AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಬಿಜೆಪಿ ಸರ್ಕಾರ ಇರುತ್ತೆ ಎಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಎಂದಿಲ್ಲ- ಯತ್ನಾಳ್​

ಹಾವೇರಿ: ಸಚಿವ ಸ್ಥಾನ ಸಿಗದೇ ನಿರಾಸೆಗೆ ಈಡಾಗಿರುವ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು​ ಬಿಜೆಪಿ ವಿರುದ್ಧ ರೆಬೆಲ್​ ಆಗಿದ್ದಾರೆ. ಇತ್ತೀಚೆಗೆ ಸಿ.ಡಿ. ಬಾಂಬ್​ ಹೇಳಿಕೆ ನೀಡಿ ಚರ್ಚೆಗೆ ಗುರಿಯಾಗಿದ್ದ ಅವರು, ಈಗ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕ ಪ್ರವಾಸದ ವೇಳೆ ಇನ್ನೂ ಮುಂದಿನ ಎರಡೂವರೆ ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ಮಾತನಾಡಿರುವ ಯತ್ನಾಳ್​, ಅಮಿತ್ […]

ಅಮಿತ್​ ಶಾ ಬಿಜೆಪಿ ಸರ್ಕಾರ ಇರುತ್ತೆ ಎಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಎಂದಿಲ್ಲ- ಯತ್ನಾಳ್​
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ ವಿಜಯೇಂದ್ರ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಕೋಟ್ಯಂತರ ಹಣ ವಿನಿಯೋಗಿಸಿದ್ದಾರೆ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 2:39 PM

Share

ಹಾವೇರಿ: ಸಚಿವ ಸ್ಥಾನ ಸಿಗದೇ ನಿರಾಸೆಗೆ ಈಡಾಗಿರುವ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು​ ಬಿಜೆಪಿ ವಿರುದ್ಧ ರೆಬೆಲ್​ ಆಗಿದ್ದಾರೆ. ಇತ್ತೀಚೆಗೆ ಸಿ.ಡಿ. ಬಾಂಬ್​ ಹೇಳಿಕೆ ನೀಡಿ ಚರ್ಚೆಗೆ ಗುರಿಯಾಗಿದ್ದ ಅವರು, ಈಗ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕ ಪ್ರವಾಸದ ವೇಳೆ ಇನ್ನೂ ಮುಂದಿನ ಎರಡೂವರೆ ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ಮಾತನಾಡಿರುವ ಯತ್ನಾಳ್​, ಅಮಿತ್ ಶಾ 2.5 ವರ್ಷ ಬಿಜೆಪಿ ಸರ್ಕಾರವಿರುತ್ತದೆ ಎಂದಿದ್ದರು. ಆದರೆ, ಯಡಿಯೂರಪ್ಪ ಸಿಎಂ ಆಗಿರುತ್ತಾರೆ ಎಂದು ಹೇಳಿಲ್ಲ ಎಂದರು. ಈ ಮೂಲಕ ಶೀಘ್ರವೇ ಬಿಎಸ್​ವೈ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎನ್ನುವ ಸೂಚನೆ ನೀಡಿದರು.

ಯಡಿಯೂರಪ್ಪ ಸಿಎಂ ಆಗಿರುವವರೆಗೂ ನಾನು ಮಂತ್ರಿ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಆಗಿರುವವರೆಗೂ ನಾನು ಮಂತ್ರಿ ಆಗುವುದಿಲ್ಲ. ನಾನು ಸಚಿವ ಸ್ಥಾನ ಕೇಳಿದವನಲ್ಲ. ಯಾವ್ಯಾವ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲವೋ, ಅಂತಹ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡುವಂತೆ ಹೇಳಿದ್ದೆ ಅಷ್ಟೇ. ಇನ್ನು ನನಗೆ ಸಚಿವ ಸ್ಥಾನ ಕೊಟ್ಟರೂ ತೆಗೆದುಕೊಳ್ಳುವುದಿಲ್ಲ ಎಂದು ಶಪಥ ಮಾಡಿದರು.

ಏಪ್ರಿಲ್ ನಂತರ ಸಿಎಂ ಸ್ಥಾನದಿಂದ ಬಿಎಸ್​ವೈ ಕೆಳಗಿಳಿಯಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಗೆ ಯತ್ನಾಳ್​ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ, ಸಿದ್ದರಾಮಯ್ಯ ಬಹಳ ಆಪ್ತರು. ಹೀಗಾಗಿ ಬಿಎಸ್​ವೈ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎನ್ನುವ ವಿಚಾರ ಸಿದ್ದರಾಮಯ್ಯಗೆ ಗೊತ್ತಿರುತ್ತದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ನನಗೆ ಏನಾದ್ರೂ ತೊಂದರೆಯಾದ್ರೆ BSY ಹೊಣೆ -ಪೊಲೀಸ್​ ಭದ್ರತೆ ವಾಪಸ್​ ಪಡೆದಿದ್ದಕ್ಕೆ ಯತ್ನಾಳ್​ ಕಿಡಿಕಿಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್