AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa: ಬಿ.ಎಸ್​. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್​​; ಸುಪ್ರೀಂಕೋರ್ಟ್​​ನಿಂದ ಮಹತ್ವದ ಆದೇಶ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್​​ ನೀಡಿದೆ. ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಸಿಐಡಿ ಮತ್ತು ಸಂತ್ರಸ್ತೆಗೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಮೊರೆ ಹೋಗಿದ್ದರು. ರಾಜಕೀಯ ದ್ವೇಷದ ಆರೋಪ ಮುಂದಿಟ್ಟು ಅವರ ಪರ ವಕೀಲರು ವಾದ ಮಂಡಿಸಿದ್ದರು.

BS Yediyurappa: ಬಿ.ಎಸ್​. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್​​; ಸುಪ್ರೀಂಕೋರ್ಟ್​​ನಿಂದ ಮಹತ್ವದ ಆದೇಶ
ಬಿ.ಎಸ್​. ಯಡಿಯೂರಪ್ಪ
ರಮೇಶ್​ ಎಮ್​.
| Edited By: |

Updated on:Dec 02, 2025 | 12:24 PM

Share

ನವದೆಹಲಿ, ಡಿಸೆಂಬರ್​​ 02: ಪೋಕ್ಸೋ ಕೇಸ್​​ ವಿಚಾರದಲ್ಲಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್​​ ತಾತ್ಕಾಲಿಕ ರಿಲೀಫ್​​ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್‌ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್​​ ಜಾರಿ ಮಾಡಿದೆ.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನವೆಂಬರ್ 13ರಂದು ಕರ್ನಾಟಕ ಹೈಕೋರ್ಟ್​​ ನಿರಾಕಾರಿಸಿತ್ತು. ಆ ಬೆನ್ನಲ್ಲೇ ಬಿಎಸ್​​ವೈ ಸುಪ್ರೀಂಕೋರ್ಟ್​​ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ವಾದಿಸಿದ ಹಿರಿಯ ವಕೀಲರಾದ ಸಿಧಾರ್ಥ ಲೂಥ್ರಾ ಮತ್ತು ಸಿಧಾರ್ಥ ದಾವೆ ಅವರು, ಹೈಕೋರ್ಟ್​​ನ ಫೆ.7, 2025ರ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಅವರ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ. ಅವರು 88 ವರ್ಷದ ಹಿರಿಯ ವ್ಯಕ್ತಿ, ನಾಲ್ಕು ಬಾರಿ ಮುಖ್ಯಮಂತ್ರಿ. ರಾಜಕೀಯ ದ್ವೇಷದಿಂದ ನರಳುತ್ತಿದ್ದಾರೆ ಎಂದು ಕೋರ್ಟ್​​ ಗಮನಕ್ಕೆ ತಂದಿದ್ದಾರೆ. ಈ ವೇಳೆ, ಹೈಕೋರ್ಟ್​​ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪೀಠ ಪ್ರತಿವಾದಿಗಳನ್ನು ಪ್ರಶ್ನಿಸಿದೆ.

ಇದನ್ನೂ ಓದಿ:  ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ ಹೈಕೋರ್ಟ್ ಶಾಕ್​

ಪ್ರಕರಣ ಏನು?

ಕಳೆದ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ 17 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿಯೇ ಈ ಬಗ್ಗೆ ಆರೋಪಿಸಿದ್ದರು. ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸರಿಂದ ಬಿಎಸ್​​ವೈ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ, ಮುಂದಿನ ತನಿಖೆಗಾಗಿ ಇದನ್ನು ಸಿಐಡಿ‌ಗೆ ವರ್ಗಾಯಿಸಲಾಗಿತ್ತು. ಸಿಐಡಿ ಮರು FIR ದಾಖಲಿಸಿ, ತನಿಖೆ ನಡೆಸಿ ಚಾರ್ಜ್​​ಶೀಟ್​​ ಸಲ್ಲಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:23 pm, Tue, 2 December 25

Follow Us
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ