AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ರಾಜ ಇದ್ದಂತೆ.. ಕೇಳುವುದು ಪ್ರಜೆಗಳ ಹಕ್ಕು, ಕೊಡುವ ಧರ್ಮ ಅವರದ್ದು- ನಿರಂಜನಾನಂದಪುರಿ ಶ್ರೀ

ಕುರುಬರಿಗೆ ಎಸ್​​ಟಿ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ಅಗತ್ಯವಿಲ್ಲ. ಒಂದು ವೇಳೆ ಕುಲಶಾಸ್ತ್ರ ಅಧ್ಯಯನ ಬೇಕು ಎಂದರೆ ಅದಕ್ಕೂ ಸಿದ್ಧ ಎಂದರು ನಿರಂಜನಾನಂದಪುರಿ ಶ್ರೀ.

ಯಡಿಯೂರಪ್ಪ ರಾಜ ಇದ್ದಂತೆ.. ಕೇಳುವುದು ಪ್ರಜೆಗಳ ಹಕ್ಕು, ಕೊಡುವ ಧರ್ಮ ಅವರದ್ದು- ನಿರಂಜನಾನಂದಪುರಿ ಶ್ರೀ
ನಿರಂಜನಾನಂದ ಪುರಿ ಸ್ವಾಮೀಜಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 10, 2021 | 8:20 PM

Share

ದಾವಣಗೆರೆ: ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕು ಎನ್ನುವ ಕುರಿತು ನಾವು ನಡೆಸಿದ ಪಾದಯಾತ್ರೆ ಸಾರ್ಥಕವಾಗಿದೆ. ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ರಾಜ ಇದ್ದಂತೆ. ಬೇಡುವುದು ಪ್ರಜೆಗಳಾದ ನಮ್ಮ ಹಕ್ಕು. ಅವರಿಗೆ ಕೊಡುವ ಧರ್ಮವಿದೆ. ಯಡಿಯೂರಪ್ಪ ನ್ಯಾಯ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀ ಹೇಳಿದ್ದಾರೆ.

ಇಂದು ಪಾದಯಾತ್ರೆ ಮುಗಿಸಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠಕ್ಕೆ ಮರಳಿದ ನಿರಂಜನಾನಂದಪುರಿ ಶ್ರೀ ಈ ಹೇಳಿಕೆ ನೀಡಿದ್ದಾರೆ. ಬೇರೆ ಸ್ವಾಮೀಜಿಗಳಂತೆ ನಾನು ಡೆಡ್​​ಲೈನ್​ ಕೊಡುವುದಿಲ್ಲ. ಫೆಬ್ರವರಿ 14ರಂದು ಗೃಹ ಸಚಿವರ ಜೊತೆಗೆ ಮಾತುಕತೆ ಇದೆ. ಹೋರಾಟ ಸಮಿತಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಹೇಳಿದಾಗ ಭಕ್ತರು ಹೋರಾಟಕ್ಕೆ ಸಜ್ಜಾಗಿರಬೇಕು ಎಂದು ಕರೆ ನೀಡಿದ್ದಾರೆ.

ಕುರುಬರಿಗೆ ಎಸ್​​ಟಿ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ಅಗತ್ಯವಿಲ್ಲ. ಒಂದು ವೇಳೆ ಕುಲಶಾಸ್ತ್ರ ಅಧ್ಯಯನ ಬೇಕು ಎಂದರೆ ಅದಕ್ಕೂ ಸಿದ್ಧ. ಈಗಾಗಲೇ ಕುಲಶಾಸ್ತ್ರ ಅಧ್ಯಯನ ಶೇ.90 ರಷ್ಟು ಮುಕ್ತಾಯವಾಗಿದೆ. ಒಂದೆರಡು ತಿಂಗಳಲ್ಲಿ ಸಂಪೂರ್ಣವಾಗಿ ವರದಿ ಸಿದ್ಧವಾಗಲಿದೆ ಎಂದರು.

ಇನ್ನು, ಎಸ್​​ಟಿ ಮೀಸಲಾತಿ ಪಾದಯಾತ್ರೆಗೆ ಸಿದ್ದರಾಮಯ್ಯ ಬೆಂಬಲ ಸೂಚಿಸಿರಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿ ಮಾತನಾಡಿರುವ ನಿರಂಜನಾನಂದಪುರಿ ಶ್ರೀ, ಸಿದ್ದು ಅಹಿಂದ ನಾಯಕ. ಅವರು ಒಂದು ಜಾತಿಗೆ ಮಾತ್ರ ಸೀಮಿತ ಆಗುವುದಿಲ್ಲ. ಅವರದ್ದೇ ಆದ ಸೈದ್ಧಾಂತಿಕ ನಿಲುವುಗಳಿವೆ. ಅವರನ್ನ ಒಂದು ಜಾತಿಗೆ ಸೀಮಿತ ಮಾಡುವುದು ಬೇಡ ಎಂದರು.

ಇದನ್ನೂ ಓದಿ:    ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಕಾಗಿನೆಲೆ ನಿರಂಜನಾನಂದಪುರಿ ಶ್ರೀ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು