ನಿಯಮ ಉಲ್ಲಂಘನೆ ಆಗಿಲ್ಲ, ಥ್ಯಾಂಕ್ಸ್ ಕುಮಾರಸ್ವಾಮಿ: ಸಿಎಂ ಯಡಿಯೂರಪ್ಪ!

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್​ಡೌನ್ 2.0 ಜಾರಿಯಲ್ಲಿರುವಾಗ ಸೋಮವಾರದಿಂದ ರಾಜ್ಯದಲ್ಲಿ ಏನೆಲ್ಲ ಸೇವೆಗಳು ಇರುತ್ತವೆ. ಯಾವ ಕ್ಷೇತ್ರಗಳು ಕಾರ್ಯಗತವಾಗಬಹುದು ಎಂಬುದರ ಬಗ್ಗೆ ಸರ್ಕಾರದ ನಿರ್ಧಾರವನ್ನು ತಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಇದೀಗತಾನೆ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಪುತ್ರನ ವಿವಾಹ ವಿಚಾರವನ್ನು ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ, ಅವರ ಕುಟುಂಬ ಅತ್ಯಂತ ದೊಡ್ಡ ಕುಟುಂಬ. ಸರ್ಕಾರದಿಂದ ಅನುಮತಿ‌ ಪಡೆದು ಮದುವೆ ಮಾಡಿದ್ದಾರೆ. ಅನುಮತಿಯಂತೆ ಅತ್ಯಂತ ಕಡಿಮೆ ಜನರು ಭಾಗವಹಿಸಿದ್ದರು. ಯಾವುದೇ ನಿಯಮ […]

ನಿಯಮ ಉಲ್ಲಂಘನೆ ಆಗಿಲ್ಲ, ಥ್ಯಾಂಕ್ಸ್ ಕುಮಾರಸ್ವಾಮಿ: ಸಿಎಂ ಯಡಿಯೂರಪ್ಪ!
ಸಾಧು ಶ್ರೀನಾಥ್​

Updated on: Apr 18, 2020 | 3:17 PM

ಬೆಂಗಳೂರು: ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್​ಡೌನ್ 2.0 ಜಾರಿಯಲ್ಲಿರುವಾಗ ಸೋಮವಾರದಿಂದ ರಾಜ್ಯದಲ್ಲಿ ಏನೆಲ್ಲ ಸೇವೆಗಳು ಇರುತ್ತವೆ. ಯಾವ ಕ್ಷೇತ್ರಗಳು ಕಾರ್ಯಗತವಾಗಬಹುದು ಎಂಬುದರ ಬಗ್ಗೆ ಸರ್ಕಾರದ ನಿರ್ಧಾರವನ್ನು ತಿಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಇದೀಗತಾನೆ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಪುತ್ರನ ವಿವಾಹ ವಿಚಾರವನ್ನು ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ, ಅವರ ಕುಟುಂಬ ಅತ್ಯಂತ ದೊಡ್ಡ ಕುಟುಂಬ. ಸರ್ಕಾರದಿಂದ ಅನುಮತಿ‌ ಪಡೆದು ಮದುವೆ ಮಾಡಿದ್ದಾರೆ. ಅನುಮತಿಯಂತೆ ಅತ್ಯಂತ ಕಡಿಮೆ ಜನರು ಭಾಗವಹಿಸಿದ್ದರು. ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ. ಲಾಕ್‌ಡೌನ್ ಪಾಲಿಸಿದ್ದಕ್ಕೆ ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸುವೆ ಎಂದು ಹೇಳಿದರು.

Published On - 3:15 pm, Sat, 18 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us