AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಬಿಜೆಪಿ ಸರ್ಕಾರ ಇರುತ್ತೆ ಎಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಎಂದಿಲ್ಲ- ಯತ್ನಾಳ್​

ಹಾವೇರಿ: ಸಚಿವ ಸ್ಥಾನ ಸಿಗದೇ ನಿರಾಸೆಗೆ ಈಡಾಗಿರುವ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು​ ಬಿಜೆಪಿ ವಿರುದ್ಧ ರೆಬೆಲ್​ ಆಗಿದ್ದಾರೆ. ಇತ್ತೀಚೆಗೆ ಸಿ.ಡಿ. ಬಾಂಬ್​ ಹೇಳಿಕೆ ನೀಡಿ ಚರ್ಚೆಗೆ ಗುರಿಯಾಗಿದ್ದ ಅವರು, ಈಗ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕ ಪ್ರವಾಸದ ವೇಳೆ ಇನ್ನೂ ಮುಂದಿನ ಎರಡೂವರೆ ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ಮಾತನಾಡಿರುವ ಯತ್ನಾಳ್​, ಅಮಿತ್ […]

ಅಮಿತ್​ ಶಾ ಬಿಜೆಪಿ ಸರ್ಕಾರ ಇರುತ್ತೆ ಎಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಎಂದಿಲ್ಲ- ಯತ್ನಾಳ್​
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ ವಿಜಯೇಂದ್ರ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಕೋಟ್ಯಂತರ ಹಣ ವಿನಿಯೋಗಿಸಿದ್ದಾರೆ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 2:39 PM

Share

ಹಾವೇರಿ: ಸಚಿವ ಸ್ಥಾನ ಸಿಗದೇ ನಿರಾಸೆಗೆ ಈಡಾಗಿರುವ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು​ ಬಿಜೆಪಿ ವಿರುದ್ಧ ರೆಬೆಲ್​ ಆಗಿದ್ದಾರೆ. ಇತ್ತೀಚೆಗೆ ಸಿ.ಡಿ. ಬಾಂಬ್​ ಹೇಳಿಕೆ ನೀಡಿ ಚರ್ಚೆಗೆ ಗುರಿಯಾಗಿದ್ದ ಅವರು, ಈಗ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕ ಪ್ರವಾಸದ ವೇಳೆ ಇನ್ನೂ ಮುಂದಿನ ಎರಡೂವರೆ ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ಮಾತನಾಡಿರುವ ಯತ್ನಾಳ್​, ಅಮಿತ್ ಶಾ 2.5 ವರ್ಷ ಬಿಜೆಪಿ ಸರ್ಕಾರವಿರುತ್ತದೆ ಎಂದಿದ್ದರು. ಆದರೆ, ಯಡಿಯೂರಪ್ಪ ಸಿಎಂ ಆಗಿರುತ್ತಾರೆ ಎಂದು ಹೇಳಿಲ್ಲ ಎಂದರು. ಈ ಮೂಲಕ ಶೀಘ್ರವೇ ಬಿಎಸ್​ವೈ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎನ್ನುವ ಸೂಚನೆ ನೀಡಿದರು.

ಯಡಿಯೂರಪ್ಪ ಸಿಎಂ ಆಗಿರುವವರೆಗೂ ನಾನು ಮಂತ್ರಿ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಆಗಿರುವವರೆಗೂ ನಾನು ಮಂತ್ರಿ ಆಗುವುದಿಲ್ಲ. ನಾನು ಸಚಿವ ಸ್ಥಾನ ಕೇಳಿದವನಲ್ಲ. ಯಾವ್ಯಾವ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲವೋ, ಅಂತಹ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡುವಂತೆ ಹೇಳಿದ್ದೆ ಅಷ್ಟೇ. ಇನ್ನು ನನಗೆ ಸಚಿವ ಸ್ಥಾನ ಕೊಟ್ಟರೂ ತೆಗೆದುಕೊಳ್ಳುವುದಿಲ್ಲ ಎಂದು ಶಪಥ ಮಾಡಿದರು.

ಏಪ್ರಿಲ್ ನಂತರ ಸಿಎಂ ಸ್ಥಾನದಿಂದ ಬಿಎಸ್​ವೈ ಕೆಳಗಿಳಿಯಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಗೆ ಯತ್ನಾಳ್​ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ, ಸಿದ್ದರಾಮಯ್ಯ ಬಹಳ ಆಪ್ತರು. ಹೀಗಾಗಿ ಬಿಎಸ್​ವೈ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎನ್ನುವ ವಿಚಾರ ಸಿದ್ದರಾಮಯ್ಯಗೆ ಗೊತ್ತಿರುತ್ತದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ನನಗೆ ಏನಾದ್ರೂ ತೊಂದರೆಯಾದ್ರೆ BSY ಹೊಣೆ -ಪೊಲೀಸ್​ ಭದ್ರತೆ ವಾಪಸ್​ ಪಡೆದಿದ್ದಕ್ಕೆ ಯತ್ನಾಳ್​ ಕಿಡಿಕಿಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್