ಆಲಂ ಪಾಷಾ ಖಾಸಗಿ ದೂರು ದಾಖಲಿಸಿದ್ದರು. 

ಕೆಐಎಡಿಬಿ ಭೂ ಹಂಚಿಕೆ ವಿವಾದ: ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸುಪ್ರೀಂಕೋರ್ಟ್​ಗೆ ಯಡಿಯೂರಪ್ಪ ಅರ್ಜಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Edited By:

Updated on: Jan 18, 2021 | 7:31 PM

ಬೆಂಗಳೂರು: ಕೆಐಎಡಿಬಿ ಭೂಮಿ ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ರದ್ದು ಮಾಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಆಲಂ ಪಾಷಾ ಕಂಪನಿಗೆ ನೀಡಿದ್ದ ಜಮೀನನ್ನು ಸರ್ಕಾರ ವಾಪಾಸು ಪಡೆದಿತ್ತು.  ನಕಲಿ ದಾಖಲೆ ಸೃಷ್ಟಿಸಿ ಜಮೀನು ಹಿಂಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಸಚಿವ ನಿರಾಣಿ ವಿರುದ್ಧದ ಆಲಂ ಪಾಷಾ ಖಾಸಗಿ ದೂರು ದಾಖಲಿಸಿದ್ದರು.  ಖಾಸಗಿ ದೂರು ಮುಂದುವರಿಸಲು ಹೈಕೋರ್ಟ್ ಆದೇಶಿಸಿತ್ತು. ಹೀಗಾಗಿ, ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಶನ್ ಕೇಸ್‌: ಸಿಎಂ B.S. ಯಡಿಯೂರಪ್ಪಗೆ ಬಿಗ್‌ ರಿಲೀಫ್‌

Loading...
Unable to load recommendations.
Follow Us