ಯಡಿಯೂರಪ್ಪ ಮಂಜೂರು ಮಾಡಿದ್ದ ಜಾಗ 8 ವರ್ಷಗಳ ಬಳಿಕ ಪತ್ತೆ: ರುದ್ರಭೂಮಿಗೆ ಈಗ ಗುದ್ದಲಿ ಪೂಜೆ

ಶಿವರಾಮ ಕಾರಂತ ಬಿಡಿಎ ನೋಟಿಫಿಕೇಷನ್ ಮಾಡಿದ್ದ ಜಾಗವನ್ನು 2008 ರಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಮಂಜೂರು ಮಾಡಲಾಗಿತ್ತು. ಬಿಎಸ್ ಯಡಿಯೂರಪ್ಪ ಸಂಬಂಧಿ ಜಿ.ಮರಿಸ್ಬಾಮಿ ಒತ್ತಡದಿಂದ ಜಾಗ ಮಂಜೂರು ಮಾಡಲಾಗಿತ್ತು. ಇದೀಗ ಎಂಟು ವರ್ಷಗಳ ಬಳಿಕ ಮೂರು ಎಕರೆ ಜಾಗದಲ್ಲಿ ವೀರಶೈವರಿಗೆ ರುದ್ರಭೂಮಿಯಲ್ಲಿ ಗುದ್ದಲಿ ಪೂಜೆ ಮಾಡಲಾಗಿದೆ.

ಯಡಿಯೂರಪ್ಪ ಮಂಜೂರು ಮಾಡಿದ್ದ ಜಾಗ 8 ವರ್ಷಗಳ ಬಳಿಕ ಪತ್ತೆ: ರುದ್ರಭೂಮಿಗೆ ಈಗ ಗುದ್ದಲಿ ಪೂಜೆ
ಯಡಿಯೂರಪ್ಪ ಮಂಜೂರು ಮಾಡಿದ್ದ ಜಾಗ 8 ವರ್ಷಗಳ ಬಳಿಕ ಪತ್ತೆ, ರುದ್ರಭೂಮಿಗೆ ಈಗ ಗುದ್ದಲಿ ಪೂಜೆ
Edited By:

Updated on: Jul 29, 2024 | 6:58 PM

ನೆಲಮಂಗಲ, ಜುಲೈ 29: ಬಿಎಸ್​ ಯಡಿಯೂರಪ್ಪ (BS Yediyurappa) ಮಂಜೂರು ಮಾಡಿದ್ದ ಜಾಗ 8 ವರ್ಷಗಳ ಬಳಿಕ ಪತ್ತೆ ಆಗಿದ್ದು, ಇದೀಗ ರುದ್ರಭೂಮಿಗೆ (Rudrabhoomi) ಗುದ್ದಲಿ ಪೂಜೆ ನೆರವೆರಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸೋಮಶೆಟ್ಟಿಹಳ್ಳಿಯ ಸರ್ವೆ ನಂಬರ್‌ 19ರಲ್ಲಿ 3 ಎಕರೆ ಜಾಗವನ್ನು ಮಂಜೂರು ಮಾಡಲಾಗಿತ್ತು. ಮೂರು ಎಕರೆ ಜಾಗದಲ್ಲಿ ಇಂದು ವೀರಶೈವ ರುದ್ರಭೂಮಿ ಅಭಿವೃದ್ಧಿ ಟ್ರಸ್ಟ್​ನಿಂದ ಗುದ್ದಲಿ ಪೂಜೆ ಮಾಡಲಾಗಿದೆ.

ಶಿವರಾಮ ಕಾರಂತ ಬಿಡಿಎ ನೋಟಿಫಿಕೇಷನ್ ಮಾಡಿದ್ದ ಜಾಗ. 2008 ರಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಮಂಜೂರು ಮಾಡಲಾಗಿತ್ತು. ಬಿಎಸ್ ಯಡಿಯೂರಪ್ಪ ಸಂಬಂಧಿ ಜಿ.ಮರಿಸ್ಬಾಮಿ ಒತ್ತಡದಿಂದ ಜಾಗ ಮಂಜೂರು ಮಾಡಲಾಗಿತ್ತು.

ಉಳಿದ ಸಮುದಾಯದವರ ಕೆಂಗಣ್ಣಿಗೆ ಗುರಿಯಾದ ರುದ್ರಭೂಮಿ ಪೂಜೆ

ಬೆಂಗಳೂರು ಉತ್ತರ ತಾಲೂಕಿನ ಸೋಮಶೆಟ್ಟಿಹಳ್ಳಿಯ ಸರ್ವೆ ನಂಬರ್‌ 19ರಲ್ಲಿ 3 ಎಕರೆ ಜಾಗದಲ್ಲಿ ಕೇವಲ ಒಂದು ಸಮುದಾಯಕ್ಕೆ ಕೋಟ್ಯಂತರ ಮೌಲ್ಯದ ರುದ್ರಭೂಮಿ ಮಂಜೂರು ಮಾಡಿರುವುದು ಸದ್ಯ ಉಳಿದ ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಿದೆ.

ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದೆ ಗ್ರಾಮಸ್ಥರು ಒದ್ದಾಟ: ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಡಿಹಳ್ಳಿ ಅನ್ನೂ ಈ ಗ್ರಾಮದಲ್ಲಿ ಕಳೆದ ಹಲವು ದಶಕಗಳಿಂದ ಅಂತ್ಯ ಸಂಸ್ಕಾರ ಮಾಡಿಕೊಂಡು ಬರ್ತಿದ್ದು ಕಳೆದ ಮೂರು ತಿ‌ಂಗಳಿಂದೆ ಇದ್ದ ಸ್ಮಶಾನವನ್ನ ಖಾಸಗಿಯವರು ನಮಗೆ ಸೇರಿದ್ದು ಅಂತ ಸಮಾಧಿಗಳನ್ನ ಕಿತ್ತು ಹಾಕಿದ್ರಂತೆ. ಹೀಗಾಗಿ ಅಂದಿನಿಂದ ಗ್ರಾಮದ ದಲಿತ ಕುಟುಂಬಗಳಿಗೆ ಅಂತ್ಯ ಸಂಸ್ಕಾರ ಮಾಡಲು ಜಾಗವಿಲ್ಲದಂತಾಗಿದೆ.

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅವ್ಯವಸ್ಥೆ ಅನಾವರಣ

ಹಲವು ಭಾರಿ ಅಧಿಕಾರಿಗಳಿಗೆ ಸ್ಮಶಾನ ಭೂಮಿ ಕಬಳಿಕೆ ಮಾಡಿದ್ದು ಬಿಡಿಸಿಕೊಡುವಂತೆ ಮನವಿ ಮಾಡಿದ್ರಂತೆ. ಆದರೆ ಹಲವು ಭಾರಿ ಮನವಿ ಮಾಡಿದ್ರು ಅಧಿಕಾರಿಗಳು ಸ್ಪಂದಿಸಿಲ್ಲ. ಗ್ರಾಮದಲ್ಲಿ ದೇವರಾಜ್ ಎಂಬುವವರು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ ಅಂತ ಆ್ಯಂಬುಲೇನ್ಸ್ ಮೂಲಕ ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಶವ ತಂದು ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನೆಗೆ ಮುಂದಾಗ್ತಿದ್ದಂತೆ ಎಚ್ಚೆತ್ತ ದೊಡ್ಡಬಳ್ಳಾಪುರ ಎಸಿ ಮತ್ತು ತಹಶಿಲ್ದಾರ್ ಸ್ಥಳಕ್ಕೆ ದೌಡಾಯಿಸಿ ಬಂದು ಗ್ರಾಮಸ್ಥರ ಮನವೊಲಿಸುವ ಯತ್ನಿಸಿದರು. ಆದರೆ ಕಳೆದ ಹಲವು ತಿಂಗಳುಗಳಿಂದ ಸ್ಮಶಾನ ಜಾಗಕ್ಕಾಗಿ ಕಚೇರಿಗಳಿಗೆ ಅಲೆದು ಅಲೆದು ಸುಸ್ತಾಗಿದ್ದ ಗ್ರಾಮಸ್ಥರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊ‌ಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us