AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಲ್ಹಾದ್​ ಜೋಶಿರನ್ನು ಸೋಲಿಸಲು ಅಪ್ಪ-ಮಕ್ಕಳು ಪ್ರಯತ್ನಿಸಿದ್ರು: ಬಿಎಸ್​​ವೈ, ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ಅವರ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸಲು ಅಪ್ಪ-ಮಕ್ಕಳು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ. ವಕ್ಫ್ ವಿರೋಧಿ ಜಾಗೃತಿ ಅಭಿಯಾನಕ್ಕೆ ಹೈಕಮಾಂಡ್ ಬೆಂಬಲವಿದೆ ಎಂದು ಹೇಳಿದ್ದಾರೆ.

ಪ್ರಲ್ಹಾದ್​ ಜೋಶಿರನ್ನು ಸೋಲಿಸಲು ಅಪ್ಪ-ಮಕ್ಕಳು ಪ್ರಯತ್ನಿಸಿದ್ರು: ಬಿಎಸ್​​ವೈ, ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ
ಯಡಿಯೂರಪ್ಪ
ಶಿವಕುಮಾರ್ ಪತ್ತಾರ್
| Edited By: |

Updated on: Nov 16, 2024 | 7:02 PM

Share

ಹುಬ್ಬಳ್ಳಿ, ನವೆಂಬರ್​ 16: ಈ ಬಾರಿ ಪ್ರಲ್ಹಾದ್​ ಜೋಶಿರನ್ನು ಸೋಲಿಸಲು ಅಪ್ಪ-ಮಕ್ಕಳು ಪ್ರಯತ್ನಿಸಿದ್ದರು ಎಂದು ಬಿಎಸ್​ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Yatnal) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಪ್ರಲ್ಹಾದ್ ಜೋಶಿ ಸೋಲಿಸಲು ಪ್ರಯತ್ನಿಸಿದ್ದರು ಎಂದು ಹೊಸ ಬಾಂಬ್​ ಹಾಕಿದ್ದಾರೆ.

ಇದು ಅವರ ರಕ್ತಗತವಾಗಿದೆ

ನಮ್ಮಲ್ಲಿ ಒಡಕು ತರುವ ಪ್ರಯತ್ನ ಸನ್ಮಾನ್ಯ ವಿಜಯೇಂದ್ರ ಮಾಡುತ್ತಿದ್ದಾರೆ. ವಿಜಯೇಂದ್ರ ತಂದೆ ಯಡಿಯೂರಪ್ಪನವರು ಸಹ ಹೀಗೆ ಮಾಡಿದ್ದಾರೆ. ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿದ್ರು, ಇದು ಅವರ ರಕ್ತಗತವಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಜಮೀರ್​​ಗೆ ತಾಕತ್ತಿದ್ರೆ ರಾಜಕೀಯದ ಬಗ್ಗೆ ಮಾತಾಡಲಿ, ಕರಿಯ, ಬಿಳಿಯ ಬೇಡ: ಬಸನಗೌಡ ಯತ್ನಾಳ್

ವಕ್ಫ್ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಹೈಕಮಾಂಡ್ ಬೆಂಬಲ ಇದೆ. ನಮ್ಮ ಅಭಿಯಾನಕ್ಕೆ ಹೈಕಮಾಂಡ್ ಬೆಂಬಲ ಇದೆ. ಹೈಕಮಾಂಡ್ ಬೆಂಬಲ ಇದಿದ್ದರಿಂದಲೇ ಜೆಪಿಸಿ ಕಮಿಟಿ ಬಂದಿರೋದು. ನಾವು ಡಿಸೆಂಬರ್​ 25ರಿಂದ ಜನಜಾಗೃತಿ ಅಭಿಯಾನ ಆರಂಭಿಸುತ್ತೇನೆ. ಮೂರು ತಂಡಗಳಿಗೆ ತಂದೆ ಇಲ್ಲ, ತಾಯಿನೂ ಇಲ್ಲ ಅಂತಾ ವ್ಯಂಗ್ಯವಾಡಿದ್ದಾರೆ. ನಮ್ಮನ್ನು ನೋಡಿ ಮೂರು ತಂಡಗಳನ್ನು ರಚನೆ ಮಾಡಿದ್ದಾರೆ. ವಿಜಯೇಂದ್ರಗೆ ವಕ್ಫ್​ ವಿರುದ್ಧ ಹೋರಾಟದ ಬಗ್ಗೆ ಕಾಳಜಿ ಇಲ್ಲ. ಅಪ್ಪನ ತರಹ ಲೂಟಿ ಮಾಡೋದಷ್ಟೇ ಗುರಿ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ರೂ. ಆಫರ್​ ಆರೋಪ ವಿಚಾರವಾಗಿ ಮಾತನಾಡಿದ್ದು, ದೇವರಾಣೆ ಬಿಜೆಪಿಗೆ ಸರ್ಕಾರ ರಚನೆ ಮಾಡೋ ಅವಶ್ಯಕತೆ ಇಲ್ಲ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇಳಿಸಲು ಪ್ರಯತ್ನ ಮಾಡ್ತಿದ್ದಾರೆ. ನಾವು ಸರ್ಕಾರ ರಚನೆ ಮಾಡಿದರೆ 100 ಭ್ರಷ್ಟಾಚಾರ ಮಾಡುತ್ತೇವೆ. ಕುದುರೆ ವ್ಯಾಪಾರ ಡಿಕೆ ಶಿವಕುಮಾರ್​ ಮತ್ತು ವಿಜಯೇಂದ್ರ ಇಬ್ಬರಿಗೆ ಮಾತ್ರ ಗೊತ್ತಿದೆ ಎಂದಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿಗೆ ಕರಿಯ ಎಂದು ಜಮೀರ್ ಮಾತನಾಡಿದ್ದು ಸರಿಯಲ್ಲ. ರಾಜಕೀಯವಾಗಿ ಮಾತಾಡಿ, ವೈಯಕ್ತಿಕ ಟೀಕೆ ಮಾಡಬಾರದು. ಧಮ್ ಇದ್ದರೆ ನಿನ್ನ ಕೆಲಸ ಹೇಳಿ. ಜಮೀರ್ ಇಡೀ ರಾಜ್ಯದಲ್ಲಿ ಬೆಂಕಿ ಹಚ್ಚಿದ್ದಾರೆ. ವರ್ಣ, ಜಾತಿ ನಿಂದನೆ ಮಾತಾಡಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಪ್ರೀತಂಗೌಡಗೆ ಬಸನಗೌಡ ಯತ್ನಾಳ್ ಹೆಸರು ಹೇಳಲೂ ಇಷ್ಟವಿಲ್ಲ

ವಕ್ಫ್​ ವಿಚಾರವಾಗಿ ರಾಜ್ಯ ಬಿಜೆಪಿಯಲ್ಲಿ ಬಣಗಳ ವಿಚಾರವಾಗಿ ಮಾತನಾಡಿದ್ದು, ಅವರಿಗೆ ಯಾವ ವಕ್ಫ್​ ಹೋರಾಟ ಬೇಕಾಗಿಲ್ಲ. ಜಾಗೃತಿ ಜಾಥಾ ಪಟ್ಟಿಯಲ್ಲಿ ಪ್ರತಾಪ್ ಸಿಂಹ ಕೈಬಿಟ್ಟಿದ್ದಕ್ಕೆ ಗರಂ ಆದರು. ಇದು ಅಪ್ಪ-ಮಕ್ಕಳ ದಂಧೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!