AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ, 4 ದಶಕಗಳ ಕನಸಿಗೆ ಬಂತು ‘ರೆಕ್ಕೆ’ಪುಕ್ಕ

ಕಲಬುರಗಿ: ಕಲ್ಯಾಣ ಕರ್ನಾಟಕ ಜನರ ದಶಕಗಳ ಕನಸು ನನಸಾಗುವ ದಿನ ಬಂದೇ ಬಿಟ್ಟಿದೆ. ವಿಶಾಲ ಭೂಪ್ರದೇಶದಲ್ಲಿ ನಿರ್ಮಾಣಗೊಂಡಿರೋ ಕಲಬುರಗಿ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳಲಿದೆ. ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಇಂದಿನಿಂದ ಕಾರ್ಯಾರಂಭ ಮಾಡಲಿದೆ. ಸ್ಟಾರ್​ಏರ್ ಕಂಪನಿಯ ಮೊದಲ ವಿಮಾನ ಇಂದು ಬೆಂಗಳೂರಿನಿಂದ ಹೊರಟು ಕಲಬುರಗಿಯಲ್ಲಿ ಲ್ಯಾಂಡ್ ಆಗಲಿದೆ. ಪ್ರತಿದಿನ ಒಂದು ವಿಮಾನ ಕಲಬುರಗಿಯಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ಕಲಬುರಗಿಗೆ ಹಾರಾಟ ನಡೆಸಲಿದೆ. ಅಡಿಗಲ್ಲು ಹಾಕಿದ್ದ ಯಡಿಯೂರಪ್ಪರಿಂದಲೇ ಉದ್ಘಾಟನೆ: ಹೌದು, […]

ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ, 4 ದಶಕಗಳ ಕನಸಿಗೆ ಬಂತು ‘ರೆಕ್ಕೆ’ಪುಕ್ಕ
ಸಾಧು ಶ್ರೀನಾಥ್​
|

Updated on:Nov 22, 2019 | 6:40 AM

Share

ಕಲಬುರಗಿ: ಕಲ್ಯಾಣ ಕರ್ನಾಟಕ ಜನರ ದಶಕಗಳ ಕನಸು ನನಸಾಗುವ ದಿನ ಬಂದೇ ಬಿಟ್ಟಿದೆ. ವಿಶಾಲ ಭೂಪ್ರದೇಶದಲ್ಲಿ ನಿರ್ಮಾಣಗೊಂಡಿರೋ ಕಲಬುರಗಿ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳಲಿದೆ. ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ ಇಂದಿನಿಂದ ಕಾರ್ಯಾರಂಭ ಮಾಡಲಿದೆ.

ಸ್ಟಾರ್​ಏರ್ ಕಂಪನಿಯ ಮೊದಲ ವಿಮಾನ ಇಂದು ಬೆಂಗಳೂರಿನಿಂದ ಹೊರಟು ಕಲಬುರಗಿಯಲ್ಲಿ ಲ್ಯಾಂಡ್ ಆಗಲಿದೆ. ಪ್ರತಿದಿನ ಒಂದು ವಿಮಾನ ಕಲಬುರಗಿಯಿಂದ ಬೆಂಗಳೂರಿಗೆ, ಬೆಂಗಳೂರಿನಿಂದ ಕಲಬುರಗಿಗೆ ಹಾರಾಟ ನಡೆಸಲಿದೆ.

ಅಡಿಗಲ್ಲು ಹಾಕಿದ್ದ ಯಡಿಯೂರಪ್ಪರಿಂದಲೇ ಉದ್ಘಾಟನೆ: ಹೌದು, ಕಲಬುರಗಿ ಏರ್​ಪೋರ್ಟ್ ಕಾಮಗಾರಿಗೆ 2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅಡಿಗಲ್ಲು ಹಾಕಿದ್ರು. ಇದೀಗ 11 ವರ್ಷಗಳ ಬಳಿಕ ಅವರೇ ವಿಮಾನ ನಿಲ್ದಾಣವನ್ನ ಉದ್ಘಾಟನೆ ಕೂಡ ಮಾಡ್ತಿದ್ದಾರೆ. ಬೆಂಗಳೂರಿನಿಂದ ಕಲಬುರಗಿಗೆ ವಿಮಾನದಲ್ಲಿ ಆಗಮಿಸಲಿರೋ ಸಿಎಂ ಮತ್ತು ಸಚಿವರು ಅದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಏರ್​ಪೋರ್ಟ್​ನ ವಿಶೇಷತೆಗಳು: ಕಲಬುರಗಿ ವಿಮಾನ ನಿಲ್ದಾಣವು ರಾಜ್ಯದ 6ನೇ ನಾಗರಿಕ ವಿಮಾನ ನಿಲ್ದಾಣವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಮೊದಲ ನಾಗರಿಕ ವಿಮಾನ ನಿಲ್ದಾಣವಾಗಿದೆ. ರಾಜ್ಯದ 2ನೇ ಅತಿ ಉದ್ದದ ರನ್​ವೇ ಹೊಂದಿದ್ದು, ಇದರ ಉದ್ದ 3.25 ಕಿ.ಮೀ. ಇದೆ. ಈ ಏರ್​ಪೋರ್ಟ್​ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿದೆ.

ವಿಮಾನ ನಿಲ್ದಾಣಕ್ಕೆ ಹೆಸರಿಡುವ ಬಗ್ಗೆ ತಿಕ್ಕಾಟ ಶುರುವಾಗಿದ್ದು, ನೃಪತುಂಗ, ಸಂತ ಸೇವಾಲಾಲ್‌, ಶರಣಬಸವೇಶ್ವರ, ಅಂಬೇಡ್ಕರ್ ಹೆಸರುಗಳು ಹರಿದಾಡ್ತಿವೆ. ಸದ್ಯ ಕಲಬುರಗಿಯಿಂದ ಬೆಂಗಳೂರು, ನವದೆಹಲಿ, ತಿರುಪತಿ ಹಾಗೂ ಮುಂಬೈಗೆ ತೆರಳಲು ಬೇಡಿಕೆ ಹೆಚ್ಚಿದೆ.

ಇನ್ನು ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟ ರೈತರಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ ಅನ್ನೋ ಆರೋಪ ಇದೆ. ಜೊತೆಗೆ ವಿಮಾನ ನಿಲ್ದಾಣ ನಿರ್ಮಾಣದಲ್ಲಿ ಸಾಕಷ್ಟು ಶ್ರಮಹಾಕಿದ್ದ ಮಲ್ಲಿಕಾರ್ಜುನ ಖರ್ಗೆ ಉದ್ಘಾಟನೆ ವೇಳೆ ಕಡೆಗಣಿಸಲಾಗಿದೆ ಅನ್ನೋ ಮಾತುಗಳು ಕೇಳಿಬಂದಿವೆ.

Published On - 6:39 am, Fri, 22 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ