AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಿಎಂ ಯಡಿಯೂರಪ್ಪ ಮಣಿಪಾಲ್​ ಆಸ್ಪತ್ರೆಗೆ ದಾಖಲು; ಒಂದು ವಾರದಿಂದ ಅವರ ಆರೋಗ್ಯ ಹೇಗಿತ್ತು?

BS Yediyurappa Coronavirus | ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು. ಹೀಗಾಗಿ ಅಂದೇ ಮುಖ್ಯಮಂತ್ರಿಗಳಿಗೆ ತೀವ್ರ ಜ್ವರ ಕಾಡಿತ್ತು ಎಂಬ ಅನುಮಾನ ಬಲವಾಗಿದೆ.

ಕೊರೊನಾದಿಂದ ಸಿಎಂ ಯಡಿಯೂರಪ್ಪ ಮಣಿಪಾಲ್​ ಆಸ್ಪತ್ರೆಗೆ ದಾಖಲು; ಒಂದು ವಾರದಿಂದ ಅವರ ಆರೋಗ್ಯ ಹೇಗಿತ್ತು?
ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು.
Skanda
| Edited By: |

Updated on:Apr 16, 2021 | 2:52 PM

Share

ಬೆಳಗಾವಿ: ಕಳೆದ ಕೆಲ ದಿನಗಳಿಂದ ಬೆಳಗಾವಿ ಉಪಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ಮೆರವಣಿಗೆ ಆಯೋಜಿಸಿದ್ದ ವೇಳೆ, ರೋಡ್ ಶೋನಲ್ಲಿ ತೆರೆದ ವಾಹನ ಏರಲು ಯಡಿಯೂರಪ್ಪ ತುಸು ಕಷ್ಟಪಟ್ಟಿದ್ದರು. ಅದಾದ ಬಳಿಕ ರೋಡ್ ಶೋ ಆಯೋಜನೆ, ಟ್ರಾಫಿಕ್ ನಿರ್ವಹಣೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಕಾರಿನಲ್ಲೇ 5 ನಿಮಿಷಗಳಿಗೂ ಹೆಚ್ಚು ಕಾಲ ಕುಳಿತಿದ್ದ ಸಿಎಂ ಹಾಗೂ ಸಚಿವರು ಸುಸ್ತಾಗಿದ್ದರು.

ಮೊನ್ನೆ ರಾತ್ರಿಯಿಡೀ ಜ್ವರದಿಂದ ಬಳಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಸಿಲಿನ ತಾಪ ತಾಳಲಾರದೇ ರಕ್ಷಣೆಗಾಗಿ ಟೋಪಿ ಮತ್ತು ಕೊಡೆಯ ಮೊರೆ ಹೋಗಿದ್ದರು. ಅಷ್ಟೇ ಅಲ್ಲದೇ ಪ್ರಚಾರದ ವೇಳೆಯೇ ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿತ್ತು. ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು. ಹೀಗಾಗಿ ಅಂದೇ ಮುಖ್ಯಮಂತ್ರಿಗಳಿಗೆ ತೀವ್ರ ಜ್ವರ ಕಾಡಿತ್ತು ಎಂಬ ಅನುಮಾನ ಬಲವಾಗಿದೆ.

ನಂತರ ರೋಡ್ ಶೋ ವೇಳೆಯೂ ಸುಸ್ತು ತಾಳಲಾರದೇ ಅದನ್ನು ಅರ್ಧಕ್ಕೇ ಮೊಟಕುಗೊಳಿಸಿದ ಯಡಿಯೂರಪ್ಪ, ವಿಶ್ರಾಂತಿ ಪಡೆಯಲು ಹೊಟೇಲ್​ಗೆ ಆಗಮಿಸಿದ್ದರು. ಇದೀಗ ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕ ಮೂಡಿಸಿದೆ. ಪ್ರಚಾರದ ವೇಳೆ ಸಾಕಷ್ಟು ಜನರೊಂದಿಗೆ ಸಿಎಂ ಸಂಪರ್ಕಕ್ಕೆ ಬಂದಿರುವುದರಿಂದ ಸೋಂಕು ಇತರರಿಗೆ ಹರಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳೂ ಟ್ವೀಟ್ ಮಾಡಿದ್ದು ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

Published On - 2:51 pm, Fri, 16 April 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು