AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ಕೈಬಿಡಿ: ಸಾರಿಗೆ ನಿಗಮ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಕರೆ

ಸಭೆಯಲ್ಲಿ ಸರ್ಕಾರದ ನಿರ್ಧಾರ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ.

ಮುಷ್ಕರ ಕೈಬಿಡಿ: ಸಾರಿಗೆ ನಿಗಮ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಕರೆ
ಇಂದು ಮೈಸೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 13, 2020 | 10:28 PM

Share

ಬೆಂಗಳೂರು: ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಚರ್ಚೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಯನ್ನು ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್ 19ರಿಂದ ಮೃತರಾದ ಸಾರಿಗೆ ನೌಕರರ ಕುಟುಂಬಗಳಿಗೆ ₹ 30 ಲಕ್ಷ ರೂ.ಗಳ ಪರಿಹಾರ, ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು ಎಂದು ಬಿಎಸ್​ವೈ ತಿಳಿಸಿದರು.

ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಹರಿಹಾಯ್ದಿರುವ ಬಿಎಸ್​ವೈ, ಸಭೆಯಲ್ಲಿ ಸರ್ಕಾರದ ನಿರ್ಧಾರ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು ಸರಿಯಲ್ಲ. ಅವರ ದುರುದ್ದೇಶಪೂರಿತ ನಡೆ ಖಂಡನೀಯ ಎಂದರು.

ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಇದಲ್ಲದೆ ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ಸಾರಿಗೆ ನಿಗಮಗಳ ನೌಕರರಿಗೂ ತೊಂದರೆಯಾಗುತ್ತದೆ. ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಬ್ಲ್ಯಾಕ್​ಮೇಲ್ ತಂತ್ರ ರೂಪಿಸುತ್ತಿದ್ದಾರೆ: ಬೊಮ್ಮಾಯಿ ಆರೋಪ

Published On - 10:21 pm, Sun, 13 December 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ