AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ

ಬಿ ಎಸ್​ ಯಡಿಯೂರಪ್ಪ: ಹೈಕಮಾಂಡ್‌ನಿಂದ ನನಗೆ ಇನ್ನೂ ಅಧಿಕೃತ ಸೂಚನೆ ಬಂದಿಲ್ಲ. 25ರ ಬಳಿಕ ಬರುವ ಸಂದೇಶಕ್ಕಾಗಿ ನಾನು ಕಾಯುತ್ತಿದ್ದೇನೆ. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಅಧಿಕಾರ ಇರಲಿ, ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತೇನೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ.

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ
2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ
TV9 Web
| Edited By: |

Updated on:Jul 22, 2021 | 4:34 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟದ ಕೊನೆಯ ಸಭೆಗೆ ಮಾನಸಿಕ ಸಿದ್ಧತೆ ನಡೆಸಿದ್ದಾರಾ? ಜುಲೈ 25 ರಂದು ಹೈಕಮಾಂಡಿನಿಂದ ಸಂದೇಶ ಬರುತ್ತೆ. ಸಂದೇಶದಂತೆ ಜುಲೈ 26 ರಂದು ನಾನು ನಡೆದುಕೊಳ್ಳುವೆ ಎಂದು ಹೇಳುವ ಮೂಲಕ ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಸುಳಿವನ್ನು ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪ ನೀಡಿದ್ದಾರೆ. ಇದು ಕರ್ನಾಟಕದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟ ಸಭೆ ನಡೆಸಲಿದ್ದು, ಅದಕ್ಕೂ ಮುನ್ನ ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದರು. ಹೈಕಮಾಂಡ್ ಹೇಳುವವರೆಗೂ ಸಿಎಂ ಸ್ಥಾನದಲ್ಲಿರುತ್ತೇನೆ. ಹೈಕಮಾಂಡ್‌ ಬೇಡವೆಂದಾಗ ರಾಜೀನಾಮೆ ನೀಡುತ್ತೇನೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟಿಸುತ್ತೇನೆ. ಆದರೆ ಮುಂದೆ ಯಾರನ್ನು ಸಿಎಂ ಮಾಡಬೇಕೆಂದು ಸಲಹೆ ನೀಡಲ್ಲ; ಯಾರ ಹೆಸರನ್ನೂ ಸಿಎಂ ಸ್ಥಾನಕ್ಕೆ ಶಿಫಾರಸು ಮಾಡುವುದಿಲ್ಲ. ಅದರ ಅಗತ್ಯವೂ ಇಲ್ಲ; ಕೇಳಿದರೂ ನಾನು ಯಾರ ಹೆಸರನ್ನೂ ಸೂಚಿಸುವುದಿಲ್ಲ ಎಂದು ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಸೂಚ್ಯವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ:ಸಿಎಂ ಬಿ.ಎಸ್. ಯಡಿಯೂರಪ್ಪ

ಹೈಕಮಾಂಡ್‌ನಿಂದ ನನಗೆ ಇನ್ನೂ ಅಧಿಕೃತ ಸೂಚನೆ ಬಂದಿಲ್ಲ. 25ರ ಬಳಿಕ ಬರುವ ಸಂದೇಶಕ್ಕಾಗಿ ನಾನು ಕಾಯುತ್ತಿದ್ದೇನೆ. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಅಧಿಕಾರ ಇರಲಿ, ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತೇನೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ.

ವಿಧಾನಸೌಧದ 3ನೇ ಮಹಡಿಯಲ್ಲಿರುವ ತಮ್ಮ ಕೊಠಡಿಯಲ್ಲಿ ಸಚಿವರ ದಂಡಿಲ್ಲದೇ ಸಿಎಂ ಬಿ.ಎಸ್. ಯಡಿಯೂರಪ್ಪ ಏಕಾಂಗಿಯಾಗಿ ಕುಳಿತಿದ್ದರು. ಸ್ವಲ್ಪ ಸಮಯದ ಬಳಿಕ ಸಿಎಂ ಕೊಠಡಿಗೆ ಹಿರಿಯ ಸಚಿವರಾದ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಭೈರತಿ, ಸಿ.ಸಿ.ಪಾಟೀಲ್ ಆಗಮಿಸಿದರು.

ಸಿಎಂ ಬಿಎಸ್​ವೈ ಅವರೇ ಹೇಳಿದ್ದಾರೆ ಪಕ್ಷ ತಾಯಿ ಇದ್ದಂತೆ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಸಿಎಂ ಅವರೇ ಹೇಳಿದ್ದಾರೆ. ಅದರ ಬಗ್ಗೆ ವ್ಯಾಖ್ಯಾನ ಮಾಡುವಷ್ಟು ದೊಡ್ಡವರಲ್ಲ ನಾವು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್​ ಇದೇ ಸಂದರ್ಭದಲ್ಲಿ ಹೇಳಿದರು. ಇನ್ನು ವಲಸೆ ಬಂದ 17 ಸಚಿವರ ಮುಂದಿನ ನಡೆ ಬಗ್ಗೆ ಪ್ರಶ್ನೆ ಮಾಡಿದಾಗ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಬಿಸಿ ಪಾಟೀಲ್ ತೆರಳಿದರು.

ಮಂಗಳಮುಖಿಯರಿಂದ ಭೇಟಿ: ರಾಜ್ಯ ಸರ್ಕಾರದ ನೇಮಕಾತಿಯಲ್ಲಿ ಶೇಕಡಾ 1 ರಷ್ಟು ಮೀಸಲಾತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಮಂಗಳಮುಖಿಯರು ಅಭಿನಂದನೆ ಸಲ್ಲಿಸಿದರು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಮಂಗಳಮುಖಿಯರು ಸಿಎಂ ಸಚಿವ ಸಂಪುಟ ಸಭೆಗೆ‌ ತೆರಳುವ ಮುನ್ನ ಭೇಟಿ ಮಾಡಿ, ಅಭಿನಂದನೆ ಹೇಳಿದರು.

BS Yediyurappa: ಕರ್ನಾಟಕದಲ್ಲಿ ಯಡಿಯೂರಪ್ಪ ನಂತರ ಬಿಜೆಪಿ ನಾಯಕ ಇವರೇನಾ? ಇಷ್ಟಕ್ಕೂ ಬಿಎಸ್​ವೈ ರಾಜೀನಾಮೆಗೆ ಕಾರಣವೇನು?

(BS Yediyurappa exit from Karnataka chief ministership expected but i wont suggest any name for next cm)

Published On - 4:09 pm, Thu, 22 July 21

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು