AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘HDKಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆ ಆಗಿದೆ’ ಸಚಿವ ರಾಮುಲು ಹೀಗೆ ಗುಡುಗಿದ್ಯಾಕೆ?

ಬಾಗಲಕೋಟೆ: ಒಂದಡಿ ನೀರಿನ ಟ್ಯಾಂಕ್​ನಲ್ಲಿ ಕಾಲು ಜಾರಿ ಬಿದ್ದು ಸಾಯಲು ಸಾಧ್ಯವೇ? ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನ ಬಗ್ಗೆ ಪ್ರಶ್ನೆ ಎತ್ತಿದ ಹೆಚ್​ಡಿ ಕುಮಾರಸ್ವಾಮಿ ಅವರನ್ನ ಸಚಿವ ಶ್ರೀರಾಮುಲು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪ ವ್ಯಯಕ್ತಿಕ ವಿಚಾರ ಎತ್ತಿದ ಕುಮಾರಸ್ವಾಮಿ ವಿರುದ್ಧ ಬಾಗಲಕೋಟೆಯಲ್ಲಿ ರಾಮುಲು ತೀವ್ರ ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆ ಆಗಿದೆ. ಅದು ಅವ್ರ ಸಂಸ್ಕಾರವನ್ನು ತಿಳಿಸುತ್ತದೆ. ಅವ್ರೊಬ್ಬ ಮಾಜಿ ಪ್ರಧಾನ ಮಂತ್ರಿ ಮಗ ಅನ್ನೋದನ್ನ ಮರೆಯಬಾರದು. […]

‘HDKಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆ ಆಗಿದೆ' ಸಚಿವ ರಾಮುಲು ಹೀಗೆ ಗುಡುಗಿದ್ಯಾಕೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 21, 2019 | 3:50 PM

Share

ಬಾಗಲಕೋಟೆ: ಒಂದಡಿ ನೀರಿನ ಟ್ಯಾಂಕ್​ನಲ್ಲಿ ಕಾಲು ಜಾರಿ ಬಿದ್ದು ಸಾಯಲು ಸಾಧ್ಯವೇ? ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನ ಬಗ್ಗೆ ಪ್ರಶ್ನೆ ಎತ್ತಿದ ಹೆಚ್​ಡಿ ಕುಮಾರಸ್ವಾಮಿ ಅವರನ್ನ ಸಚಿವ ಶ್ರೀರಾಮುಲು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಯಡಿಯೂರಪ್ಪ ವ್ಯಯಕ್ತಿಕ ವಿಚಾರ ಎತ್ತಿದ ಕುಮಾರಸ್ವಾಮಿ ವಿರುದ್ಧ ಬಾಗಲಕೋಟೆಯಲ್ಲಿ ರಾಮುಲು ತೀವ್ರ ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆ ಆಗಿದೆ. ಅದು ಅವ್ರ ಸಂಸ್ಕಾರವನ್ನು ತಿಳಿಸುತ್ತದೆ. ಅವ್ರೊಬ್ಬ ಮಾಜಿ ಪ್ರಧಾನ ಮಂತ್ರಿ ಮಗ ಅನ್ನೋದನ್ನ ಮರೆಯಬಾರದು. ಯಾರ ಬಗ್ಗೆಯೂ ವೈಯಕ್ತಿಕ ಟೀಕೆ ಮಾಡಬಾರದು. ಯಡಿಯೂರಪ್ಪ ಬಗ್ಗೆ ಮಾತನಾಡಲು ಹೆಚ್​ಡಿಕೆಗೆ ಯಾವ ನೈತಿಕತೆಯೂ ಇಲ್ಲ ಎಂದು ಎಚ್ಚರಿಸಿದ್ದಾರೆ.

‘ನೀವೊಬ್ಬ ಸಣ್ಣ ರಾಜಕಾರಣಿ, ನೀನೊಬ್ಬ ಹುಡುಗ’ ಯಡಿಯೂರಪ್ಪ ಆಗಲಿ, ಅವ್ರ ಕುಟುಂಬದವ್ರ ತಂಟೆಗೆ ಹೋಗೊ ಕೆಲಸ ಮಾಡಬೇಡಿ. ಇದನ್ನು ನಾನು ತುಂಬಾ ಸೀರಿಯಸ್ಸಾಗಿ ಹೇಳ್ತಿದೀನಿ ಎನ್ನುತ್ತಾ, ಹೆಚ್​ಡಿಕೆ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಶ್ರೀರಾಮುಲು… 40 ವರ್ಷ ರಾಜಕಾರಣದಲ್ಲಿ ದುಡಿದ ಯಡಿಯೂರಪ್ಪ ಬಗ್ಗೆ ಮಾತಾಡ್ತೀರಾ? ನೀವೊಬ್ಬ ಸಣ್ಣ ರಾಜಕಾರಣಿ, ನೀನೊಬ್ಬ ಹುಡುಗ. ಲಾಸ್ಟ್ ಬೆಂಚ್​ನಲ್ಲಿ ಕುಂತ ನೀವು ಪ್ರಧಾನಮಂತ್ರಿ ಮಗ ಅನ್ನೋ ಕಾರಣಕ್ಕೆ ಸಿಎಂ ಆಗಿದ್ರಿ. ಯಡಿಯೂರಪ್ಪ ಆಗಲ್ಲ, ಹೋರಾಟ ಮಾಡಿ ಸಿಎಂ ಆದವ್ರು. ನಿಮ್ಮ ತಂದೆಗೆ ಎಷ್ಟು ಅನುಭವ ಇದೆಯೋ, ಅಷ್ಟೇ ಅನುಭವ ಯಡಿಯೂರಪ್ಪಗೆ ಇದೆ. ಅವ್ರ ತಂದೆ ರಾಜಕಾರಣದಲ್ಲಿ ಎಷ್ಟು ಚತುರತೆ ಹೊಂದಿದ್ದಾರೋ, ಅಷ್ಟೇ ಚತುರತೆ ಯಡಿಯೂರಪ್ಪ ಹೊಂದಿದ್ದಾರೆ. 40 ವರ್ಷಗಳ ಕಾಲ ಹೋರಾಟ ಮಾಡಿ ಮೂರು ಬಾರಿ ಸಿಎಂ ಆಗಿದ್ದಾರೆ. ಯಡಿಯೂರಪ್ಪ ಬಗ್ಗೆ ರಾಜಕೀಯವಾಗಿ ಟೀಕೆ ಮಾಡಿ, ಆದ್ರೆ ಅವ್ರ ಕುಟುಂಬದ ಬಗ್ಗೆ ಮಾತನಾಡಬೇಡಿ ಎಂದರು.

‘ಸಿರಿಯಸ್ ಆಗಿ ಹೇಳ್ತೀದೀನಿ..’ ನಿಮಗೆ ಸಿರಿಯಸ್ ಆಗಿ ಹೇಳ್ತೀದಿನಿ. ನೀವು ಇದೇ ತರ ಮುಂದುವರೆಸಿದ್ರೆ, ಮುಂದಿನ ಪೀಳಿಗೆಗೆ ಕೆಟ್ಟ ಸಂಪ್ರದಾಯ ಹಾಕಿದಂತಾಗುತ್ತದೆ. ನೀವು ಯಡಿಯೂರಪ್ಪ ಕುಟುಂಬದ ಬಗ್ಗೆ ಮಾತನಾಡ್ತೀರಿ. ಹಂಗಾಗೋದಿಲ್ಲ, ಹಂಗಾಗೋಕೆ ನಾವು ಬಿಡೋ ಪ್ರಶ್ನೆಯೂ ಇಲ್ಲ. ರಾಜಕಾರಣ ಇರಬಹುದು, ಹೋಗಬಹುದು. ಯಾವುದೂ ಶಾಶ್ವತ ಅಲ್ಲ. ಕುಟುಂಬವನ್ನು ರಾಜಕಾರಣಕ್ಕೆ ಎಳೆದು ತರಬೇಡಿ. ನಿಮ್ಮ ಉದ್ದೇಶ ಏನೇ ಇರಲಿ, ರಾಜಕಾರಣಕ್ಕೆ ಕುಟುಂಬವನ್ನು ಎಳೆದು ತರಬಾರದು ಎಂದು ಮಗದೊಮ್ಮೆ ಆರೋಗ್ಯ ಸಚಿವ ಶ್ರೀರಾಮುಲು ಖಂಡತುಂಡವಾಗಿ ಹೇಳಿದರು. ಕುಮಾರಸ್ವಾಮಿ ಮತ್ತೆ ಸಿಎಂ ಆಗ್ತಾರಾ? ಅವ್ರ ಶಕ್ತಿ ಇದ್ರೆ ಆಗಲಿ. ನಾವು ಬೇಡ ಅನ್ನಲ್ಲ. ಆದ್ರೆ ಯಡಿಯೂರಪ್ಪ ಕುಟುಂಬದ ಮಾತನಾಡೋದು ಸರಿಯಲ್ಲ, ನಿಮಗೆ ಪದೇ ಪದೇ ಹೇಳ್ತೀನಿ ಎಂದು ಎಚ್ಚರಿಕೆ ಮಿಶ್ರಿತ ದನಿಯಲ್ಲಿ ರಾಮುಲು ಕುಮಾರಸ್ವಾಮಿಗೆ ವಾರ್ನ್​ ಮಾಡಿದರು.

Published On - 6:41 pm, Fri, 20 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ