AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ; ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದ್ದು ಅಧಿವೇಶನದಲ್ಲಿ ಈ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ಘೋಷಿಸಲಾಗಿದೆ.

ಬಿ ಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ; ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ
ಬಿ.ಎಸ್. ಯಡಿಯೂರಪ್ಪ
TV9 Web
| Updated By: guruganesh bhat|

Updated on:Sep 24, 2021 | 3:19 PM

Share

ವಿಧಾನಸೌಧ: ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಪ್ರಶಸ್ತಿ ಘೋಷಿಸಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದ್ದು ಅಧಿವೇಶನದಲ್ಲಿ ಈ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ಘೋಷಿಸಲಾಗಿದೆ. ಲೋಕಸಭೆ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾರವರು ಸೂಚನೆ ನೀಡಿದ್ದರು. ಶಾಸಕರಲ್ಲಿ ಅತ್ಯುತ್ತಮ ಸಂಸದೀಯ ಪಟುವನ್ನು ಗುರುತಿಸಲು ಈ ಪ್ರಶಸ್ತಿ ಘೋಷಿಸುತ್ತೇವೆ ಎಂದು ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ತಿಳಿಸಿದರು.

ರಾಜಕೀಯದಲ್ಲಿ ಯುವ ಪೀಳಿಗೆಗೆ ಪಕ್ಷಗಳು ಆದ್ಯತೆ ನೀಡಬೇಕು. ಸಂಸದೀಯ ಮೌಲ್ಯ ಬಲಪಡಿಸುವ ನಿಟ್ಟಿನಲ್ಲಿ ಚಿಂತಿಸಬೇಕು. ಶಾಸನಸಭೆಯಲ್ಲಿ ನಾವೆಲ್ಲರೂ ಒಟ್ಟಾಗಿ ಚಿಂತನೆ ನಡೆಸಬೇಕು. ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಗ್ನರಾಗಬೇಕು ಎಂದು ವಿಧಾನಸಭೆ, ಪರಿಷತ್​ನ ಎಲ್ಲಾ ಸದಸ್ಯರಲ್ಲಿ ಮನವಿ ಮಾಡುವೆ ಎಂದು ವಿಧಾನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಜತೆಗೆ ಸೆಂಟ್ರಲ್ ವಿಸ್ತಾದ 1 ಭಾಗಕ್ಕೆ ಅನುಭವ ಮಂಟಪದ ಹೆಸರನ್ನು ಇಡುವಂತೆಯೂ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸಭಾಪರಿ ಬಸವರಾಜ ಹೊರಟ್ಟಿ, ಸಂವಿಧಾನದ ಮೂಲ ಆಶಯ ಜಾರಿಗೆ ತರುವುದು ಜನಪ್ರತಿನಿಧಗಳ ಕರ್ತವ್ಯ. ಜನರಿಗೆ ನೆರವಾಗುವ ಅವಿರತ ಪ್ರಯತ್ನ ನಮ್ಮದಾಗಬೇಕು. ಎಲ್ಲಾ ಜಾತಿ, ಧರ್ಮ, ಭಾಷೆ ಮೀರಿ ಕೆಲಸ ಮಾಡಬೇಕು. ಸದನ ಆರೋಪ, ಪ್ರತ್ಯಾರೋಪದ ಅಖಾಡವಾಗಬಾರದು. ಜನರಿಂದ ಆಯ್ಕೆಯಾದ ನಾವು ಜನರ ನೋವಿಗೆ ಸ್ಪಂದಿಸಬೇಕು. ಸದನದಲ್ಲಿ ಯಾವುದೇ ವಿಚಾರ ವಿಸ್ತೃತವಾಗಿ ಚರ್ಚೆಯಾಗದೇ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವುದು ದುರ್ದೈವವಾಗಿದೆ. ಚಿಂತಕರ ಚಾವಡಿ ಪರಿಷತ್ನಲ್ಲಿ ಚರ್ಚೆ ನಡೆಸದೆ ಅರ್ಧಗಂಟೆಯಲ್ಲಿ 27 ವಿಧೇಯಕಗಳ ಅಂಗೀಕಾರಗೊಳ್ಳುವುದು ಸರಿಯಲ್ಲ. ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ ತಡೆಯಬೇಕು. ಶಾಸನ ಸಭೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಪ್ರಭಾವಿಗಳಿಗೆ ಟಿಕೆಟ್ ನೀಡುತ್ತಿದ್ದಾರೆಂದು ಜನಾಭಿಪ್ರಾಯವಿದೆ. ಎಲ್ಲ ಪಕ್ಷಗಳೂ ಸಾರ್ವಜನಿಕರ ಟೀಕೆಗೆ ಗುರಿಯಾಗಿವೆ. ಹಣವಿರುವವರು ಮಾತ್ರ ಚುನಾವಣೆಯಲ್ಲಿ ಆಯ್ಕೆಯಾಗ್ತಿದ್ದಾರೆ. ಇಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧೆ ಸಾಮಾನ್ಯ ವಿಚಾರವಲ್ಲ. ಮುಕ್ತ ನ್ಯಾಯ ಸಮ್ಮತ ಚುನಾವಣೆಗೆ ನಾವು ಆಸ್ಪದ ನೀಡಬೇಕು. ಎಲ್ಲಾ ಪಕ್ಷಗಳು ಜನರ ನೋವಿಗೆ ಸ್ಪಂದಿಸುವವರಿಗೆ ಟಿಕೆಟ್ ನೀಡಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

(BS Yediyurappa honoured as Best MLA in Karnataka joint Assembly session 2021 by Lok Sabha Speaker Om Birla)

Published On - 2:57 pm, Fri, 24 September 21

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ