ಮೇ 4ರ ನಂತರ ರಾಜ್ಯದಲ್ಲಿ ಕೈಗಾರಿಕೆ ಚಟುವಟಿಕೆ ಆರಂಭವಾಗುತ್ತಾ? ಸಿಎಂ ಏನು ಹೇಳಿದ್ರು

ಬೆಂಗಳೂರು: ಮೇ 4ರ ನಂತರ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ನಿರ್ಧರಿಸಿದ್ದೇವೆ ಎಂದು ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೊನಾ ವೈರಸ್ ಪತ್ತೆಯಾದ ಕಂಟೇನ್‌ಮೆಂಟ್ ಪ್ರದೇಶಗಳಲ್ಲಿ ಮಾತ್ರ ಅವಕಾಶವಿರುವುದಿಲ್ಲ. ರಾಜ್ಯದ ಜನರು ಸರ್ಕಾರದ ನಿರ್ದೇಶನ ಪಾಲಿಸಿದ್ದಾರೆ. ಬೆಂಗಳೂರಿನಲ್ಲೂ ಕೊರೊನಾ ಪ್ರಕರಣ ಪತ್ತೆಯಾಗದಿದ್ದರೆ ಮೇ 4ರ ನಂತರ ಬೆಂಗಳೂರಿನ ಸುತ್ತಮುತ್ತ ಪ್ರದೇಶದ ಕೈಗಾರಿಕೆಗಳು ಓಪನ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು. ಕೊರೊನಾ […]

ಮೇ 4ರ ನಂತರ ರಾಜ್ಯದಲ್ಲಿ ಕೈಗಾರಿಕೆ ಚಟುವಟಿಕೆ ಆರಂಭವಾಗುತ್ತಾ? ಸಿಎಂ ಏನು ಹೇಳಿದ್ರು
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​

Updated on: Apr 30, 2020 | 1:33 PM

ಬೆಂಗಳೂರು: ಮೇ 4ರ ನಂತರ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ನಿರ್ಧರಿಸಿದ್ದೇವೆ ಎಂದು ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ವೈರಸ್ ಪತ್ತೆಯಾದ ಕಂಟೇನ್‌ಮೆಂಟ್ ಪ್ರದೇಶಗಳಲ್ಲಿ ಮಾತ್ರ ಅವಕಾಶವಿರುವುದಿಲ್ಲ. ರಾಜ್ಯದ ಜನರು ಸರ್ಕಾರದ ನಿರ್ದೇಶನ ಪಾಲಿಸಿದ್ದಾರೆ. ಬೆಂಗಳೂರಿನಲ್ಲೂ ಕೊರೊನಾ ಪ್ರಕರಣ ಪತ್ತೆಯಾಗದಿದ್ದರೆ ಮೇ 4ರ ನಂತರ ಬೆಂಗಳೂರಿನ ಸುತ್ತಮುತ್ತ ಪ್ರದೇಶದ ಕೈಗಾರಿಕೆಗಳು ಓಪನ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಕೊರೊನಾ 2-3 ತಿಂಗಳು ಮುಂದುವರಿದ್ರೂ ಅಚ್ಚರಿಯಿಲ್ಲ. ಆದರೆ ಆರ್ಥಿಕ ಚಟುವಟಿಕೆ ಆರಂಭಿಸಬೇಕಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಸಹ ಚಿಂತನೆ ಮಾಡಿದ್ದಾರೆ. ಕೈಗಾರಿಕೆಗಳನ್ನು ಓಪನ್ ಮಾಡುವ ಸಂಬಂಧ ಇಂದು ಸಂಜೆ ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡುತ್ತೇವೆ. ಆದ್ರೆ ಹೋಟೆಲ್, ಮಾಲ್ ತೆರೆಯುವ ಯಾವುದೇ ಆಲೋಚನೆ ಇಲ್ಲ. ಮೇ4ರ ನಂತರ ಕೇಂದ್ರದ ಮಾರ್ಗಸೂಚಿ ಬಿಡುಗಡೆ ಆಗಲಿದೆ. ಆ ನಂತರ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

Published On - 12:55 pm, Thu, 30 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us