AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ರಾಜೀನಾಮೆ..? ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಯಡಿಯೂರಪ್ಪಗೆ ವಾಪಸ್​ ಬರುವಂತೆ ಅಮಿತ್ ಶಾ ಸೂಚಿಸಿದ್ದೇಕೆ?

BS Yediyurappa resignation episode: ಸಿಎಂ ಬಿ.ಎಸ್. ಯಡಿಯೂರಪ್ಪ ಕಾರು ವಾಪಾಸ್ ಅಮಿತ್ ಶಾ ನಿವಾಸತ್ತ ಯು ಟರ್ನ್ ತೆಗೆದುಕೊಂಡು ಅಮಿತ್ ಶಾ ಅವರನ್ನು ಭೇಟಿಯಾಗಿದ್ರು. ಸುಮಾರು 20 ನಿಮಿಗಳ ಕಾಲ ಸಿಎಂ‌ ಅಮಿತ್ ಶಾ ಅವ್ರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ, ಯಡಿಯೂರಪ್ಪ ರಾಜೀನಾಮೆ ವದಂತಿಗೆ ರೆಕ್ಕೆಪುಕ್ಕ ಬಂದಿದೆ.

ಯಡಿಯೂರಪ್ಪ ರಾಜೀನಾಮೆ..? ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಯಡಿಯೂರಪ್ಪಗೆ ವಾಪಸ್​ ಬರುವಂತೆ ಅಮಿತ್ ಶಾ ಸೂಚಿಸಿದ್ದೇಕೆ?
ಯಡಿಯೂರಪ್ಪ ರಾಜೀನಾಮೆ..? ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಯಡಿಯೂರಪ್ಪಗೆ ವಾಪಸ್​ ಬರುವಂತೆ ಅಮಿತ್ ಶಾ ಸೂಚಿಸಿದ್ದೇಕೆ?
TV9 Web
| Edited By: |

Updated on: Jul 17, 2021 | 5:34 PM

Share

ಕರ್ನಾಟಕ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ದೆಹಲಿಗೆ ಭೇಟಿ ವೇಳೆ ನಾಯಕತ್ವ ಗೊಂದಲಕ್ಕೆ ಬ್ರೇಕ್ ಬೀಳಲಿದೆ ಎಂದು ನಂಬಲಾಗಿತ್ತು. ಆದ್ರೆ ಸಿಎಂ ಬದಲಾವಣೆ ವಿಚಾರ ಮತ್ತಷ್ಟು ಜಟಿಲಗೊಂಡಿದೆ. ವರಿಷ್ಠರನ್ನು ಭೇಟಿ ಮಾಡಿರುವ ಯಡಿಯೂರಪ್ಪ ರಾಜೀನಾಮೆ ನೀಡುವಂತೆ ನನಗೆ ಯಾರೂ ಸೂಚಿಸಿಲ್ಲ ಎಂದಿದ್ದಾರೆ.

ಯಾವಾಗ ಸಿಎಂ ಬಿ‌.ಎಸ್. ಯಡಿಯೂರಪ್ಪ (BS Yediyurappa) ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣಿಸಿದರೋ ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಯಾಗಿತ್ತು. ದೆಹಲಿಯ ರಾಜಕೀಯ ವಲಯ ಕೂಡ ಬಿ.ಎಸ್. ಯಡಿಯೂರಪ್ಪರ ಭೇಟಿಯನ್ನು ವಿಶೇಷವಾಗಿ ಪರಿಗಣಿಸಿತ್ತು. ನಿನ್ನೆ ದೆಹಲಿಗೆ ಬರುತ್ತಿದಂತೆ ಸಂಜೆ ಪ್ರಧಾನಿ ಮೋದಿ ಭೇಟಿಯಾದ ಯಡಿಯೂರಪ್ಪ ಸುಮಾರು 15 ನಿಮಿಷಗಳ ಕಾಲ ಆಪ್ತವಾಗಿ ಚರ್ಚೆ ಮಾಡಿದ್ರು.

ಪ್ರಧಾನಿ ಭೇಟಿಯಾಗಿ ನಗುತ್ತಲೇ ಪೋಸ್ ಕೊಟ್ಟಿದ್ದ ಯಡಿಯೂರಪ್ಪನವರ ಬಗ್ಗೆ ಬೆಳಗ್ಗೆಯಾಗುತ್ತಲೇ ಶಾಕಿಂಗ್ ಸುದ್ದಿಗಳು ಹರಿದಾಡತೊಗಿದವು. ಯಡಿಯೂರಪ್ಪನವರು ಪ್ರಧಾನಿ ಮೋದಿಯವ್ರ ಬಳಿ ರಾಜೀನಾಮೆ ಪ್ರಸ್ತಾಪ ಮಾಡಿದ್ದಾರೆ. ರಾಜೀನಾಮೆ‌ ಕೊಟ್ಟೇ ಬಿಡ್ತಾರೆ ಎಂದು ದೆಹಲಿಯಲ್ಲಿ ಚರ್ಚೆ ಆರಂಭವಾಗಿತು. ಬೆಳಗ್ಗೆ ಕರ್ನಾಟಕಭವನದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿಗೆ ತೆರಳುವ ಮುನ್ನ ರಾಜೀನಾಮೆ ನೀಡುವ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ್ರು.

ರಾಜೀನಾಮೆ ನೀಡುವಂತೆ (Resignation) ಯಾವುದೇ ನಾಯಕರು ನನಗೆ ಸೂಚಿಸಿಲ್ಲ. ರಾಜೀನಾಮೆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ರಾಜ್ಯದ ಅಭಿವೃದ್ಧಿಗೆ ದುಡಿಯುತ್ತೇನೆ ಎಂದು ಹೇಳಿ ರಾಜೀನಾಮೆ‌ ವದಂತಿ ನಿರಾಕರಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ತೆರಳಿದ ಯಡಿಯೂರಪ್ಪ ಸುಮಾರು 30 ನಿಮಿಷಗಳ ಕಾಲ ನಡ್ಡಾ ಅವ್ರ ಜೊತೆ ಚರ್ಚೆ ನಡೆಸಿದ್ದಾರೆ. ಇನ್ನು ವಿಶೇಷ ಅಂದ್ರೆ ನಡ್ಡಾ ಭೇಟಿ ವೇಳೆ ವಿಜಯೇಂದ್ರ ಕೂಡ ಯಡಿಯೂರಪ್ಪ ಜೊತೆಗಿದ್ರು. ನಡ್ಡಾ ಭೇಟಿ ಬಳಿಕವೂ ರಾಜೀನಾಮೆ ನೀಡುವ ವದಂತಿ ಕುರಿತು ಬಿಎಸ್ ವೈ ಸ್ಪಷ್ಟವಾಗಿ ತಳ್ಳಿಹಾಕಿದ್ರು.

ನಡ್ಡಾ ಭೇಟಿ ಬಳಿಕ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವ್ರನ್ನು ಯಡಿಯೂರಪ್ಪ ಭೇಟಿಯಾದ್ರು. ಭೇಟಿಯಾಗಿ ಖಾಸಗಿ ಹೋಟೆಲ್ ನಲ್ಲಿ ಉಪಹಾರ ಸೇವಿಸಿ ಬೆಂಗಳೂರು ಕಡೆ ಮುಖ ಮಾಡಿದ್ರು. ಕಾರು ಏರಿ ವಿಮಾನ ನಿಲ್ದಾಣದ ಕಡೆ ಹೊರಟಿದ್ರು. ಇನ್ನೇನು ವಿಮಾನ ನಿಲ್ದಾಣ ತಲುಪಬೇಕು ಅನ್ನುವಷ್ಟರಲ್ಲಿ ಗೃಹ ಸಚಿವ ಅಮಿತ್ ಶಾ ಅವ್ರ ಕರೆ ಬಂದಿದೆ.

ವಾಪಾಸ್ ಬಂದು ನನ್ನ ಭೇಟಿಯಾಗಿ ಹೋಗಿ ಎಂದು ಸೂಚನೆ ನೀಡಿದ್ದಾರೆ. ಸಿಎಂ ಕಾರು ವಾಪಾಸ್ ಅಮಿತ್ ಶಾ ನಿವಾಸತ್ತ ಯು ಟರ್ನ್ ತೆಗೆದುಕೊಂಡು ಅಮಿತ್ ಶಾ ಅವರನ್ನು ಭೇಟಿಯಾಗಿದ್ರು. ಸುಮಾರು 20 ನಿಮಿಗಳ ಕಾಲ ಸಿಎಂ‌ ಅಮಿತ್ ಶಾ ಅವ್ರ ಜೊತೆ ಮಾತುಕತೆ ನಡೆಸಿದ್ದಾರೆ. ಅಮಿತ್ ಶಾ (Amit Shah) ಭೇಟಿ ಬಳಿಕವೂ ರಾಜೀನಾಮೆ ನೀಡುವ ವದಂತಿಯನ್ನು ನಿರಾಕರಿಸಿದ್ದಾರೆ.

ಯಡಿಯೂರಪ್ಪ ದೆಹಲಿ ಭೇಟಿ ಹಿಂದೆಂದಿಗಿಂತಾ ವಿಶೇಷವಾಗಿತ್ತು. ಆರು ತಿಂಗಳ ಬಳಿಕ ದೆಹಲಿಗೆ ಬಂದಿದ್ದ ಯಡಿಯೂರಪ್ಪನವರ ದೆಹಲಿ ಭೇಟಿ ಕುತೂಹಲ ಹೆಚ್ಚಿಸಿತ್ತು. ಸಿಎಂ ಪರ ಹಾಗೂ ವಿರೋಧಿ ಬಣ ಯಡಿಯೂರಪ್ಪ ನಡೆಯ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದರು. ಸಿಎಂ ಆಪ್ತ ಬಣ ಯಡಿಯೂರಪ್ಪ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎನ್ನುವ ವಿಶ್ವಾಸದಲ್ಲಿದ್ದರೆ, ವಿರೋಧಿ ಬಣ ಯಡಿಯೂರಪ್ಪ ರಾಜೀನಾಮೆ ಸನ್ನಿಹಿತವಾಗಿದೆ ಎಂದು ವ್ಯಾಖ್ಯಾನಿಸುತ್ತಿದ್ದಾರೆ. ಯಡಿಯೂರಪ್ಪನವರ ದೆಹಲಿ ಭೇಟಿ ಬಳಿಕವೂ ಸ್ಪಷ್ಟತೆ ಸಿಗದೇ ಗೊಂದಲ ಮುಂದುವರೆದಿದೆ.

– ಹರೀಶ್‌, ಟಿವಿ ನೈನ್, ನವದೆಹಲಿ

ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ – ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ (BS Yediyurappa resignation episode intensifies after amit shah calls him to his house in delhi)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!