AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾದೀತೆ? ಬಳ್ಳಾರಿ ಇಬ್ಭಾಗವಾಗುತ್ತಾ?

ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನೇ ಪ್ರತ್ಯೇಕ ಜಿಲ್ಲೆಯಾಗಿಸುವ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರವನ್ನು ಜಿಲ್ಲೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಸೆ. 19ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊಸಪೇಟೆಯನ್ನು ಕೇಂದ್ರವನ್ನಾಗಿಸಿಕೊಂಡು ವಿಜಯನಗರವನ್ನು ಜಿಲ್ಲೆ ಮಾಡುವ ವಿಷಯವನ್ನು ಮಂಡಿಸುವಂತೆ ಬಿಎಸ್ ವೈ ತಮ್ಮ ಪತ್ರದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ. ಬುಧವಾರ ಎರಡು ವಿಶೇಷ ವಿಮಾನಗಳಲ್ಲಿ ಉಜ್ಜೈನಿ ಪೀಠದ […]

ಹಂಪಿಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾದೀತೆ? ಬಳ್ಳಾರಿ ಇಬ್ಭಾಗವಾಗುತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 20, 2019 | 4:53 PM

Share

ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನೇ ಪ್ರತ್ಯೇಕ ಜಿಲ್ಲೆಯಾಗಿಸುವ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರವನ್ನು ಜಿಲ್ಲೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಸೆ. 19ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊಸಪೇಟೆಯನ್ನು ಕೇಂದ್ರವನ್ನಾಗಿಸಿಕೊಂಡು ವಿಜಯನಗರವನ್ನು ಜಿಲ್ಲೆ ಮಾಡುವ ವಿಷಯವನ್ನು ಮಂಡಿಸುವಂತೆ ಬಿಎಸ್ ವೈ ತಮ್ಮ ಪತ್ರದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಬುಧವಾರ ಎರಡು ವಿಶೇಷ ವಿಮಾನಗಳಲ್ಲಿ ಉಜ್ಜೈನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿ ನೇತೃತ್ವದಲ್ಲಿ ಚಾನೆಕೋಟೆ ಸ್ವಾಮೀಜಿ, ಕೊಟ್ಟೂರು ಮಠದ ಡಾ.ಸಂಗನಬಸವ ಸ್ವಾಮೀಜಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮಠಾಧೀಶರ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಡಿ ಮಾಡಿ ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನು ಕೇಂದ್ರವನ್ನಾಗಿ ಮಾಡುವಂತೆ ಮನವಿ ಪತ್ರ ಸಲ್ಲಿಸಿದ್ದರು. ನಂತರ ಶಾಸಕ ಜೆ. ಗಣೇಶ್, ವಿಧಾನಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯ, ಅನರ್ಹಗೊಂಡ ಮಾಜಿ ಶಾಸಕ ಆನಂದ್ ಸಿಂಗ್, ಮಾಜಿ ಶಾಸಕ ನೇಮಿ ಚಂದ್ರನಾಯಕ್ ಸೇರಿದಂತೆ ಮತ್ತಿತರರು ಕೂಡ ಸಿಎಂ ಭೇಟಿ ಮಾಡಿ ಇದೇ ಬೇಡಿಕೆಯನ್ನು ಇಟ್ಟಿದ್ದಾರೆ.

‘ಪ್ರಸ್ತುತ, ಬಳ್ಳಾರಿ ಸ್ವಲ್ಪ ದೊಡ್ಡದೇ ಜಿಲ್ಲೆಯಾಗಿದೆ’: ಪ್ರಸ್ತುತ ಬಳ್ಳಾರಿ ಜಿಲ್ಲೆ ತುಂಬಾ ವಿಸ್ತಾರವಾಗಿದ್ದು,  11 ಕಂದಾಯ ತಾಲೂಕುಗಳು ಹಾಗೂ 3 ಕಂದಾಯ ಉಪವಿಭಾಗಗಳನ್ನು ಒಳಗೊಂಡಿರುವ ಅತಿ ದೊಡ್ಡ ಜಿಲ್ಲೆಯಾಗಿದೆ.  ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರದಿಂದ 200 ಕಿ.ಮೀ ಅಂತರದಲ್ಲಿವೆ. ಇದರಿಂದ ಈ ಭಾಗದ ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ತುಂಬಾ ಕಷ್ಟವಾಗಿದೆ.

ಹೀಗಾಗಿ ಆಡಳಿತದ ಹಿತದೃಷ್ಟಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆ 11 ತಾಲೂಕುಗಳಲ್ಲಿ 5 ತಾಲೂಕುಗಳು ಅಂದರೆ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ ಉಳಿಸಿಕೊಂಡು, ಉಳಿದ 6 ತಾಲೂಕುಗಳು ಅಂದ್ರೆ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟರು, ಹಡಗಲಿ ಮತ್ತು ಹರಪನಹಳ್ಳಿ ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರವನ್ನಾಗಿಸಿಕೊಂಡು ನೂತನ ವಿಜಯನಗರ ಜಿಲ್ಲೆಯನ್ನು ಆಸ್ಥಿತ್ವಕ್ಕೆ ತರಲು ತಯಾರಿ ನಡೆಯುತ್ತಿದೆ.

ಸಂಭವನೀಯ ಜಿಲ್ಲಾ ಚಿತ್ರಣ ಬಳ್ಳಾರಿ ಜಿಲ್ಲೆ: 5 ತಾಲೂಕುಗಳು ಅಂದರೆ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ.

ವಿಜಯನಗರ ಜಿಲ್ಲೆ: 6 ತಾಲೂಕುಗಳು ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟರು, ಹಡಗಲಿ ಮತ್ತು ಹರಪನಹಳ್ಳಿ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ