AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend Curfew: ವಾರಾಂತ್ಯದ ಕರ್ಫ್ಯೂ ವೇಳೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಷರತ್ತುಬದ್ಧ ಅನುಮತಿ

Revised Guidelines; ವಾರಾಂತ್ಯದ ಕರ್ಫ್ಯೂವಿನ ದಿನಗಳಲ್ಲಿ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದರೆ ನಿರ್ಮಾಣ ಕಾಮಗಾರಿ ನಡೆಸಬಹುದಾಗಿದೆ. ಆದರೆ ಹೊರಗಿನಿಂದ ಕಾರ್ಮಿಕರನ್ನು ಕರೆತರಬಾರದು ಎಂದು ನೂತನ ಮಾರ್ಗಸೂಚಿ ತಿಳಿಸಿದೆ.

Weekend Curfew: ವಾರಾಂತ್ಯದ ಕರ್ಫ್ಯೂ ವೇಳೆ  ಕಟ್ಟಡ ನಿರ್ಮಾಣ ಕಾಮಗಾರಿಗೆ ಷರತ್ತುಬದ್ಧ ಅನುಮತಿ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: Apr 23, 2021 | 8:39 PM

Share

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ವೇಳೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡಿ ಪರಿಷ್ಕೃತ ಮಾರ್ಗಸೂಚಿಯನ್ನು ಕರ್ನಾಟಕ ರಾಜ್ಯ ಬಿಡುಗಡೆಗೊಳಿಸಿದೆ. ಈ ಮೂಲಕ ರಾಜ್ಯ ಸರ್ಕಾರ ತಾನು ರೂಪಿಸಿದ್ದ ಇನ್ನೊಂದು ನಿಯಮವನ್ನು ಸ್ವತಃ ಸಡಿಲಿಸಿದಂತಾಗಿದೆ. ವಾರಾಂತ್ಯದ ಕರ್ಫ್ಯೂವಿನ ದಿನಗಳಲ್ಲಿ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದರೆ ನಿರ್ಮಾಣ ಕಾಮಗಾರಿ ನಡೆಸಬಹುದಾಗಿದೆ. ಆದರೆ ಹೊರಗಿನಿಂದ ಕಾರ್ಮಿಕರನ್ನು ಕರೆತರಬಾರದು ಎಂದು ನೂತನ ಮಾರ್ಗಸೂಚಿ ತಿಳಿಸಿದೆ.

ಕೇವಲ ತುರ್ತು ಸಂದರ್ಭ ಮತ್ತು ಅಗತ್ಯ ವಸ್ತುಗಳ ಖರೀದಿಗೆ ಹೊರತುಪಡಿಸಿ ಬೇರೆ ಯಾವ ಕಾರಣಕ್ಕೂ ಜನ ಮನೆಬಿಟ್ಟು ಆಚೆ ಬಾರದಂತೆ ಸರ್ಕಾರ ಆಗ್ರಹಿಸಿದೆ. ಸರ್ಕಾರ ವಿಧಿಸಿರುವ ವಾರಾಂತ್ಯದ ಲಾಕ್​ಡೌನ್ ಇಂದಿನಿಂದ ಅಂದರೆ ಶುಕ್ರವಾರದಿಂದ ಜಾರಿಗೆ ಬಂದಿದ್ದು, ಉಳಿದ ದಿನಗಳಲ್ಲಿ ರಾತ್ರಿ ಕರ್ಪ್ಯೂಗೆ ಸಂಬಂಧಿಸಿದ ಎಲ್ಲ ನಿಯಮಗಳು ಅನ್ವಯವಾಗುತ್ತವೆ.

ಹಾಗಾದರೆ, ಈ ವೀಕೆಂಡ್ ಕರ್ಪ್ಯೂ ಯಾರಿಗೆಲ್ಲ ಅನ್ವಯವಾಗುತ್ತದೆ, ಯಾರು ಮನೆಬಿಟ್ಟು ಆಚೆ ಬರಬಹುದು ಎಂಬ ಮಾಹಿತಿ ಇಲ್ಲಿದೆ. 

ಅಗತ್ಯ ಸೇವೆಗಳ ಇಲಾಖೆಗಳಲ್ಲಿರುವ ಸರ್ಕಾರಿ ನೌಕರರು ಕೆಲಸಕ್ಕೆ ಹೋಗಬಹುದೇ? ಹೌದು, ಖಂಡಿತವಾಗಿ ಅವರು ಹೋಗಬಹುದು. ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಉದ್ಯೋಗಿಗಳು, 24×7 ಕೆಲಸ ಮಾಡುವ ಕಾರ್ಖಾನೆ ಮತ್ತು ಸಂಸ್ಥೆಗಳ ನೌಕರರು ವಾರಾಂತ್ಯದ ಕರ್ಫ್ಯೂನಲ್ಲೂ ಕೆಲಸಕ್ಕೆ ಹೋಗಬಹುದಾಗಿದೆ. ಅದರೆ ಕೆಲಸಕ್ಕೆ ಹೋಗುವಾಗ ಅವರು ತಾವು ಕೆಲಸ ಮಾಡುವ ಸಂಸ್ಥೆಯ ಗುರುತಿನ ಕಾರ್ಡ್​ ಅನ್ನು ತಮ್ಮೊಂದಿಗೆ ಇಟ್ಟುಕೊಂಡಿರಬೇಕು.

ವಾರಾಂತ್ಯದ ಲಾಕ್​ಡೌನ್​ನಲ್ಲಿ ಯಾರೆಲ್ಲ ಮನೆಯಿಂದ ಆಚೆ ಬರಬಹುದು? ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯ ಪ್ರಕಾರ ಕೇವಲ ಟೆಲಿಕಾಮ್/ಇಂಟರ್ನೆಟ್ ಸೇವೆ ಒದಗಿಸುವ ಉದ್ಯೋಗಿಗಳು ಮಾತ್ರ ತಮ್ಮ ಗುರುತಿನ ಚೀಟಿಯೊಂದಿಗೆ ಆಚೆ ಬರಬಹುದು. ಐಟಿ/ ಐಟಿಇಎಸ್ ಸಂಸ್ಥೆಗಳ ಅಗತ್ಯ ಸೇವೆಗಳ ವಿಭಾಗಗಳಲ್ಲಿ ಕೆಲಸ ಮಾಡುವವರು ಕಚೇರಿಗಳಿಗೆ ಹೋಗಿ ಕೆಲಸ ಮಾಡಬಹುದು ಆದರೆ ಉಳಿದವರು ತಮ್ಮ ಮನೆಗಳಿಂದಲೇ ಕೆಲಸ (ವರ್ಕ್​ ಫ್ರಂ ಹೋಮ್) ಮಾಡಬೇಕು. ಹಾಗೆಯೇ, ಲಸಿಕೆ ಹಾಕಿಸಿಕೊಳ್ಳಲು ಅರ್ಹರಿರುವ ಜನ ತಮ್ಮ ಗುರುತಿನ ಚೀಟಿಗಳೊಂದಿಗೆ ಮನೆಯಿಂದ ಆಚೆ ಬಂದು ಲಸಿಕಾ ಕೇಂದ್ರಗಳಿಗೆ ಹೋಗಬಹುದು.

ಅಸ್ವಸ್ಥರು ಆಸ್ಪತ್ರೆಗಳಿಗೆ ಹೋಗಬಹುದೇ? ಹೌದು. ಅಸ್ವಸ್ಥರು ಮತ್ತು ಪ್ರಯಾಣಿಸಲೇಬೇಕಾದ ಅನಿವಾರ್ಯತೆ ಇರುವವರು ವಾರಾಂತ್ಯದ ಲಾಕ್​ಡೌನ್​ನಲ್ಲಿ ಆಚೆ ಬರಬಹುದೆಂದು ಸರ್ಕಾರ ಸ್ಪಷ್ಟಪಡಿಸಿದೆ. ಹಾಗೆಯೇ, ವೈದ್ಯಕೀಯ ನೆರವಿನ ಅಗತ್ಯವಿರುವವರು ಸಹ ಮನೆಯಿಂದ ಆಚೆ ಬರಬಹುದು.

ಕಿರಾಣಾ ಅಂಗಡಿಗಳು ತೆರೆದಿರುತ್ತವೆಯೇ, ಹಾಲಿನ ಸರಬರಾಜು ಹೇಗೆ? ಸರ್ಕಾರ ಜಾರಿಗೊಳಿಸಿರುವ ನಿಯಮಾವಳಿಗಳ ಪ್ರಕಾರ, ನಿಮ್ಮ ನೆರೆಹೊರೆಯ ಅಂಗಡಿಗಳು, ಹಾಲಿನ ಪಾರ್ಲರ್​ಗಳು ಶನಿವಾರ ಮತ್ತು ರವಿವಾರಗಳಂದು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತೆರೆದಿರುತ್ತವೆ. ಆದರೆ, ಅಗತ್ಯ ವಸ್ತುಗಳ ಆನ್​ಲೈನ್ ಸೇವೆ ಲಾಕ್​ಡೌನ್​ದುದ್ದಕ್ಕೂ ಜಾರಿಯಲ್ಲಿರುತ್ತದೆ.

ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್ ಓಡಾಟ ಇರಲ್ಲ ಟಿವಿ9 ಜೊತೆ ಮಾತಾಡಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಶಿಖಾ ಅವರು, ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್​ಗಳ ಸಂಚಾರ ಇರೋದಿಲ್ಲ ಅಂತ ತಿಳಿಸಿದ್ದಾರೆ.

ಮೆಟ್ರೋ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ಶನಿವಾರ ಮತ್ತು ಭಾನುವಾರ ಮೆಟ್ರೋ ಸಂಚಾರ ರದ್ದು ಮಾಡಲಾಗಿದೆ. ಆದರೆ, ಸೋಮವಾರದಿಂದ ಶುಕ್ರವಾರದವರೆಗೆ ಮೆಟ್ರೋ ಸೇವೆ ಎಂದಿನಂತೆ ಬೆಳಗ್ಗೆ 7 ಗಂಟೆಗ ಆರಂಭವಾಗಲಿದೆ ಎಂದು ಬಿಎಮ್​ಆರ್​ಸಿಎಲ್ ತನ್ನ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

(building construction works permitted on weekend curfew days in Karnataka state revised guidelines released)

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ