AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka ByElection 2021; ನಾಳೆಯಿಂದ ಬೆಳಗಾವಿಯಲ್ಲಿ ಪ್ರಚಾರ ನಡೆಸಲಿರುವ ಬಿ.ಎಸ್​ ಯಡಿಯೂರಪ್ಪ

ಏಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ 6.45ರ ವೇಳೆಗೆ ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಲಿದ್ದಾರೆ.

Karnataka ByElection 2021; ನಾಳೆಯಿಂದ ಬೆಳಗಾವಿಯಲ್ಲಿ ಪ್ರಚಾರ ನಡೆಸಲಿರುವ ಬಿ.ಎಸ್​ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
shruti hegde
| Edited By: |

Updated on: Apr 06, 2021 | 9:44 AM

Share

ಬೆಳಗಾವಿ: ಏಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ 6.45ರ ವೇಳೆಗೆ ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಲಿದ್ದಾರೆ. ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ನಿಟ್ಟಿನಲ್ಲಿ ಬಿ.ಎಸ್​ ಯಡಿಯೂರಪ್ಪ ತೆರಳಲಿದ್ದು, ಸಚಿವರಾದ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ ಸೇರಿ ಹಲವು ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಇಂದು ಖಾಸಗಿ ಹೊಟೆಲ್​ ಒಂದರಲ್ಲಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ರಾಮದುರ್ಗ, ಸವದತ್ತಿ, ಬೈಲಹೊಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಲಿದ್ದು, ಲಿಂಗಾಯತ ಸಮುದಾಯ ಹೆಚ್ಚಾಗಿರುವ ಕ್ಷೇತ್ರದ ಕಡೆ ಮತ ಪ್ರಚಾರ ಮಾಡುವ ನಿಟ್ಟಿನಲ್ಲಿ ಬಿ.ಎಸ್​ ಯಡಿಯೂರಪ್ಪ ಪ್ರಚಾರ ಸಭೆ ಕೈಗೊಂಡಿದ್ದಾರೆ.

ಸಾಲಹಳ್ಳಿ ಬಬಲಾದಿ ಮಠದ ಆವರಣದಲ್ಲಿ ಸಮಾವೇಶ ನಡೆಯಲಿದೆ. ಬಳಿಕ ಸವದತ್ತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯರಗಟ್ಟಿಗೆ ತೆರಳಲಿದ್ದಾರೆ. ನಾಳೆ ಮಧ್ಯಾಹ್ನ 1.30ಕ್ಕೆ ಯರಗಟ್ಟಿಯಲ್ಲಿ ಚುನಾವಣಾ ಪ್ರಚಾರ ಮಾಡಿದ ಬಳಿಕ ಬೈಲಹೊಂಗಲ ತಾಲೂಕಿನ ಇಂಚಲಕ್ಕೆ ಪ್ರಯಾಣ ನಡೆಸಲಿದ್ದಾರೆ. ಸಂಜೆ 4.30ರ ವೇಳೆಯಲ್ಲಿ ಇಂಚಲದ ಶಿವಯೋಗೇಶ್ವರ ಪಿಯು ಕಾಲೇಜು ಆವರಣದಲ್ಲಿ ಪ್ರಚಾರ ಸಭೆ ಕೈಗೊಳ್ಳಲಿದ್ದು, ಬಳಿಕ ನಾಳೆ ಸಂಜೆ 7.20ಕ್ಕೆ ಸಾಂಬ್ರಾ ವಿಮಾನ‌‌ ನಿಲ್ದಾಣದಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಇದನ್ನೂ ಓದಿ: Karnataka ByElection 2021: ಕಾಂಗ್ರೆಸ್​ಗೆ ಬೈ ಬೈ, ಬಿಜೆಪಿಗೆ ಜೈಜೈ ಎಂದ ಕಾಂಗ್ರೆಸ್​ ಮುಖಂಡ ಲಖನ್ ಜಾರಕಿಹೊಳಿ

Karnataka ByElection 2021: ಕರ್ನಾಟಕ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ ; ಏಪ್ರಿಲ್ 17ರಂದು ನಡೆಯಲಿದೆ ಚುನಾವಣೆ

(BS Yediyurappa will participate in Karnataka ByElection 2021 campaign in Belagavi)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!