AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾದೀತೆ? ಬಳ್ಳಾರಿ ಇಬ್ಭಾಗವಾಗುತ್ತಾ?

ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನೇ ಪ್ರತ್ಯೇಕ ಜಿಲ್ಲೆಯಾಗಿಸುವ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರವನ್ನು ಜಿಲ್ಲೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಸೆ. 19ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊಸಪೇಟೆಯನ್ನು ಕೇಂದ್ರವನ್ನಾಗಿಸಿಕೊಂಡು ವಿಜಯನಗರವನ್ನು ಜಿಲ್ಲೆ ಮಾಡುವ ವಿಷಯವನ್ನು ಮಂಡಿಸುವಂತೆ ಬಿಎಸ್ ವೈ ತಮ್ಮ ಪತ್ರದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ. ಬುಧವಾರ ಎರಡು ವಿಶೇಷ ವಿಮಾನಗಳಲ್ಲಿ ಉಜ್ಜೈನಿ ಪೀಠದ […]

ಹಂಪಿಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾದೀತೆ? ಬಳ್ಳಾರಿ ಇಬ್ಭಾಗವಾಗುತ್ತಾ?
ಸಾಧು ಶ್ರೀನಾಥ್​
|

Updated on: Sep 20, 2019 | 4:53 PM

Share

ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನೇ ಪ್ರತ್ಯೇಕ ಜಿಲ್ಲೆಯಾಗಿಸುವ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರವನ್ನು ಜಿಲ್ಲೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಸೆ. 19ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊಸಪೇಟೆಯನ್ನು ಕೇಂದ್ರವನ್ನಾಗಿಸಿಕೊಂಡು ವಿಜಯನಗರವನ್ನು ಜಿಲ್ಲೆ ಮಾಡುವ ವಿಷಯವನ್ನು ಮಂಡಿಸುವಂತೆ ಬಿಎಸ್ ವೈ ತಮ್ಮ ಪತ್ರದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಬುಧವಾರ ಎರಡು ವಿಶೇಷ ವಿಮಾನಗಳಲ್ಲಿ ಉಜ್ಜೈನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿ ನೇತೃತ್ವದಲ್ಲಿ ಚಾನೆಕೋಟೆ ಸ್ವಾಮೀಜಿ, ಕೊಟ್ಟೂರು ಮಠದ ಡಾ.ಸಂಗನಬಸವ ಸ್ವಾಮೀಜಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮಠಾಧೀಶರ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಡಿ ಮಾಡಿ ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನು ಕೇಂದ್ರವನ್ನಾಗಿ ಮಾಡುವಂತೆ ಮನವಿ ಪತ್ರ ಸಲ್ಲಿಸಿದ್ದರು. ನಂತರ ಶಾಸಕ ಜೆ. ಗಣೇಶ್, ವಿಧಾನಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯ, ಅನರ್ಹಗೊಂಡ ಮಾಜಿ ಶಾಸಕ ಆನಂದ್ ಸಿಂಗ್, ಮಾಜಿ ಶಾಸಕ ನೇಮಿ ಚಂದ್ರನಾಯಕ್ ಸೇರಿದಂತೆ ಮತ್ತಿತರರು ಕೂಡ ಸಿಎಂ ಭೇಟಿ ಮಾಡಿ ಇದೇ ಬೇಡಿಕೆಯನ್ನು ಇಟ್ಟಿದ್ದಾರೆ.

‘ಪ್ರಸ್ತುತ, ಬಳ್ಳಾರಿ ಸ್ವಲ್ಪ ದೊಡ್ಡದೇ ಜಿಲ್ಲೆಯಾಗಿದೆ’: ಪ್ರಸ್ತುತ ಬಳ್ಳಾರಿ ಜಿಲ್ಲೆ ತುಂಬಾ ವಿಸ್ತಾರವಾಗಿದ್ದು,  11 ಕಂದಾಯ ತಾಲೂಕುಗಳು ಹಾಗೂ 3 ಕಂದಾಯ ಉಪವಿಭಾಗಗಳನ್ನು ಒಳಗೊಂಡಿರುವ ಅತಿ ದೊಡ್ಡ ಜಿಲ್ಲೆಯಾಗಿದೆ.  ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರದಿಂದ 200 ಕಿ.ಮೀ ಅಂತರದಲ್ಲಿವೆ. ಇದರಿಂದ ಈ ಭಾಗದ ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ತುಂಬಾ ಕಷ್ಟವಾಗಿದೆ.

ಹೀಗಾಗಿ ಆಡಳಿತದ ಹಿತದೃಷ್ಟಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆ 11 ತಾಲೂಕುಗಳಲ್ಲಿ 5 ತಾಲೂಕುಗಳು ಅಂದರೆ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ ಉಳಿಸಿಕೊಂಡು, ಉಳಿದ 6 ತಾಲೂಕುಗಳು ಅಂದ್ರೆ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟರು, ಹಡಗಲಿ ಮತ್ತು ಹರಪನಹಳ್ಳಿ ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರವನ್ನಾಗಿಸಿಕೊಂಡು ನೂತನ ವಿಜಯನಗರ ಜಿಲ್ಲೆಯನ್ನು ಆಸ್ಥಿತ್ವಕ್ಕೆ ತರಲು ತಯಾರಿ ನಡೆಯುತ್ತಿದೆ.

ಸಂಭವನೀಯ ಜಿಲ್ಲಾ ಚಿತ್ರಣ ಬಳ್ಳಾರಿ ಜಿಲ್ಲೆ: 5 ತಾಲೂಕುಗಳು ಅಂದರೆ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ.

ವಿಜಯನಗರ ಜಿಲ್ಲೆ: 6 ತಾಲೂಕುಗಳು ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟರು, ಹಡಗಲಿ ಮತ್ತು ಹರಪನಹಳ್ಳಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್