AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಿಎಂ ಯಡಿಯೂರಪ್ಪ ಮಣಿಪಾಲ್​ ಆಸ್ಪತ್ರೆಗೆ ದಾಖಲು; ಒಂದು ವಾರದಿಂದ ಅವರ ಆರೋಗ್ಯ ಹೇಗಿತ್ತು?

BS Yediyurappa Coronavirus | ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು. ಹೀಗಾಗಿ ಅಂದೇ ಮುಖ್ಯಮಂತ್ರಿಗಳಿಗೆ ತೀವ್ರ ಜ್ವರ ಕಾಡಿತ್ತು ಎಂಬ ಅನುಮಾನ ಬಲವಾಗಿದೆ.

ಕೊರೊನಾದಿಂದ ಸಿಎಂ ಯಡಿಯೂರಪ್ಪ ಮಣಿಪಾಲ್​ ಆಸ್ಪತ್ರೆಗೆ ದಾಖಲು; ಒಂದು ವಾರದಿಂದ ಅವರ ಆರೋಗ್ಯ ಹೇಗಿತ್ತು?
ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು.
Skanda
| Edited By: |

Updated on:Apr 16, 2021 | 2:52 PM

Share

ಬೆಳಗಾವಿ: ಕಳೆದ ಕೆಲ ದಿನಗಳಿಂದ ಬೆಳಗಾವಿ ಉಪಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ಮೆರವಣಿಗೆ ಆಯೋಜಿಸಿದ್ದ ವೇಳೆ, ರೋಡ್ ಶೋನಲ್ಲಿ ತೆರೆದ ವಾಹನ ಏರಲು ಯಡಿಯೂರಪ್ಪ ತುಸು ಕಷ್ಟಪಟ್ಟಿದ್ದರು. ಅದಾದ ಬಳಿಕ ರೋಡ್ ಶೋ ಆಯೋಜನೆ, ಟ್ರಾಫಿಕ್ ನಿರ್ವಹಣೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಕಾರಿನಲ್ಲೇ 5 ನಿಮಿಷಗಳಿಗೂ ಹೆಚ್ಚು ಕಾಲ ಕುಳಿತಿದ್ದ ಸಿಎಂ ಹಾಗೂ ಸಚಿವರು ಸುಸ್ತಾಗಿದ್ದರು.

ಮೊನ್ನೆ ರಾತ್ರಿಯಿಡೀ ಜ್ವರದಿಂದ ಬಳಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಸಿಲಿನ ತಾಪ ತಾಳಲಾರದೇ ರಕ್ಷಣೆಗಾಗಿ ಟೋಪಿ ಮತ್ತು ಕೊಡೆಯ ಮೊರೆ ಹೋಗಿದ್ದರು. ಅಷ್ಟೇ ಅಲ್ಲದೇ ಪ್ರಚಾರದ ವೇಳೆಯೇ ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿತ್ತು. ಏಪ್ರಿಲ್​ 12 ರಂದು ಬೀದರ್​ನ ಬಸವಕಲ್ಯಾಣದಲ್ಲಿ ಪ್ರಚಾರ ನಡೆಸುವ ವೇಳೆ ಡೋಲೋ 650 ಮಾತ್ರೆ ನುಂಗಿದ್ದು ಟಿವಿ9 ಕ್ಯಾಮೆರದಲ್ಲಿ ಸೆರೆಯಾಗಿತ್ತು. ಹೀಗಾಗಿ ಅಂದೇ ಮುಖ್ಯಮಂತ್ರಿಗಳಿಗೆ ತೀವ್ರ ಜ್ವರ ಕಾಡಿತ್ತು ಎಂಬ ಅನುಮಾನ ಬಲವಾಗಿದೆ.

ನಂತರ ರೋಡ್ ಶೋ ವೇಳೆಯೂ ಸುಸ್ತು ತಾಳಲಾರದೇ ಅದನ್ನು ಅರ್ಧಕ್ಕೇ ಮೊಟಕುಗೊಳಿಸಿದ ಯಡಿಯೂರಪ್ಪ, ವಿಶ್ರಾಂತಿ ಪಡೆಯಲು ಹೊಟೇಲ್​ಗೆ ಆಗಮಿಸಿದ್ದರು. ಇದೀಗ ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದು ಮತ್ತಷ್ಟು ಆತಂಕ ಮೂಡಿಸಿದೆ. ಪ್ರಚಾರದ ವೇಳೆ ಸಾಕಷ್ಟು ಜನರೊಂದಿಗೆ ಸಿಎಂ ಸಂಪರ್ಕಕ್ಕೆ ಬಂದಿರುವುದರಿಂದ ಸೋಂಕು ಇತರರಿಗೆ ಹರಡಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳೂ ಟ್ವೀಟ್ ಮಾಡಿದ್ದು ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.

Published On - 2:51 pm, Fri, 16 April 21

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​