AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಿಎಂ ಯಡಿಯೂರಪ್ಪ ಮಣಿಪಾಲ್​ ಆಸ್ಪತ್ರೆಗೆ ದಾಖಲು; ಒಂದು ವಾರದಿಂದ ಅವರ ಆರೋಗ್ಯ ಹೇಗಿತ್ತು?

BS Yediyurappa Coronavirus | ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು. ಹೀಗಾಗಿ ಅಂದೇ ಮುಖ್ಯಮಂತ್ರಿಗಳಿಗೆ ತೀವ್ರ ಜ್ವರ ಕಾಡಿತ್ತು ಎಂಬ ಅನುಮಾನ ಬಲವಾಗಿದೆ.

ಕೊರೊನಾದಿಂದ ಸಿಎಂ ಯಡಿಯೂರಪ್ಪ ಮಣಿಪಾಲ್​ ಆಸ್ಪತ್ರೆಗೆ ದಾಖಲು; ಒಂದು ವಾರದಿಂದ ಅವರ ಆರೋಗ್ಯ ಹೇಗಿತ್ತು?
ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು.
Skanda
| Edited By: ಸಾಧು ಶ್ರೀನಾಥ್​|

Updated on:Apr 16, 2021 | 2:52 PM

Share

ಬೆಳಗಾವಿ: ಕಳೆದ ಕೆಲ ದಿನಗಳಿಂದ ಬೆಳಗಾವಿ ಉಪಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ಮೆರವಣಿಗೆ ಆಯೋಜಿಸಿದ್ದ ವೇಳೆ, ರೋಡ್ ಶೋನಲ್ಲಿ ತೆರೆದ ವಾಹನ ಏರಲು ಯಡಿಯೂರಪ್ಪ ತುಸು ಕಷ್ಟಪಟ್ಟಿದ್ದರು. ಅದಾದ ಬಳಿಕ ರೋಡ್ ಶೋ ಆಯೋಜನೆ, ಟ್ರಾಫಿಕ್ ನಿರ್ವಹಣೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಕಾರಿನಲ್ಲೇ 5 ನಿಮಿಷಗಳಿಗೂ ಹೆಚ್ಚು ಕಾಲ ಕುಳಿತಿದ್ದ ಸಿಎಂ ಹಾಗೂ ಸಚಿವರು ಸುಸ್ತಾಗಿದ್ದರು.

ಮೊನ್ನೆ ರಾತ್ರಿಯಿಡೀ ಜ್ವರದಿಂದ ಬಳಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಸಿಲಿನ ತಾಪ ತಾಳಲಾರದೇ ರಕ್ಷಣೆಗಾಗಿ ಟೋಪಿ ಮತ್ತು ಕೊಡೆಯ ಮೊರೆ ಹೋಗಿದ್ದರು. ಅಷ್ಟೇ ಅಲ್ಲದೇ ಪ್ರಚಾರದ ವೇಳೆಯೇ ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿತ್ತು. ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು. ಹೀಗಾಗಿ ಅಂದೇ ಮುಖ್ಯಮಂತ್ರಿಗಳಿಗೆ ತೀವ್ರ ಜ್ವರ ಕಾಡಿತ್ತು ಎಂಬ ಅನುಮಾನ ಬಲವಾಗಿದೆ.

ನಂತರ ರೋಡ್ ಶೋ ವೇಳೆಯೂ ಸುಸ್ತು ತಾಳಲಾರದೇ ಅದನ್ನು ಅರ್ಧಕ್ಕೇ ಮೊಟಕುಗೊಳಿಸಿದ ಯಡಿಯೂರಪ್ಪ, ವಿಶ್ರಾಂತಿ ಪಡೆಯಲು ಹೊಟೇಲ್​ಗೆ ಆಗಮಿಸಿದ್ದರು. ಇದೀಗ ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕ ಮೂಡಿಸಿದೆ. ಪ್ರಚಾರದ ವೇಳೆ ಸಾಕಷ್ಟು ಜನರೊಂದಿಗೆ ಸಿಎಂ ಸಂಪರ್ಕಕ್ಕೆ ಬಂದಿರುವುದರಿಂದ ಸೋಂಕು ಇತರರಿಗೆ ಹರಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳೂ ಟ್ವೀಟ್ ಮಾಡಿದ್ದು ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

Published On - 2:51 pm, Fri, 16 April 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್